Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿ: ಡಿ.5ರವರೆಗೆ ಹೆಚ್ಚುವರಿ ಟೋಲ್...

ಹೆಜಮಾಡಿ: ಡಿ.5ರವರೆಗೆ ಹೆಚ್ಚುವರಿ ಟೋಲ್ ಶುಲ್ಕ ವಸೂಲಿ ಇಲ್ಲ

ಆಸುಪಾಸಿನ ಮೂರು ಟೋಲ್‌ಗಳಲ್ಲಿ ಶುಲ್ಕ ಹಂಚಿಹಾಕಲು ಡಿಸಿ, ಶಾಸಕರಿಂದ ಸಲಹೆ

2 Dec 2022 10:06 PM IST
share
ಹೆಜಮಾಡಿ: ಡಿ.5ರವರೆಗೆ ಹೆಚ್ಚುವರಿ ಟೋಲ್ ಶುಲ್ಕ ವಸೂಲಿ ಇಲ್ಲ
ಆಸುಪಾಸಿನ ಮೂರು ಟೋಲ್‌ಗಳಲ್ಲಿ ಶುಲ್ಕ ಹಂಚಿಹಾಕಲು ಡಿಸಿ, ಶಾಸಕರಿಂದ ಸಲಹೆ

ಉಡುಪಿ, ಡಿ.2: ಈಗ ಶಾಶ್ವತವಾಗಿ ಮುಚ್ಚಿರುವ ಸುರತ್ಕಲ್ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ನಲ್ಲಿ ಪಡೆಯುವುದನ್ನು ಡಿ.5ರವರೆಗೆ ತಡೆ ಹಿಡಿಯುವಂತೆ ಉಡುಪಿ ಶಾಸಕ ಕೆ.ರಘುಪತಿಭಟ್ ಅವರು  ಡಿ.1ರಂದು ಸಲಹೆ ನೀಡಿದ್ದಾರೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪಿಐಯುನ ಯೋಜನಾ ನಿರ್ದೇಶಕ ಹಾಗೂ ಡಿಜಿಎಂ ಎಚ್.ಎಸ್.ಲಿಂಗೇಗೌಡ ಅವರು ಪ್ರಾಧಿಕಾರದ ಬೆಂಗಳೂರಿನ ಪ್ರಾದೇಶಿಕ ಅಧಿಕಾರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಡಿ.5ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಉಡುಪಿ ಜಿಲ್ಲೆಯ ಸಚಿವರು ಹಾಗೂ ಶಾಸಕರು ಭೇಟಿಯಾಗಿ ಚರ್ಚಿಸುವವರಿದ್ದಾರೆ ಎಂದು ಶಾಸಕ ರಘುಪತಿ ಭಟ್ ದೂರವಾಣಿ ಸಂಭಾಷಣೆಯ ವೇಳೆ ತಿಳಿಸಿದ್ದಾರೆ. ಇದಕ್ಕೆ ಮುನ್ನ ಡಿ.3ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಜನಪ್ರತಿನಿಧಿಗಳ ಸಭೆಯೊಂದನ್ನು ಜಿಲ್ಲಾಡಳಿತದ ವತಿಯಿಂದ ಕರೆಯಲಾಗಿದೆ ಎಂದೂ ಅವರು ತಿಳಿಸಿದ್ದಾರೆ ಎಂದು ಲಿಂಗೇಗೌಡ ವಿವರಿಸಿದ್ದಾರೆ.

