Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಡಿಓ ಸಹೋದರನ ಒತ್ತುವರಿ ಜಮೀನು,...

ಪಿಡಿಓ ಸಹೋದರನ ಒತ್ತುವರಿ ಜಮೀನು, ಅನಧಿಕೃತ ಕಟ್ಟಡ ತೆರವಿಗೆ ಉಡುಪಿ ತಹಶೀಲ್ದಾರ್ ಆದೇಶ

29 Nov 2022 8:42 PM IST
share
ಪಿಡಿಓ ಸಹೋದರನ ಒತ್ತುವರಿ ಜಮೀನು, ಅನಧಿಕೃತ ಕಟ್ಟಡ ತೆರವಿಗೆ ಉಡುಪಿ ತಹಶೀಲ್ದಾರ್ ಆದೇಶ

ಉಡುಪಿ, ನ.29: ಹೆಬ್ರಿ, ಮುದ್ರಾಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ಅವರ ಸಹೋದರ ಅನಂತ ಪದ್ಮನಾಭ ಸೇರ್ವೆಗಾರ್ ಪೆರ್ಡೂರು ಗ್ರಾಮದ ಸ.ನಂ.296ರಲ್ಲಿ ಒತ್ತುವರಿ ಮಾಡಿರುವ 0.15 ಎಕ್ರೆ ಸರಕಾರಿ ಜಮೀನು ಮತ್ತು ಅದರಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಕಟ್ಟಡವನ್ನು ತಕ್ಷಣದಿಂದ ಅನ್ವಯ ವಾಗುವಂತೆ ತೆರವುಗೊಳಿಸಬೇಕು ಎಂದು ಉಡುಪಿ ತಹಶೀಲ್ದಾರ್ ನ.19ರಂದು ಆದೇಶ ಹೊರಡಿಸಿದ್ದಾರೆ.

ಪಿಡಿಓ ಸದಾಶಿವ ಸೇರ್ವೆಗಾರ್ ತಮ್ಮ ಅಧಿಕಾರ ದುರುಪಯೋಗ ಪಡಿಸಿ, ತನ್ನ ಸಹೋದರ ಪದ್ಮನಾಭ ಸೇರ್ವೆಗಾರ್ ಜೊತೆ ಸೇರಿಕೊಂಡು ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಅನಧಿಕೃತ ಬಹುಮಹಡಿ ಕಟ್ಟಡ ಕಾಮಗಾರಿ ಮಾಡುತ್ತಿದ್ದು, ಅದನ್ನು ತೆರವುಗೊಳಿಸುವಂತೆ ನವೀನ್‌ ಎಂಬವರು ದೂರು ನೀಡಿದ್ದರು. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು. ಒತ್ತುವರಿ ಮಾಡಿಕೊಂಡು ನಿರ್ಮಿಸಿದ ಅಕ್ರಮ ಕಟ್ಟಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿತ್ತು.

ಈ ದೂರಿನ ಬಗ್ಗೆ ತಹಶೀಲ್ದಾರ್, ಭೂಮಾಪಕರಿಂದ ಅಳತೆ ಮಾಡಿಸಿ ಕಂದಾಯ ನಿರೀಕ್ಷಕರ ತನಿಖಾ ವರದಿ ಪಡೆದು, ಅನಂತ ಪದ್ಮನಾಭ ಸೇರ್ವೆ ಗಾರ್ ಎಂಬವರು ಪೆರ್ಡೂರು ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿರುವುದು ಹಾಗೂ ಅದರಲ್ಲಿ ಅನಧಿಕೃತವಾಗಿ ವಾಸ್ತವ್ಯದ ಕಟ್ಟಡ ನಿರ್ಮಿಸಿರುವುದು ಕಂಡುಬಂದಿದೆ.

ಈ ಕುರಿತು ಅನಂತ ಪದ್ಮನಾಭ ಸೇರ್ವೆಗಾರ್‌ಗೆ ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಹಾಗೂ ಒತ್ತುವರಿ ಮಾಡಿರುವ ಜಾಗದ ಬಗ್ಗೆ ಕ್ರಮ ಜರಗಿಸಲಾಗುವುದು ಎಂದು ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಈ ನೋಟೀಸಿಗೆ ಒತ್ತುವರಿದಾರರಿಂದ ಯಾವುದೇ ಉತ್ತರ ಬಂದಿರುವುದಿಲ್ಲ ಎಂದು ತಹಶೀಲ್ದಾರ್ ಆದೇಶದಲ್ಲಿ ತಿಳಿಸಲಾಗಿದೆ.

