Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ವಿರೋಧಿ ಒಕ್ಕೂಟಕ್ಕೆ ಭಾರತವನ್ನು ...

ರಶ್ಯ ವಿರೋಧಿ ಒಕ್ಕೂಟಕ್ಕೆ ಭಾರತವನ್ನು ಸೆಳೆಯಲು ನೇಟೊ ಪ್ರಯತ್ನ: ರಶ್ಯ ಆರೋಪ

1 Dec 2022 11:18 PM IST
share
ರಶ್ಯ ವಿರೋಧಿ ಒಕ್ಕೂಟಕ್ಕೆ ಭಾರತವನ್ನು  ಸೆಳೆಯಲು ನೇಟೊ ಪ್ರಯತ್ನ: ರಶ್ಯ ಆರೋಪ

ಮಾಸ್ಕೊ, ಡಿ.1: ರಶ್ಯ ವಿರೋಧಿ ಮತ್ತು ಚೀನೀ ವಿರೋಧಿ ಒಕ್ಕೂಟಕ್ಕೆ ಭಾರತವನ್ನು ಸೆಳೆಯಲು ನೇಟೊ ಪ್ರಯತ್ನಿಸುತ್ತಿದೆ. ಈ ಮೂಲಕ ರಶ್ಯದ ಪ್ರಭಾವವನ್ನು ಕನಿಷ್ಟಗೊಳಿಸುವುದು ಪಾಶ್ಚಿಮಾತ್ಯ ದೇಶಗಳ ಉದ್ದೇಶವಾಗಿದೆ ಎಂದು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಗುರುವಾರ ಪ್ರತಿಪಾದಿಸಿದ್ದಾರೆ.

ನೇಟೊ ಚೀನಾದ ಬಳಿ ಉದ್ವಿಗ್ನತೆಯನ್ನು ಹೆಚ್ಚಿಸಿರುವುದು ರಶ್ಯಕ್ಕೆ ಅಪಾಯ ತಂದೊಡ್ಡಿದೆ. ಈ ಹಿಂದೆ ಉಕ್ರೇನ್‌ನಲ್ಲಿ ಮಾಡಿದಂತೆ ಈಗ ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ಉದ್ವಿಗ್ನತೆಗೆ ನೇಟೊ ಪ್ರಚೋದನೆ ನೀಡುತ್ತಿದೆ. ತೈವಾನ್ ಮತ್ತು ತೈವಾನ್ ಜಲಸಂಧಿಯಲ್ಲಿನ ಬೆಳವಣಿಗೆಯನ್ನು ಚೀನಾ ಅತ್ಯಂತ ಗಂಭೀರವಾಗಿ ಪರಿಗಣಿಸಿರುವುದು ನಮಗೆ ತಿಳಿದಿದೆ. ಈ ವಲಯದಲ್ಲಿ ನೇಟೊ ಬೆಂಕಿಯೊಂದಿಗೆ ಸರಸವಾಡುತ್ತಿರುವುದು ಇಲ್ಲಿಗೆ ಅತೀ ಹತ್ತಿರದಲ್ಲಿರುವ ರಶ್ಯಕ್ಕೆ ಅಪಾಯ ತಂದೊಡ್ಡಿದೆ. ಈ ಕಾರಣದಿಂದಲೇ ರಶ್ಯವು ಚೀನಾದೊಂದಿಗಿನ ಮಿಲಿಟರಿ ಸಹಕಾರ ಸಂಬಂಧ ಹೆಚ್ಚಿಸಿದೆ ಮತ್ತು ಜಂಟಿ ಸಮರಾಭ್ಯಾಸ ನಡೆಸುತ್ತಿದೆ. ಅಮೆರಿಕದ ನೇತೃತ್ವದಲ್ಲಿ ನೇಟೊ ಸದಸ್ಯರು ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ಸ್ಫೋಟಕ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದವರು ಹೇಳಿದ್ದಾರೆ.

 ಉಕ್ರೇನ್ ಮೂಲಕ ರಶ್ಯದ ಅಸ್ತಿತ್ವಕ್ಕೇ ಅಮೆರಿಕ ಬೆದರಿಕೆ ಒಡ್ಡುತ್ತಿದೆ. ಅಮೆರಿಕದೊಂದಿಗಿನ ಸಂಪರ್ಕದಿಂದ ರಶ್ಯ ಎಂದಿಗೂ ದೂರ ಸರಿದಿಲ್ಲ, ಆದರೆ ಈ ವಿಷಯದಲ್ಲಿ ಅಮೆರಿಕದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಲಾವ್ರೋ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನೇಟೊ, ರಶ್ಯದಿಂದ ಉಕ್ರೇನ್‌ಗೆ ಮಾತ್ರವಲ್ಲ, ನೆರೆಯ ದೇಶಗಳಾದ ಮೊಲ್ದೋವಾ, ಜಾರ್ಜಿಯಾ ಹಾಗೂ ಬೋಸ್ನಿಯಾ-ಹರ್ಝೆಗೊವಿನಾಗಳಿಗೂ ಬೆದರಿಕೆಯಿದೆ ಎಂದಿದೆ. ಉಕ್ರೇನ್‌ನ ಪ್ರಜೆಗಳನ್ನು ವಿಭಜಿಸಿ, ಸರಕಾರದ ವಿರುದ್ಧ ಎತ್ತಿಕಟ್ಟುವ ತಂತ್ರವನ್ನು ರಶ್ಯ ಅಧ್ಯಕ್ಷ ಪುಟಿನ್ ಹೆಣೆದಿದ್ದು, ಇದು ಅವರಿಗೇ ತಿರುಗುಬಾಣವಾಗಲಿದೆ ಎಂದು ಅಮೆರಿಕ ಹೇಳಿದೆ.

share
Next Story
X