ಇದರೊಂದಿಗೆ ಸುರತ್ಕಲ್ ಟೋಲ್‌ನ ಶುಲ್ಕವನ್ನು ಹೆಜಮಾಡಿ ಶುಲ್ಕದೊಂದಿಗೆ ವಿಲೀನಗೊಳಿಸಿದರೆ, ಜಿಲ್ಲೆಯ ಸಚಿವರು ಹಾಗೂ ಶಾಸಕರು ಪ್ರತಿಭಟನೆ ಹಾಗು ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲಿದ್ದಾರೆ. ಹೆಜಮಾಡಿ ಟೋಲ್ ಫ್ಲಾಝಾವನ್ನು ಮುಚ್ಚಿಸುವುದಕ್ಕೂ ಮುಂದಾಗುತ್ತಾರೆ. ಅಲ್ಲದೇ ಹೆಜಮಾಡಿ ಟೋಲ್‌ಗೆ ಪೊಲೀಸರ ಭದ್ರತೆಯನ್ನು ನೀಡದಂತೆ ಹಾಗೂ ಹೆಜಮಾಡಿ ಟೋಲ್ ಸಂಗ್ರಹವನ್ನೇ ನಿಲ್ಲಿಸುತ್ತಾರೆ ಎಂದು ದೂರವಾಣಿ ಸಂಭಾಷಣೆಯ ವೇಳೆ ತಿಳಿಸಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

ಶುಲ್ಕ ಹಂಚಿಹಾಕುವ ಸಲಹೆ: ಇದರೊಂದಿಗೆ ಸುರತ್ಕಲ್ ಟೋಲ್ ಶುಲ್ಕವನ್ನು ಆಸುಪಾಸಿನ ಮೂರು ಟೋಲ್‌ಗಳ (ಬ್ರಹ್ಮರಕೊಚ್ಲು, ತಲಪಾಡಿ ಹಾಗೂ ಹೆಜಮಾಡಿ) ಶುಲ್ಕದೊಂದಿಗೆ ಸಮಾನವಾಗಿ ಹಂಚಿಹಾಕುವಂತೆ ಶಾಸಕರು ಸಲಹೆ ನೀಡಿದ್ದಾರೆ. ಇದರಿಂದ ಹೆಜಮಾಡಿಯ ಒಂದೇ ಟೋಲ್‌ನಲ್ಲಿ ಸಂಪೂರ್ಣ ಶುಲ್ಕ ವಿಧಿಸುವ ಸಮಸ್ಯೆ ತಪ್ಪುತ್ತದೆ. ಇಲ್ಲದಿದ್ದರೆ ಹೆಜಮಾಡಿ ಟೋಲ್ ಫ್ಲಾಝಾದ ಎದುರು ಸಾರ್ವಜನಿಕ ಪ್ರತಿಭಟನೆ ನಡೆಯಲಿದ್ದು, ಜನತೆಗೆ ಉತ್ತರಿಸಲು ನಮಗೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ ಎಂದರು.

ಉಡುಪಿ ಜಿಲ್ಲಾಧಿಕಾರಿಯವರು ಸಹ ಸುರತ್ಕಲ್ ಫ್ಲಾಝಾದ ಶುಲ್ಕವನ್ನು ಮೂರು ಟೋಲ್ ಫ್ಲಾಝಾಗಳಲ್ಲಿ ಸಮಾನವಾಗಿ ಹಂಚಿಹಾಕಲು ಪ್ರಸ್ತಾಪವನ್ನು  ನಮಗೆ ನೀಡಿದ್ದಾರೆ. ಇದರೊಂದಿಗೆ ಹೆಜಮಾಡಿ ಟೋಲ್‌ನಲ್ಲಿ ಸಂಗ್ರಹಿಸಬೇಕಾದ ಶುಲ್ಕದ ವಿಧಾನಗಳ ಬಗ್ಗೆ ಚರ್ಚಿಸಲು ಡಿ.3ರಂದು ಜನಪ್ರತಿನಿಧಿಗಳ ಸಭೆ ಕರೆದಿರುವುದಾಗಿಯೂ ಅವರು ತಿಳಿಸಿದ್ದಾರೆ ಎಂದು ಲಿಂಗೇಗೌಡರು ಪ್ರಾದೇಶಿಕ ಅಧಿಕಾರಿ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

share
Next Story
X