Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಭಟನೆಗಳ ಮೇಲೆ `ತುರ್ತುಪರಿಸ್ಥಿತಿ'...

ಪ್ರತಿಭಟನೆಗಳ ಮೇಲೆ `ತುರ್ತುಪರಿಸ್ಥಿತಿ' ಮಟ್ಟದ ಸೆನ್ಸಾರ್ಶಿಪ್: ಚೀನಾ ಕ್ರಮ

2 Dec 2022 10:19 PM IST
share
ಪ್ರತಿಭಟನೆಗಳ ಮೇಲೆ `ತುರ್ತುಪರಿಸ್ಥಿತಿ ಮಟ್ಟದ ಸೆನ್ಸಾರ್ಶಿಪ್: ಚೀನಾ ಕ್ರಮ

ಬೀಜಿಂಗ್, ಡಿ.2: ಶೂನ್ಯ ಕೋವಿಡ್ ನೀತಿಯನ್ನು ವಿರೋಧಿಸಿ ದೇಶದಾದ್ಯಂತ ಭುಗಿಲೆದ್ದ ಅಸಾಮಾನ್ಯ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಪ್ರತಿಭಟನೆಯ ವಿರುದ್ಧ `ತುರ್ತುಪರಿಸ್ಥಿತಿ' (``emergency'')ಮಟ್ಟದ ಸೆನ್ಸಾರ್ಶಿಪ್ ಕ್ರಮಗಳನ್ನು ಚೀನೀ ಅಧಿಕಾರಿಗಳು ಅನುಸರಿಸುತ್ತಿರುವುದು ಸೋರಿಕೆಯಾದ ಮಾಹಿತಿಯಿಂದ ತಿಳಿದು ಬಂದಿದೆ ಎಂದು `ದಿ ಗಾರ್ಡಿಯನ್'  (``The Guardian'')ವರದಿ ಮಾಡಿದೆ.

ಪ್ರತಿಭಟನೆ ಸಂಬಂಧಿತ ಮಾಹಿತಿಯನ್ನು ಹಂಚಿಕೊಳ್ಳಲು ಮೀಸಲಾಗಿರುವ ಟ್ವಿಟರ್ ಖಾತೆಯಿಂದ, ಪ್ರತಿಭಟನೆಯ ವರದಿ ಮೊದಲು ಪ್ರಕಟವಾದ ಆನ್ಲೈನ್ ಚೀನೀ ವೇದಿಕೆಗಳಿಗೆ ನೀಡಲಾದ ನಿರ್ದೇಶನಗಳು ಸೋರಿಕೆಯಾಗಿವೆ ಎಂದು ವರದಿ ಹೇಳಿದೆ. 

ವಿಪಿಎನ್ ಗಳು ಹಾಗೂ ಆನ್ಲೈನ್ ಸೆನ್ಸಾರ್ಶಿಪ್ ಗಳನ್ನು ಬೈಪಾಸ್ ಮಾಡುವ (ತಪ್ಪಿಸಿಕೊಳ್ಳುವ) ವಿಧಾನಗಳನ್ನು ದಮನಿಸುವುದು, ಪ್ರತಿಭಟನೆ ನಡೆಸುವವರನ್ನು ಪತ್ತೆಹಚ್ಚಿ ಪ್ರಶ್ನಿಸುವುದು ಇದರಲ್ಲಿ ಸೇರಿದೆ. ಅಧಿಕಾರಿಗಳು ಜಾರಿಗೊಳಿಸಿರುವ ನಿರ್ದೇಶನದಲ್ಲಿ ` ಆಫ್ಲೈನ್ ಅಡಚಣೆಗಳು ಹಾಗೂ ವಿವಿಧ ಪ್ರಾಂತಗಳಲ್ಲಿ ಇತ್ತೀಚೆಗೆ ನಡೆದ `ಹೆಚ್ಚು ಗಮನ ಸೆಳೆದ ಘಟನೆಗಳನ್ನು'  ತ್ವರಿತವಾಗಿ ಗುರುತಿಸಿ, ಅದನ್ನು ಪರಿಶೀಲಿಸಿ ಮತ್ತು ಅದರಲ್ಲಿ ಏನಿದೆ ಎಂಬ ಬಗ್ಗೆ ಪ್ರಾಥಮಿಕ ಹಂತದಲ್ಲಿ ಗಮನ ಹರಿಸಲು ಸಾಧ್ಯವಾಗುವ ನಿಟ್ಟಿನಲ್ಲಿ `ಕಂಟೆಂಟ್ ಮ್ಯಾನೇಜ್ಮೆಂಟ್' ವ್ಯವಸ್ಥೆಯನ್ನು ಬಲಗೊಳಿಸುವಂತೆ' ನಿರ್ವಾಹಕರಿಗೆ ಆದೇಶಿಸಲಾಗಿದೆ.

`ಶಾಂಘೈನಲ್ಲಿ ವಿನಾಶಕಾರಿ ರಾಜಕೀಯ ಘೋಷಣೆಗಳು ಕಾಣಿಸಿಕೊಂಡವು. ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಜಗತ್ತಿನ ಗಮನ ಸೆಳೆಯುವ ಮಟ್ಟದಲ್ಲಿ ರಾಜಕೀಯ ಸಭೆ ನಡೆಸಿದರು. ಇಮೇಜ್ಗೆ ಧಕ್ಕೆ ತರುವ ವಿದೇಶಿ ಮಾಧ್ಯಮಗಳ ಕಾರ್ಯ ಹೆಚ್ಚಿತು' ಎಂದು ನಿರ್ದೇಶನದಲ್ಲಿ ಉಲ್ಲೇಖಿಸಲಾಗಿದೆ. ಚೀನಾದ `ಗ್ರೇಟ್ ಫೈರ್ವಾಲ್' ಎಂದು ಕರೆಯಲ್ಪಡುವ ವ್ಯವಸ್ಥೆಯಿಂದ ನುಣುಚಿಕೊಳ್ಳಲು ನಾಗರಿಕರಲ್ಲಿ ಆಸಕ್ತಿ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. 

ಪ್ರದರ್ಶನಗಳನ್ನು ಕಟ್ಟುನಿಟ್ಟಾಗಿ ಸೆನ್ಸಾರ್ ಮಾಡಲಾಗಿದ್ದರೂ ಪ್ರತಿಭಟನಾಕಾರರು ಮತ್ತು ಇತರ ನಾಗರಿಕರು ಚೀನಾದಲ್ಲಿ ಚೀನಾದಲ್ಲಿ ನಿಷೇಧಿಸಲಾಗಿರುವ ಚೀನೀಯೇತರ ಸುದ್ಧಿ ಮತ್ತು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳನ್ನು ಪ್ರವೇಶಿಸಲು ವಿಪಿಎನ್ ಗಳನ್ನು ಬಳಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

share
Next Story
X