Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.3: ಮುಸ್ಲಿಂ ಐಕ್ಯತಾ ಸಂದೇಶ...

ಡಿ.3: ಮುಸ್ಲಿಂ ಐಕ್ಯತಾ ಸಂದೇಶ ಕಾರ್ಯಕ್ರಮ

30 Nov 2022 6:23 PM IST
share
ಡಿ.3: ಮುಸ್ಲಿಂ ಐಕ್ಯತಾ ಸಂದೇಶ ಕಾರ್ಯಕ್ರಮ

ಮಂಗಳೂರು: ದ.ಕ.ಜಿಲ್ಲಾ ಮುಸ್ಲಿಂ ಜಸ್ಟೀಸ್ ಫೋರಂ (ಎಂಜೆಎಫ್)ವತಿಯಿಂದ  ಮುಸ್ಲಿಂ ಐಕ್ಯತಾ ಸಂದೇಶ ಕಾರ್ಯಕ್ರಮವು ಡಿ.3ರಂದು ಸಂಜೆ 4ಕ್ಕೆ ನಗರದ ಕಂಕನಾಡಿಯ ಜಂ ಇಯ್ಯತುಲ್ ಫಲಾಹ್ ಸಭಾಂಗಣದ ಮರ್ಹೂಂ ಅಮೀರ್ ತುಂಬೆ ವೇದಿಕೆಯಲ್ಲಿ ನಡೆಯಲಿದೆ ಎಂದು ಎಂಜೆಎಫ್ ಸ್ಥಾಪಕಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಮೇಲೆ ಕಪೋಲಕಲ್ಪಿತ ಆರೋಪ ಹೊರಿಸಿ ಅದೇ ಅಂತಿಮ ಎಂಬಂತೆ ತೀರ್ಮಾನಕ್ಕೆ ಬರುವ ಪ್ರಯತ್ನಗಳು ನಡೆಯುತ್ತಿದೆ. ಈ ಬಗ್ಗೆ ಸಮುದಾಯದ ಹೊಣೆಗಾರಿಕೆಯ ಬಗ್ಗೆ ಚರ್ಚಿಸಲು ಮತ್ತು ಏಕಪಕ್ಷೀಯ ತೀರ್ಮಾನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮುಸ್ಲಿಂ ಸಮುದಾಯದ ಮೇಲಾಗುವ ದೌರ್ಜನ್ಯ, ಅನ್ಯಾಯ, ನಿಂದನೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಮುದಾಯಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಎಂಜೆಎಫ್ ಯಾವತ್ತೂ ಕೂಡ ಅಪರಾಧಗಳನ್ನು ಜಾತಿ-ಧರ್ಮದ ಆಧಾರದ ಮೇಲೆ ನೋಡಿಲ್ಲ. ಮುಸ್ಲಿಂ ಸಮುದಾಯ ಎದುರಿಸುವ ಸಮಸ್ಯೆಗಳ ಪರಿಹಾರಕ್ಕಾಗಿ ರಚನಾತ್ಮಕ ಮತ್ತು ಸಂಘಟನಾತ್ಮಕ ಪ್ರಯತ್ನ ಮಾಡುತ್ತಿವೆ. ಆ ಹಿನ್ನೆಲೆಯಲ್ಲೇ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಫೀಉದ್ದೀನ್ ಕುದ್ರೋಳಿ ತಿಳಿಸಿದರು.

ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುರ‌್ರಶೀದ್ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನ್ಯಾಯವಾದಿ ಮುಝಾಫರ್ ಅಹ್ಮದ್ ಮತ್ತು ಲೇಖಕ ಜಿ. ಮೆಹಬೂಬ್ ಮುಖ್ಯ ಭಾಷಣ ಮಾಡಲಿದ್ದಾರೆ. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಬಿ.ಎಂ. ಮುಮ್ತಾಝ್ ಅಲಿ, ಬಶೀರ್ ಶಾಲಿಮಾರ್, ಮುಹಮ್ಮದ್ ಹನೀಫ್ ಹಾಜಿ, ಮಾಜಿ ಮೇಯರ್ ಕೆ. ಅಶ್ರಫ್, ಮುಸ್ತಫಾ ಕೆಂಪಿ, ಇಕ್ಬಾಲ್ ಎಲಿಮಲೆ, ಅಶ್ರಫ್ ಕಲ್ಲೇಗ, ಎಂ.ಎಸ್.ಮುಹಮ್ಮದ್, ಬಿ.ಎ.ನಝೀರ್ ಬೆಳ್ತಣಗಡಿ, ಯಾಸೀನ್ ಕುದ್ರೋಳಿ, ಅಬ್ಬಾಸ್ ಸುನೈನಾ, ಹನೀಫ್ ಹಾಜಿ ಗೋಳ್ತಮಜಲು, ಅಶ್ರಫ್ ಬದ್ರಿಯಾ, ಇಸ್ಮಾಯೀಲ್ ಉಳ್ಳಾಲ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಂಜೆಎಫ್ ಅಧ್ಯಕ್ಷ ಇರ್ಶಾದ್ ಯು.ಟಿ., ಉಪಾಧ್ಯಕ್ಷ ಅಲಿ ಹಸನ್, ಪ್ರಧಾನ ಕಾರ್ಯದರ್ಶಿ ವಹಾಬ್ ಕುದ್ರೋಳಿ, ಕಾರ್ಯದರ್ಶಿ ಅಬ್ದುಸ್ಸಲಾಂ ಉಚ್ಚಿಲ್, ಕಾರ್ಯಕಾರಿ ಸಮಿತಿ ಸದಸ್ಯ ಇಮ್ರಾನ್ ಎ.ಆರ್., ಉಪಸ್ಥಿತರಿದ್ದರು.

share
Next Story
X