Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರ್ಕಳ: ಅರ್ಧದಲ್ಲೇ ನಿಂತ ನೂತನ...

ಪರ್ಕಳ: ಅರ್ಧದಲ್ಲೇ ನಿಂತ ನೂತನ ಕಾಂಕ್ರಿಟ್ ರಸ್ತೆ ಕಾಮಗಾರಿ!

ನಿತ್ಯ ಸಂಚರಿಸುವ ರಸ್ತೆ ಬಳಕೆದಾರರಿಗೆ ಬಗೆಹರಿಯದ ಸಮಸ್ಯೆ

28 Nov 2022 7:00 PM IST
share
ಪರ್ಕಳ: ಅರ್ಧದಲ್ಲೇ ನಿಂತ ನೂತನ ಕಾಂಕ್ರಿಟ್ ರಸ್ತೆ ಕಾಮಗಾರಿ!
ನಿತ್ಯ ಸಂಚರಿಸುವ ರಸ್ತೆ ಬಳಕೆದಾರರಿಗೆ ಬಗೆಹರಿಯದ ಸಮಸ್ಯೆ

ಉಡುಪಿ, ನ.28: ಪರ್ಕಳದ ರಸ್ತೆಯೊಂದರ ಅಗಲೀಕರಣ ಕಾಮಗಾರಿ ನಿರೀಕ್ಷೆಯಂತೆ ಸಾಗದೇ, ಅರ್ಧದಲ್ಲೇ ನಿಂತು ವಾಹನ ಚಾಲಕರು ಹಾಗೂ ಪಾದಚಾರಿಗಳು ಸೇರಿದಂತೆ ರಸ್ತೆಯ ಬಳಕೆದಾರರೆಲ್ಲರೂ ಪ್ರತಿನಿತ್ಯ ವೆಂಬಂತೆ  ಸಂಬಂಧಿತರಿಗೆ ಹಿಡಿಶಾಪ ಹಾಕುವಂತಾಗಿದೆ. ಏಕೆಂದರೆ ರಸ್ತೆಗೆ ಹಾಕಿದ ಜಲ್ಲಿಕಲ್ಲು ಎಲ್ಲರಿಗೂ ಸಮಸ್ಯೆಯನ್ನುಂಟು ಮಾಡುತ್ತಿದೆ.

ಅರ್ಜುನ ಯುವಕ ಮಂಡಲದ ಪಕ್ಕದಲ್ಲಿ ಸಾಗುವ ರಸ್ತೆಯು ಮುಂದೆ ಸಾಗಿ ಸರಳೆಬೆಟ್ಟು ಜಂಕ್ಷನ್‌ಗೆ ಸಂಪರ್ಕ ಕಲ್ಪಿಸುವ ಹಳೆಯ ರಸ್ತೆಯನ್ನು ಅಗಲೀಕರಿಸಿ ಕಾಂಕ್ರಿಟೀಕರಣಗೊಳಿಸುವ ಕಾಮಗಾರಿ ಕಳೆದ ಮಳೆಗಾಲದಲ್ಲಿ ಪ್ರಾರಂಭ ಗೊಂಡಿತ್ತು. ನಗರೋತ್ಥಾನದ ಹಾಗೂ ಇತರ ಅನುದಾನದಿಂದ ಈ ಕಾಮಗಾರಿಗಾಗಿ ಬೃಹತ್ ಮೊತ್ತವನ್ನು ಬಿಡುಗಡೆಗೊಳಿಸಲಾಗಿತ್ತು.

ಆದರೆ ಕಳೆದ ಎಂಟು ತಿಂಗಳಿಂದ ಈ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಮಳೆಗಾಲಕ್ಕೆ ಮೊದಲೇ ಇದ್ದ ಡಾಂಬರ್ ರಸ್ತೆ ತೆಗೆದಿದ್ದು, ಮಳೆಗಾಲದಲ್ಲಿ ಇದು ಕೆಸರು ಗದ್ದೆಯಂತಾಗಿ ನಡೆದಾಡಲು ಅಸಾಧ್ಯವೆನಿಸಿದಾಗ ಸ್ಥಳೀಯರು ಪ್ರತಿಭಟಿಸಿದ್ದರು. ಇದೀಗ ಮಳೆಗಾಲ ಮುಗಿದು ಚಳಿಗಾಲ ಮುಕ್ತಾಯ ಹಂತದಲ್ಲಿದ್ದರೂ ಕಾಮಗಾರಿ ಪ್ರಾರಂಭಗೊಳ್ಳುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ.

ರಾಮ ಮಂದಿರದ ಬಳಿ ರಸ್ತೆಯ ಎರಡು ಬದಿಯನ್ನು ಒಂದೇ ರೀತಿ ಅಗಲೀಕರಿಸದೆ ಇರುವುದು  ಕಾಮಗಾರಿ ನಡೆಸಲು ತೊಂದರೆಯಾಗುತ್ತಿದೆ ಎಂದು ತಿಳಿದುಬಂದಿದೆ.  ಅಲ್ಲದೇ ಅಗಲೀಕರಣದ ವಿಷಯದಲ್ಲಿ ಭಿನ್ನಾಭಿಪ್ರಾಯ ತಲೆದೋರಿದ್ದು, ವಿವಾದ ಈಗ ನ್ಯಾಯಾಲಯದ ಮೆಟ್ಟಲೇರಿದೆ. ಇದರಿಂದ ಕಾಮಗಾರಿಯನ್ನು ಪೂರ್ಣಗೊಳಿಸಲು ಆಗದೆ ಹಿನ್ನಡೆಯಾಗಿದೆ.

ಇದರಿಂದ ದಿನನಿತ್ಯ ಸಂಚರಿಸುವ ಪ್ರಯಾಣಿಕರಿಗೆ ಹಾಗೂ ವಾಹನಗಳಿಗೆ ಅಗೆದ ಹಳೆಜಲ್ಲಿಯ ರಸ್ತೆಯಲ್ಲಿಯೇ ಸಂಚರಿಸಬೇಕಾದ ಸ್ಥಿತಿ ಉದ್ಭವಿಸಿದೆ. ಆದ್ದರಿಂದ ನಗರಸಭೆ, ಆಡಳಿತ ಪಕ್ಷದ ನಾಯಕರು, ನಗರಸಭೆಯ ಸದಸ್ಯರು ಇತ್ತಕಡೆ ಗಮನಿಸಿ ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

share
Next Story
X