Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಂಗ ಅಧಿಕಾರಿಯ "ಅಶ್ಲೀಲ"...

ನ್ಯಾಯಾಂಗ ಅಧಿಕಾರಿಯ "ಅಶ್ಲೀಲ" ವೀಡಿಯೊವನ್ನು ಹಂಚಿಕೊಳ್ಳಲು, ಪೋಸ್ಟ್ ಮಾಡುವುದಕ್ಕೆ ದಿಲ್ಲಿ ಹೈಕೋರ್ಟ್ ನಿರ್ಬಂಧ

1 Dec 2022 1:46 PM IST
share
ನ್ಯಾಯಾಂಗ ಅಧಿಕಾರಿಯ ಅಶ್ಲೀಲ ವೀಡಿಯೊವನ್ನು ಹಂಚಿಕೊಳ್ಳಲು, ಪೋಸ್ಟ್ ಮಾಡುವುದಕ್ಕೆ ದಿಲ್ಲಿ ಹೈಕೋರ್ಟ್ ನಿರ್ಬಂಧ

ಹೊಸದಿಲ್ಲಿ: ನವೆಂಬರ್ 29ರಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದ್ದ ನ್ಯಾಯಾಂಗ ಅಧಿಕಾರಿ (Delhi Judicial Officer) ಹಾಗೂ ಮಹಿಳೆಯೋರ್ವರ "ಅಶ್ಲೀಲ" ವಿಡಿಯೊ ಹಂಚಿಕೆಗೆ ದೆಹಲಿ ಹೈಕೋರ್ಟ್ (Delhi High Court) ನಿರ್ಬಂಧ ವಿಧಿಸಿದೆ.

ತಮ್ಮ ಗುರುತನ್ನು ಗುಪ್ತವಾಗಿಡಬೇಕು ಎಂಬ ಸಂತ್ರಸ್ತರ ಮನವಿಯನ್ನು ಪುರಸ್ಕರಿಸಿದ ನ್ಯಾ. ಯಶವಂತ್ ವರ್ಮಾ, ಹಲವು ಕಾನೂನುಗಳ ಉಲ್ಲಂಘನೆಯ ಜೊತೆಗೆ ವಿಡಿಯೊದ ಹಂಚಿಕೆಯಿಂದ ದೂರುದಾರರ ಖಾಸಗಿತನಕ್ಕೆ ಸರಿಪಡಿಸಲಾಗದ ಹಾನಿಯಾಗುವುದರಿಂದ ಮಧ್ಯಂತರ ತಡೆಯಾಜ್ಞೆ ನೀಡುತ್ತಿರುವುದಾಗಿ ಹೇಳಿದ್ದಾರೆ.

ಹೈಕೋರ್ಟ್‍ನ ಸಂಪೂರ್ಣನ ನ್ಯಾಯಾಲಯವು ತನ್ನ ಆಡಳಿತಾತ್ಮಕ ವಿಭಾಗದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಡಿಯೊಗೆ ಎಲ್ಲ ಬಗೆಯ ಸಂದೇಶ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲದೆ ಅಂತರ್ಜಾಲ ಸೇವೆ ಪೂರೈಕೆದಾರರ ವೇದಿಕೆಗಳಲ್ಲೂ ನಿರ್ಬಂಧ ವಿಧಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಚಿಸುವಂತೆ ಪ್ರಧಾನ ರಿಜಿಸ್ಟ್ರಾರ್ ಅವರಿಗೆ ತಾಕೀತು ಮಾಡಿದೆ.