ಈ ಕಾರಣಗಳಿಂದಾಗಿ ಒತ್ತುವರಿದಾರ ಅನಂತ ಪದ್ಮನಾಭ ಸೇರ್ವೆಗಾರರು ಒತ್ತುವರಿ ಮಾಡಿರುವ ಜಮೀನು ಮತ್ತು ಅದರಲ್ಲಿರುವ ಅನಧಿಕೃತ ಕಟ್ಟಡವನ್ನು ತಕ್ಷಣದಿಂದ ಅನ್ವಯವಾಗುವಂತೆ ತೆರವುಗೊಳಿಸಬೇಕು. ಉಡುಪಿ ಕಂದಾಯ ನಿರೀಕ್ಷಕರು ಮತ್ತು ಪೆರ್ಡೂರು ಗ್ರಾಮ ಕರಣಿಕರು ಒತ್ತುವರಿ ಜಮೀನನ್ನು ಕೂಡಲೇ ತೆರವುಗೊಳಿಸಿ ಸ್ಥಳ ಮಹಜರು ನಡೆಸಿ ಸ್ವಾಧೀನ ಪಡೆದುಕೊಂಡು ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ತಹಶೀಲ್ದಾರ್ ತಮ್ಮ ಆದೇಶದಲ್ಲಿ ನಿರ್ದೇಶಿಸಿದ್ದಾರೆ.

10 ದಿನಗಳಾದರೂ ಆದೇಶ ಜಾರಿಯಾಗಿಲ್ಲ: ಸೊರಕೆ

ಸರಕಾರಿ ಜಾಗ ಒತ್ತುವರಿ ಹಾಗೂ ಅನಧಿಕೃತ ಕಟ್ಟಡ ತೆರವುಗೊಳಿಸುವಂತೆ ತಹಶೀಲ್ದಾರ್ ಮಾಡಿರುವ ಆದೇಶವು ಕೆಲವೊಂದು ಭ್ರಷ್ಟ ಅಧಿಕಾರಿಗಳಿಂದ ಆಗುತ್ತಿರುವ ಅಧಿಕಾರ ದುರುಪಯೋಗದ ಬಗ್ಗೆ ಹಾಗೂ ಬಡಜನರ ಪರ ನಿರಂತರ ಧ್ವನಿಯೆತ್ತಿ ಹೋರಾಟ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದ ಜಯ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.‌

ಗ್ರಾಮ ಲೆಕ್ಕಿಗರಿಗೆ, ಗ್ರಾಪಂ ಅಧಿಕಾರಿಗೆ ಹಾಗೂ ಕಂದಾಯ ನಿರೀಕ್ಷಕರಿಗೆ, ಪೊಲೀಸ್ ರಕ್ಷಣೆ ಪಡೆದು ಜಾಗ ಮತ್ತು ಅಕ್ರಮ ಕಟ್ಟಡವನ್ನು ಕೂಡಲೇ ತೆರವುಗೊಳಿಸಿ, ಸರಕಾರದ ಸ್ವಾಧೀನಕ್ಕೆ ಒಳಪಡಿಸಬೇಕೆಂದು, ತಹಶೀಲ್ದಾರ್ ಆದೇಶ ಹೊರಡಿಸಿ 10 ದಿನಗಳಾದರೂ, ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಆದೇಶ ವನ್ನು ಕಾರ್ಯರೂಪಕ್ಕೆ ತರಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ.

ಆದಷ್ಟು, ಶೀಘ್ರವಾಗಿ ತಾಲೂಕು ದಂಡಾಧಿಕಾರಿಗಳ ಆದೇಶದಂತೆ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯಾಚರಣೆ ಕೈಗೊಳ್ಳಬೇಕು ಮತ್ತು ಅಕ್ರಮ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಇದರ ವಿರುದ್ಧ ಮತ್ತೊಮ್ಮೆ, ಇನ್ನಷ್ಟು ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

share
Next Story
X