Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರನೇ ಹಾಕಿ ಟೆಸ್ಟ್ : ವಿಶ್ವದ ನಂ.1 ತಂಡ...

ಮೂರನೇ ಹಾಕಿ ಟೆಸ್ಟ್ : ವಿಶ್ವದ ನಂ.1 ತಂಡ ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

30 Nov 2022 11:23 PM IST
share
ಮೂರನೇ ಹಾಕಿ ಟೆಸ್ಟ್ : ವಿಶ್ವದ ನಂ.1 ತಂಡ ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

ಅಡಿಲೇಡ್, ನ.30: ಹೋರಾಟಕಾರಿ ಪ್ರದರ್ಶನ ನೀಡಿದ ಭಾರತ ಕೊನೆಯ ಕ್ಷಣದಲ್ಲಿ ಗಳಿಸಿದ ಗೋಲಿನ ನೆರವಿನಿಂದ ಬುಧವಾರ ನಡೆದ ಮೂರನೇ ಹಾಕಿ ಟೆಸ್ಟ್ ಪಂದ್ಯದಲ್ಲಿ ವಿಶ್ವದ ನಂ.1 ತಂಡ ಆಸ್ಟ್ರೇಲಿಯವನ್ನು 4-3 ಅಂತರದಿಂದ ಮಣಿಸಿ ಶಾಕ್ ನೀಡಿದೆ.

ಆಸ್ಟ್ರೇಲಿಯ ವಿರುದ್ಧ ಭಾರತದ ಅಪರೂಪದ ಗೆಲುವು ಇದಾಗಿದೆ. ಈ ಗೆಲುವಿನ ಮೂಲಕ ಭಾರತವು 5 ಪಂದ್ಯಗಳ ಸರಣಿಯಲ್ಲಿ ಸ್ಪರ್ಧೆಯಲ್ಲಿ ಉಳಿದಿದೆ. ಪ್ರಸಕ್ತ ಆಸ್ಟ್ರೇಲಿಯವು ಸರಣಿಯಲ್ಲಿ 2-1 ಮುನ್ನಡೆಯಲ್ಲಿದೆ. ಭಾರತವು ಮೊದಲೆರಡು ಟೆಸ್ಟ್ ಪಂದ್ಯಗಳನ್ನು 4-5 ಹಾಗೂ 4-7 ಅಂತರದಿಂದ ಕಳೆದುಕೊಂಡಿತ್ತು. ನಾಲ್ಕನೇ ಪಂದ್ಯವು ಶನಿವಾರ ಹಾಗೂ ಕೊನೆಯ ಪಂದ್ಯವು ರವಿವಾರ ನಡೆಯಲಿದೆ.

ಭಾರತದ ಪರ ಹರ್ಮನ್ಪ್ರೀತ್ ಸಿಂಗ್(12ನೇ ನಿಮಿಷ), ಅಭಿಷೇಕ್(47ನೇ ನಿಮಿಷ), ಶಂಶೇರ್ ಸಿಂಗ್(57ನೇ ನಿಮಿಷ) ಹಾಗೂ ಆಕಾಶ್ದೀಪ್ ಸಿಂಗ್(60ನೇ ನಿಮಿಷ)ತಲಾ ಒಂದು ಗೋಲು ಗಳಿಸಿದರು.

ಆಸ್ಟ್ರೇಲಿಯದ ಪರ ಜಾಕ್ ವೆಲ್ಚ್(25ನೇ ನಿಮಿಷ), ನಾಯಕ ಅರಾನ್ ಝಲೆವ್ಸ್ಕಿ(32ನೇ ನಿಮಿಷ) ಹಾಗೂ ನಥಾನ್ ಎಫ್ರಾಮಸ್(59ನೇ ನಿಮಿಷ)ತಲಾ ಒಂದು ಗೋಲು ದಾಖಲಿಸಿದರು.

12ನೇ ನಿಮಿಷದಲ್ಲಿ ನಾಯಕ ಹರ್ಮನ್ಪ್ರೀತ್ ಪೆನಾಲ್ಟಿ ಕಾರ್ನರ್ ರನ್ನು ಗೋಲಾಗಿ ಪರಿವರ್ತಿಸುವ ಮೂಲಕ ಭಾರತಕ್ಕೆ 1-0 ಮುನ್ನಡೆ ಒದಗಿಸಿದರು. 20ನೇ ನಿಮಿಷದಲ್ಲಿ ಭಾರತದ ಹಿರಿಯ ಗೋಲ್ಕೀಪರ್ ಶ್ರೀಜೇಶ್ ಆಸ್ಟ್ರೇಲಿಯಕ್ಕೆ ಗೋಲು ನಿರಾಕರಿಸಿದರು. ಆಸ್ಟ್ರೇಲಿಯವು 25ನೇ ನಿಮಿಷದಲ್ಲಿ ಸ್ಕೋರನ್ನು ಸಮಬಲಗೊಳಿಸಿತು. ವೆಲ್ಶ್ ಸರಣಿಯಲ್ಲಿ 3ನೇ ಗೋಲು ಗಳಿಸಿದರು. ನಾಯಕ ಝಲೆವ್ಸ್ಕಿ 32ನೇ ನಿಮಿಷದಲ್ಲಿ ಆತಿಥೇಯ ತಂಡಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟರು. ಅಭಿಷೇಕ್ 47ನೇ ನಿಮಿಷದಲ್ಲಿ ಗೋಲು ಗಳಿಸಿ ಸ್ಕೋರನ್ನು ಸಮಬಲಕ್ಕೆ ತಂದರು. ಶಂಶೇರ್ 57ನೇ ನಿಮಿಷದಲ್ಲಿ ಗೋಲು ಗಳಿಸಿ ಮುನ್ನಡೆ ನೀಡಿದರು. ಆದರೆ ಮುನ್ನಡೆ ಹೆಚ್ಚು ಹೊತ್ತು ಉಳಿಯಲಿಲ್ಲ. ಆಸ್ಟ್ರೇಲಿಯ 59ನೇ ನಿಮಿಷದಲ್ಲಿ ಗೋಲು ಗಳಿಸಿ ತಿರುಗೇಟು ನೀಡಿತು. ಪಂದ್ಯ ಮುಗಿಯಲು ಕೆಲವೇ ಸೆಕೆಂಡ್ ಬಾಕಿ ಇರುವಾಗ ಆಕಾಶ್ದೀಪ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ರೋಚಕ ಜಯ ತಂದರು.

share
Next Story
X