ಹೆಜಮಾಡಿ ಟೋಲ್ನಲ್ಲಿ ಪೊಲೀಸ್ ಭದ್ರತೆ: ಎಸ್ಪಿ ಅಕ್ಷಯ್
ಉಡುಪಿ: ಹೆಜಮಾಡಿ ಟೋಲ್ನಲ್ಲಿ ದುಪ್ಪಟ್ಟು ಹಣ ಪಡೆದು ಕೊಳ್ಳುವ ಸಂಬಂಧ ಕೆಲವು ಸಂಘಟನೆಗಳು ಹೋರಾಟ ಮಾಡಬಹುದು ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಿಂದ ಲಭ್ಯವಾಗಿದ್ದು, ಆ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.
ಯಾರಾದರೂ ಕಾನೂನು ಬಾಹಿರವಾಗಿ ಟೋಲ್ ಸಂಗ್ರಹಕ್ಕೆ ಅಡ್ಡಿ ಪಡಿಸಿ ದರೆ, ವಾಹನ ಸಂಚಾರ, ಸಾರ್ವಜನಿಕರಿಗೆ ತೊಂದರೆ ಮಾಡಿದರೆ, ಆಸ್ತಿಪಾಸ್ತಿ ಹಾನಿ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story