ವಿಡಿಯೋ ದೂರುದಾರರ ಖಾಸಗಿತನಕ್ಕೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿಯನ್ನುಂಟು ಮಾಡುವ ಸಾಧ್ಯತೆ ಇರುವುದರಿಂದ ಪ್ರತಿವಾದಿಗಳ ಗೈರುಹಾಜರಿಯ ನಡುವೆಯೂ ಮಧ್ಯಂತರ ತಡೆಯಾಜ್ಞೆ ನೀಡುತ್ತಿರುವುದಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

“ನ್ಯಾಯಾಲಯಕ್ಕೆ ದೂರನ್ನು ಆಧರಿಸಿ ವಿಡಿಯೊದ ತುಣುಕುಗಳನ್ನು ವೀಕ್ಷಿಸುವ ಅವಕಾಶ ದೊರೆಯಿತು. ಐಪಿಸಿ ಸೆಕ್ಷನ್ 354ಸಿ, 1860, ಹಾಗೆಯೇ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಕಾಯ್ದೆಯ ಸೆಕ್ಷನ್ 67ಎ ಅನ್ನು ನ್ಯಾಯಾಲಯ ಗಮನದಲ್ಲಿಟ್ಟುಕೊಂಡಿದ್ದು, ಅನುಮತಿ ಇಲ್ಲದೆ ಸದರಿ ವಿಡಿಯೊವನ್ನು ಹಂಚುವುದು ಈ ಕಾಯ್ದೆಗಳ ಉಲ್ಲಂಘನೆಯಾಗಿದ್ದು, ಇದು ಮೇಲ್ನೋಟದ ಅಪರಾಧವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಅಂತರ್ಜಾಲ ಸೇವೆ ಒದಗಿಸುವ 1ರಿಂದ 4ರವರೆಗೆ ಪ್ರತಿವಾದಿಯಾಗಿರುವವರಲ್ಲಿ (ಸಾಮಾಜಿಕ ಜಾಲತಾಣ ವೇದಿಕೆಗಳು) ಈ ವಿಡಿಯೊ ಹಂಚಿಕೆಯಾದರೆ, ಅವರೂ ಮೇಲ್ನೋಟದ ಅಪರಾಧಿಗಳಾಗಲಿದ್ದು, ಕಾನೂನಾತ್ಮಕವಾಗಿ ಅಳವಡಿಸಿಕೊಂಡಿರುವ ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

ಪ್ರಧಾನ ರಿಜಿಸ್ಟ್ರಾರ್ ಸೂಚಿಸುವ ಎಲ್ಲ ಕ್ರಮಗಳನ್ನೂ ಕೈಗೊಂಡಿರುವ ಬಗ್ಗೆ ಖಾತ್ರಿ ಪಡಿಸಿ, ಈ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ವಿಡಿಯೊದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯೊಬ್ಬರ ದೂರನ್ನು ಆಧರಿಸಿ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದ್ದು, ಅವರು ಮಾರ್ಚ್ 9, 2022ರ ದಿನಾಂಕ ಹೊಂದಿರುವ ಈ ‘ತಿರುಚಲಾದ ವಿಡಿಯೊ’ದ ಪ್ರಕಟಣೆ ಮತ್ತು ಪ್ರಸಾರವನ್ನು ಶಾಶ್ವತವಾಗಿ ನಿರ್ಬಂಧಿಸುವ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

ದೂರುದಾರರನ್ನು ವಕೀಲರಾದ ಆಶಿಶ್ ದೀಕ್ಷಿತ್, ಅಮಿತ್ ಶರ್ಮಾ ಮತ್ತು ವಂದನಾ ಸಚ್‍ ದೇವ್ ಪ್ರತಿನಿಧಿಸಿದ್ದರು.

ದೂರಿಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಜಾಲತಾಣಗಳಿಗೆ ನೋಟೀಸ್ ಜಾರಿ ಮಾಡಿರುವ ನ್ಯಾಯಾಲಯವು, ಮುಂದಿನ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ನಿಗದಿಪಡಿಸಿದೆ ಎಂದು ndtv.com ವರದಿ ಮಾಡಿದೆ. 

ಇದನ್ನೂ ಓದಿ: ಗೋದಿ ಮೀಡಿಯಾದ ವಿರುದ್ಧ ಜನರೇ ಹೋರಾಡುವುದು ಅನಿವಾರ್ಯ: NDTV ಬಿಟ್ಟ ರವೀಶ್ ಕುಮಾರ್ ಸಂದೇಶ

share
Next Story
X