Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರಿಗಿಲ್ಲದ ಪ್ರತ್ಯೇಕ ಮತದಾನ...

ಮಹಿಳೆಯರಿಗಿಲ್ಲದ ಪ್ರತ್ಯೇಕ ಮತದಾನ ವ್ಯವಸ್ಥೆ: ಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು

2 Dec 2022 6:14 PM IST
share
ಮಹಿಳೆಯರಿಗಿಲ್ಲದ ಪ್ರತ್ಯೇಕ ಮತದಾನ ವ್ಯವಸ್ಥೆ: ಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು

ಅಹಮದಾಬಾದ್: ಮಹಿಳೆಯರಿಗಾಗಿ ಸಾಂಪ್ರದಾಯಿಕ ಪ್ರತ್ಯೇಕ ಮತಗಟ್ಟೆ ಸ್ಥಾಪಿಸದೆ ಅದನ್ನು ಸಾಮಾನ್ಯ ಮತಗಟ್ಟೆಯಾಗಿ ಪರಿವರ್ತಿಸಿದ್ದರಿಂದ ಕ್ರೋಧಗೊಂಡ ಗ್ರಾಮಸ್ಥರು, ಜಾಮ್ ನಗರ ಜಿಲ್ಲೆಯ ಜಮ್ಜೋಧ್ ಪುರ ತಾಲ್ಲೂಕಿನ ಧ್ರಾಫಾದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಒಂದೂ ಮತ ಚಲಾವಣೆ ಮಾಡದೆ ಚುನಾವಣೆ ಬಹಿಷ್ಕರಿಸಿದ್ದಾರೆ(boycotts polls). ಈ ಮತಗಟ್ಟೆಯಲ್ಲಿ ಸುಮಾರು 2100 ಮತದಾರರಿದ್ದಾರೆ ಎಂದು indianexpress.com ವರದಿ ಮಾಡಿದೆ.

ಧ್ರಾಫಾದಲ್ಲಿ ಸುಮಾರು 1200 ಪುರುಷ ಮತದಾರರು ಹಾಗೂ 900 ಮಹಿಳಾ ಮತದಾರರಿದ್ದಾರೆ. ಈ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ತಾಲ್ಲೂಕು ಶಾಲೆ ಹಾಗೂ ಬಾಲಕಿಯರ ಶಾಲೆಯಲ್ಲಿ ಚುನಾವಣಾ ಆಯೋಗವು ಒಂದೊಂದು ಮತಗಟ್ಟೆಯನ್ನು ಸ್ಥಾಪಿಸಿತ್ತು.

“ನಮ್ಮ ಗ್ರಾಮವು ಓಜಲ್ ಪ್ರಾಥಾ (ಮಹಿಳೆಯರು ತಮ್ಮ ಮುಖವನ್ನು ಮುಚ್ಚಿಕೊಂಡು ಪುರುಷರೊಂದಿಗೆ ಬೆರೆಯದಿರುವುದು) ಪದ್ಧತಿಯಲ್ಲಿ ನಂಬಿಕೆ ಹೊಂದಿದೆ. ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ಗ್ರಾಮದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಮತಗಟ್ಟೆ ವ್ಯವಸ್ಥೆ ಹೊಂದಿದೆ. ಆದರೆ, ಚುನಾವಣಾ ಆಯೋಗವು ಈ ಬಾರಿ ಪ್ರತ್ಯೇಕ ಮಹಿಳಾ ಮತಗಟ್ಟೆಯನ್ನು ಸಾಮಾನ್ಯ ಮತಗಟ್ಟೆಯನ್ನಾಗಿ ಪರಿವರ್ತಿಸಿದೆ. ಹೀಗಾಗಿ ನವೆಂಬರ್ 25ರಂದು ಸಭೆ ನಡೆಸಿದ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿದರು” ಎಂದು ಧ್ರಾಫಾದ ನಿವಾಸಿಯಾಗಿರುವ, ಈ ಹಿಂದೆ ಕಾಂಗ್ರೆಸ್ ಶಾಸಕರಾಗಿದ್ದು ಇದೀಗ ಬಿಜೆಪಿಯಲ್ಲಿರುವ ಬ್ರಿಜ್ ರಾಜ್ ಸಿಂಗ್ ಜಡೇಜಾ ತಿಳಿಸಿದರು.

ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಸಲು ಜಾಮ್ ನಗರದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸೌರಭ್ ಪಂಢಿ ಗ್ರಾಮಕ್ಕೆ ಜಮ್ಜೋಧ್ ಪುರ್ ತಹಶೀಲ್ದಾರ್ ಹಾಗೂ ತಾಲ್ಲೂಕು ಅಭಿವೃದ್ಧಿ ಅಧಿಕಾರಿಯನ್ನು ಕಳುಹಿಸಿಕೊಟ್ಟರೂ ಗ್ರಾಮಸ್ಥರು ಮಾತ್ರ ಮತದಾನವನ್ನು ಬಹಿಷ್ಕರಿಸುವ ನಿರ್ಧಾರಕ್ಕೆ ಅಂಟಿಕೊಂಡರು ಮತ್ತು ಮತದಾನ ಮುಕ್ತಾಯದ ವೇಳೆಗೆ ಒಂದೇ ಒಂದು ಮತ ಚಲಾವಣೆಯೂ ಆಗಲಿಲ್ಲ ಎಂದು ವರದಿಯಾಗಿದೆ.

“ಚುನಾವಣಾ ಆಯೋಗವು ಬಾಲಕಿಯರ ಶಾಲೆಯಲ್ಲಿ ಪ್ರತ್ಯೇಕ ಮಹಿಳಾ ಮತಗಟ್ಟೆ ಸ್ಥಾಪಿಸುವ ಮಾಮೂಲಿ ಪದ್ಧತಿಯನ್ನು ಪಾಲಿಸದಿರಲು ನಿರ್ಧರಿಸಿದೆ ಎಂಬ ಸಂಗತಿ ಸ್ಥಳೀಯ ಶಿಕ್ಷಕಿಯಿಂದ ನಮಗೆ ತಿಳಿಯಿತು” ಎಂದು ತಿಳಿಸಿರುವ ಧ್ರಾಫಾ ಗ್ರಾಮದ ಮುಖಂಡ ಧರ್ಮೇಂದ್ರ ಸಿಂಗ್ ಜಡೇಜಾ, “ನಮ್ಮ ಮಹಿಳೆಯರು ಪುರುಷರೊಂದಿಗೆ ನಿಂತು ಮತ ಚಲಾಯಿಸುವುದಿಲ್ಲ ಎಂದು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ತಿಳಿಸಲಾಯಿತು ಮತ್ತು ಈ ಸಂಬಂಧ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಆದರೆ, ಚುನಾವಣಾ ಆಯೋಗವು ಮಹಿಳೆಯರಿಗೆ ಪ್ರತ್ಯೇಕ ಮತಗಟ್ಟೆಯನ್ನು ಮಂಜೂರು ಮಾಡಲಿಲ್ಲ.” ಎಂದು ತಿಳಿಸಿದ್ದಾರೆ.

ಧ್ರಾಫಾ ಜಮ್ಜೋಧ್ ವಿಧಾನಸಭಾ ಕ್ಷೇತ್ರದ ಭಾಗವಾಗಿದ್ದು, ಕಳೆದ ಬಾರಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಬ್ರಿಜ್ ರಾಜ್ ಸಿಂಗ್ 2007 ಮತ್ತು 2012ರಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಭನ್ವಾಡ್ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಕ್ಷೇತ್ರ ಪುನರ್ವಿಂಗಡಣೆಯ ನಂತರ ಈ ಕ್ಷೇತ್ರವು ಖಂಬಲಿಯಾ ಕ್ಷೇತ್ರದೊಂದಿಗೆ ವಿಲೀನವಾಗಿತ್ತು. 

ಇದನ್ನೂ ಓದಿ: ಈ ವರ್ಷ ಭಾರತೀಯ ವಲಸಿಗರಿಂದ ಸ್ವದೇಶಕ್ಕೆ ದಾಖಲೆಯ 100 ಶತಕೋಟಿ ಡಾಲರ್ ರವಾನೆ ನಿರೀಕ್ಷೆ

share
Next Story
X