Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಬಂದರು ಯೋಜನೆ ವಿರೋಧಿ ಪ್ರತಿಭಟನೆ;...

ಅದಾನಿ ಬಂದರು ಯೋಜನೆ ವಿರೋಧಿ ಪ್ರತಿಭಟನೆ; ಪೊಲೀಸ್ ಠಾಣೆ ಮೇಲೆ ದಾಳಿ: 3000 ಕ್ಕೂ ಅಧಿಕ ಮಂದಿ ಮೇಲೆ ಎಫ್‌ಐಆರ್

28 Nov 2022 6:03 PM IST
share
ಅದಾನಿ ಬಂದರು ಯೋಜನೆ ವಿರೋಧಿ ಪ್ರತಿಭಟನೆ; ಪೊಲೀಸ್ ಠಾಣೆ ಮೇಲೆ ದಾಳಿ: 3000 ಕ್ಕೂ ಅಧಿಕ ಮಂದಿ ಮೇಲೆ ಎಫ್‌ಐಆರ್

ತಿರುವನಂತಪುರಂ: ವಿಝಿಂಜಂ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ 3000 ಕ್ಕೂ ಅಧಿಕ ಪ್ರತಿಭಟನಾಕಾರರ ಮೇಲೆ ಕಾನೂನುಬಾಹಿರ ಸಭೆ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಾಗಿದೆ. ಅದಾನಿ ಬಂದರಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ನಿರ್ಮಾಣ ಹಂತದಲ್ಲಿರುವ ಅದಾನಿ ಬಂದರಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ನಿನ್ನೆ ರಾತ್ರಿ ಕೇರಳ ರಾಜಧಾನಿ ತಿರುವನಂತಪುರದಿಂದ 20 ಕಿಮೀ ದೂರದಲ್ಲಿರುವ ಪೊಲೀಸ್‌ ಠಾಣೆಯ ಮೇಲೆ ಹಿಂಸಾತ್ಮಕ ಗುಂಪು ದಾಳಿ ಮಾಡಿದೆ. ಠಾಣೆಯನ್ನು ಧ್ವಂಸಗೊಳಿಸಿ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ್ದಕ್ಕಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 3,000 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಬಂದರು ಯೋಜನೆಯ ಸ್ಥಳಕ್ಕೆ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗಳನ್ನು ಪ್ರತಿಭಟನಾಕಾರರು ಶನಿವಾರ ತಡೆದಿದ್ದರು. ಕಳೆದ ವಾರ ನ್ಯಾಯಾಲಯದ ನಿರ್ದೇಶನದ ನಂತರ ಯೋಜನೆಯನ್ನು ನಿರ್ಮಿಸಲು ಅನುಮತಿ ನೀಡಲಾಗಿತ್ತು.

ಬಂದರಿನ ಯೋಜನೆಯು ಕರಾವಳಿಯ ಮಣ್ಣು ಸವೆತಕ್ಕೆ ಕಾರಣವಾಗುತ್ತಿದೆ ಹಾಗೂ ಕರಾವಳಿ ಮೀನುಗಾರರಾದ ತಮ್ಮ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ  ಎಂದು ಆರೋಪಿಸಿ ಕಳೆದ ಮೂರು ತಿಂಗಳಿನಿಂದ, ಬಹುತೇಕ ಕ್ಯಾಥೋಲಿಕ್ ಪಾದ್ರಿಗಳ ನೇತೃತ್ವದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಿರುವನಂಡಂನ ಲ್ಯಾಟಿನ್ ಆರ್ಚ್‌ಬಿಷಪ್ ಸೇರಿದಂತೆ ಮೀನುಗಾರರು ಮತ್ತು ಪಾದ್ರಿಗಳ ವಿರುದ್ಧ ಕೊಲೆ ಯತ್ನ, ಗಲಭೆ, ಅತಿಕ್ರಮಣ, ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ.  ಎಫ್‌ಐಆರ್‌ಗಳಲ್ಲಿ ದಾಖಲಾಗಿರುವ 100 ಕ್ಕೂ ಹೆಚ್ಚು ಜನರಲ್ಲಿ ಕನಿಷ್ಠ 15  ಮಂದಿ ಲ್ಯಾಟಿನ್ ಕ್ಯಾಥೋಲಿಕ್ ಪಾದ್ರಿಗಳು ಎಂದು ವರದಿಯಾಗಿದೆ.

ಯೋಜನಾ ಸ್ಥಳಕ್ಕೆ ಕಲ್ಲುಗಳನ್ನು ಸಾಗಿಸುತ್ತಿದ್ದ 25 ಟ್ರಕ್‌ಗಳನ್ನು ಕಷ್ಟಪಟ್ಟು ಸಾಗಿಸಬೇಕಾಯಿತು, ಇನ್ನೂ 25 ಟ್ರಕ್‌ಗಳನ್ನು ಬಂದರು ಆವರಣದಿಂದ ಹೊರಹೋಗಲು ಪ್ರತಿಭಟನಾಕಾರರು ಅನುಮತಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಇದರ ನಂತರ ಬಂದರು ಯೋಜನೆಯ ಬೆಂಬಲಿಗರು ಎಂದು ಹೇಳುವ ಗುಂಪಿನಿಂದ ಪ್ರತಿ-ಪ್ರತಿಭಟನೆ ನಡೆದಿದ್ದು,   ಕಲ್ಲು ತೂರಾಟ ಸೇರಿದಂತೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು. ಇದರಲ್ಲಿ ಅನೇಕ ಪೊಲೀಸರು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಂದರು ಯೋಜನೆಯನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹಿಂಸಾಚಾರದಲ್ಲಿ 40 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಹಲವಾರು ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಿಂದ ಸುಮಾರು ₹ 85 ಲಕ್ಷ ನಷ್ಟವಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

Policemen were brutally attacked and police vehicles were damaged by the miscreants, instigated by Catholic priests at Vizhinjam. Are these terrorist acts justified by the church? @Pontifex pic.twitter.com/tpr3aG12lG

— pratheesh (@pratheesh) November 27, 2022
share
Next Story
X