Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ:1.9 ಕೋ.ರೂ.ವಿಮೆ ಹಣಕ್ಕಾಗಿ...

ರಾಜಸ್ಥಾನ:1.9 ಕೋ.ರೂ.ವಿಮೆ ಹಣಕ್ಕಾಗಿ ಪತ್ನಿಯನ್ನು ಕೊಂದ ವ್ಯಕ್ತಿಯ ಬಂಧನ

1 Dec 2022 10:27 PM IST
share
ರಾಜಸ್ಥಾನ:1.9 ಕೋ.ರೂ.ವಿಮೆ ಹಣಕ್ಕಾಗಿ ಪತ್ನಿಯನ್ನು ಕೊಂದ ವ್ಯಕ್ತಿಯ ಬಂಧನ

ಜೈಪುರ,ಡಿ.1: 1.90 ಕೋ.ರೂ.ವಿಮೆಹಣದ ಆಸೆಗಾಗಿ ತನ್ನ ಪತ್ನಿಯನ್ನೇ ಸುಪಾರಿ ನೀಡಿ ಹಲ್ಲೆ ಗೈದಿದ್ದ  ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

ಮಹೇಶಚಂದ್(Mahesh Chand) ಬಂಧಿತ ಆರೋಪಿ. ಅ.5ರಂದು ನಸುಕಿನ 4:45ರ ಸುಮಾರಿಗೆ ಆತನ ಪತ್ನಿ ಶಾಲು ತನ್ನ ಸೋದರ ಸಂಬಂಧಿ ರಾಜು ಜೊತೆಗೆ ಬೈಕಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ರೌಡಿ ಶೀಟರ್ ಮಹೇಶ ಸಿಂಗ್ ರಾಠೋಡ್(Mahesh Singh Rathore) ಮತ್ತು ಇತರರು ತಮ್ಮ ಎಸ್ಯುವಿ ವಾಹನವನ್ನು ವಾಹನಕ್ಕೆ ಡಿಕ್ಕಿ ಹೊಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಶಾಲು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ.

ಅದೊಂದು ರಸ್ತೆ ಅಪಘಾತದಂತೆ ಕಂಡುಬಂದಿದ್ದು,ಶಾಲು ಮನೆಯವರೂ ಹಾಗೆಯೇ ಭಾವಿಸಿದ್ದರು. ಆದರೆ ಪೊಲೀಸರ ತನಿಖೆಯಲ್ಲಿ ಮಹೇಶಚಂದ್ ತನ್ನ ಪತ್ನಿಯ ವಿಮೆಹಣಕ್ಕಾಗಿ ಆಕೆಯನ್ನು ಕೊಲ್ಲಲು ಸಂಚು ರೂಪಿಸಿದ್ದ ಎನ್ನುವುದು ಬಹಿರಂಗಗೊಂಡಿದೆ.

ಮಹೇಶಚಂದ್ ಶಾಲು ಹೆಸರಿಗೆ 40 ವರ್ಷಗಳ ಅವಧಿಗೆ ವಿಮೆಯನ್ನು ಮಾಡಿಸಿದ್ದ. ಸಹಜ ಮರಣವಾದರೆ ಒಂದು ಕೋ.ರೂ.ಮತ್ತು ಅಪಘಾತದಲ್ಲಿ ಮೃತಪಟ್ಟರೆ 1.9 ಕೋ.ರೂ.ವಿಮೆಹಣ ದೊರೆಯುತ್ತಿತ್ತು ಎಂದು ಪೊಲೀಸರು ತಿಳಿಸಿದರು.

ಶಾಲು ಹತ್ಯೆಗಾಗಿ ಮಹೇಶಚಂದ್ ರಾಠೋಡ್ಗೆ 10 ಲ.ರೂ.ಗಳಿಗೆ ಸುಪಾರಿ ನೀಡಿದ್ದು,ಮುಂಗಡವಾಗಿ 5.5 ಲ.ರೂ.ಗಳನ್ನು ಪಾವತಿಸಿದ್ದ. ಶಾಲು  ಹತ್ಯೆಗಾಗಿ ರಾಠೋಡ್ ಇತರರನ್ನು ಭಾಗಿಯಾಗಿಸಿಕೊಂಡಿದ್ದ.

ಮಹೇಶಚಂದ್ ಮತ್ತು ಶಾಲು 2015ರಲ್ಲಿ ಮದುವೆಯಾಗಿದ್ದು, ಓರ್ವ ಪುತ್ರಿಯಿದ್ದಾಳೆ. ವಿವಾಹದ ಎರಡು ಗಳ ಬಳಿಕ ಅವರ ನಡುವೆ ಜಗಳಗಳು ಆರಂಭವಾಗಿದ್ದು,ಶಾಲು ತನ್ನ ತವರುಮನೆಯಲ್ಲಿ ವಾಸಿಸತೊಡಗಿದ್ದಳು. ಆಕೆ 2019ರಲ್ಲಿ ಮಹೇಶಚಂದ್ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣವನ್ನೂ ದಾಖಲಿಸಿದ್ದಳು ಎಂದು ಪೊಲೀಸರು ತಿಳಿಸಿದರು.

ಇತ್ತೀಚಿಗೆ ಶಾಲು ಹೆಸರಿನಲ್ಲಿ ವಿಮೆ ಮಾಡಿಸಿದ್ದ ಮಹೇಶಚಂದ್, ಬಳಿಕ ತಾನೊಂದು ಹರಕೆಯನ್ನು ಹೇಳಿಕೊಂಡಿದ್ದು,ಅದು ಈಡೇರುವಂತಾಗಲು ಸತತ 11 ದಿನಗಳ ಕಾಲ ಯಾರಿಗೂ ತಿಳಿಸದೆ ರಾಜು ಜೊತೆ ಬೈಕಿನಲ್ಲಿ ಹನುಮಾನ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸುವಂತೆ ಸೂಚಿಸಿದ್ದ. ತನ್ನ ಹರಕೆಯು ಈಡೇರಿದರೆ ಆಕೆಗೆ ಮನೆಯೊಂದನ್ನು ಕೊಡಿಸುವುದಾಗಿ ಭರವಸೆಯನ್ನೂ ನೀಡಿದ್ದ. ಅದರಂತೆ ಶಾಲು ದೇವಸ್ಥಾನಕ್ಕೆ ಭೇಟಿ ನೀಡಲು ಆರಂಭಿಸಿದ್ದಳು.

ರಾಠೋಡ್ ತನ್ನ ವಾಹನವನ್ನು ಬೈಕಿಗೆ ಡಿಕ್ಕಿ ಹೊಡೆಸಿದಾಗ ಮಹೇಶಚಂದ್ ಬೈಕಿನಲ್ಲಿ ಅದನ್ನು ಹಿಂಬಾಲಿಸುತ್ತಿದ್ದ. ಅಪಘಾತದ ಬಳಿಕ ಆತ ಅಲ್ಲಿಂದ ವಾಪಸಾಗಿದ್ದ.

ರಾಠೋಡ್,ಎಸ್ಯುವಿ ವಾಹನದ ಮಾಲಿಕ ರಾಕೇಶ ಸಿಂಗ್ ಮತ್ತು ಸೋನು ಅವರನ್ನೂ ಬಂಧಿಸಲಾಗಿದೆ. ಇತರ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

share
Next Story
X