Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಬ್ಲೀಗಿ ಜಮಾಅತ್ ಮುಖ್ಯ ಕಾರ್ಯಾಲಯದ...

ತಬ್ಲೀಗಿ ಜಮಾಅತ್ ಮುಖ್ಯ ಕಾರ್ಯಾಲಯದ ಕೀಲಿಗಳನ್ನು ವಾಪಸ್ ಹಸ್ತಾಂತರಿಸಿ: ದಿಲ್ಲಿ ಪೊಲೀಸರಿಗೆ ಹೈಕೋರ್ಟ್ ಸೂಚನೆ

28 Nov 2022 5:50 PM IST
share
ತಬ್ಲೀಗಿ ಜಮಾಅತ್ ಮುಖ್ಯ ಕಾರ್ಯಾಲಯದ ಕೀಲಿಗಳನ್ನು ವಾಪಸ್ ಹಸ್ತಾಂತರಿಸಿ: ದಿಲ್ಲಿ ಪೊಲೀಸರಿಗೆ ಹೈಕೋರ್ಟ್ ಸೂಚನೆ

ಹೊಸದಿಲ್ಲಿ: ರಾಜಧಾನಿಯ ನಿಝಾಮುದ್ದೀನ್‍ನಲ್ಲಿರುವ (Nizamuddin) ತಬ್ಲೀಗಿ ಜಮಾಅತ್ (Tablighi Jamaat) ಮುಖ್ಯ ಕಾರ್ಯಾಲಯದ ಕೀಲಿಗಳನ್ನು ಮೌಲಾನಾ ಸಾದ್ (Maulana Saad) ಅವರಿಗೆ ಹಸ್ತಾಂತರಿಸುವಂತೆ ದಿಲ್ಲಿ ಹೈಕೋರ್ಟ್ ಇಂದು ಪೊಲಿಸರಿಗೆ ಆದೇಶಿಸಿದೆ. ತಬ್ಲೀಗಿ ಜಮಾಅತ್ ಮುಖ್ಯ ಕಾರ್ಯಾಲಯದ ಮೇಲೆ ನಿರ್ಬಂಧಗಳನ್ನು ಮುಂದುವರಿಸುವ ಕುರಿತ ದಿಲ್ಲಿ ಪೊಲೀಸರ ನಿಲುವನ್ನು ನ್ಯಾಯಾಲಯ ತಿರಸ್ಕರಿಸಿದೆ.

ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ನ್ಯಾಯಾಲಯವು ಕಟ್ಟಡದ  ಐದು ಅಂತಸ್ತುಗಳಲ್ಲಿ ರಮಝಾನ್ ತಿಂಗಳಿನಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಿತ್ತು. ನಂತರ ಮೇ ತಿಂಗಳಿನಲ್ಲಿ ಸಾರ್ವಜನಿಕರಿಗೆ ಕಟ್ಟಡಕ್ಕೆ ಪ್ರವೇಶಿಸಲು ಅನುಮತಿ ನೀಡಿದ್ದರೂ ಪ್ರಾರ್ಥನೆ ಉದ್ದೇಶಕ್ಕೆ ಅದು ಸೀಮಿತವಾಗಿತ್ತು. ಆದರೆ ಕಟ್ಟಡಕ್ಕೆ ಸಂಯೋಜಿತವಾಗಿರುವ ಮದರಸಾ ಮತ್ತು ಹಾಸ್ಟೆಲ್ ಕಟ್ಟಡ ಮಾರ್ಚ್ 2020 ರಿಂದ ಮುಚ್ಚಲ್ಪಟ್ಟಿತ್ತು.

ಯಾರಿಂದ ಮುಖ್ಯ ಕಾರ್ಯಾಲಯದ ಕೀಲಿಗಳನ್ನು ಪಡೆಯಲಾಗಿತ್ತೋ ಅವರಿಗೇ ಅದನ್ನು ಹಸ್ತಾಂತರಿಸಬೇಕು ಎಂದು ನ್ಯಾಯಾಲಯ ಹೇಳಿದೆ. "ಕಟ್ಟಡವನ್ನು ಇನ್ನೂ ನಿಮ್ಮ ವಶದಲ್ಲಿರಿಸಿಕೊಂಡಿದ್ದೀರಾ? ಯಾವ  ಸಾಮರ್ಥ್ಯದಲ್ಲಿ, ಸಾಂಕ್ರಾಮಿಕ ಕಾಯಿಲೆಗಳ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು, ಆದರೆ ಈಗ ಅದು ಮುಗಿದಿದೆ,'' ಎಂದು  ನ್ಯಾಯಾಲಯ ಹೇಳಿತು.

ಮರ್ಕಝ್ ಕಾರ್ಯಾಲಯದ ಕೀಲಿಗಳನ್ನು ಮೌಲಾನ ಸಾದ್ ಅವರಿಂದ ಪಡೆಯಲಾಗಿತ್ತು, ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದಾಗ,  ಮರ್ಕಝ್ ಆಡಳಿತದ ಪರ ವಕೀಲರು ಪ್ರತಿಕ್ರಿಯಿಸಿ ಸಾದ್ ಅವರು ನಿಝಾಮುದ್ದೀನ್‍ನಲ್ಲಿದ್ದಾರೆ ಹಾಗೂ ಅವರು ತಲೆಮರೆಸಿಕೊಂಡಿಲ್ಲ ಎಂದರು.

ಮರ್ಕಝ್ ಆಡಳಿತ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಮರ್ಕಝ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಪ್ರಶ್ನಿಸಿ ದಿಲ್ಲಿ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಮೇಲಿನ ಆದೇಶ ಹೊರಡಿಸಲಾಗಿದೆ.

share
Next Story
X