Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾನುವಾರುಗಳಿಗೆ ವಂದೇ ಭಾರತ್ ರೈಲು...

ಜಾನುವಾರುಗಳಿಗೆ ವಂದೇ ಭಾರತ್ ರೈಲು ಢಿಕ್ಕಿ; ಎರಡು ತಿಂಗಳುಗಳಲ್ಲಿ ಅವಘಡದ ನಾಲ್ಕನೇ ಘಟನೆ

2 Dec 2022 10:25 PM IST
share
ಜಾನುವಾರುಗಳಿಗೆ ವಂದೇ ಭಾರತ್ ರೈಲು ಢಿಕ್ಕಿ; ಎರಡು ತಿಂಗಳುಗಳಲ್ಲಿ ಅವಘಡದ ನಾಲ್ಕನೇ ಘಟನೆ

ಮುಂಬೈ,ಡಿ.2: ವಂದೇ ಭಾರತ್ ಸೂಪರ್‌ಫಾಸ್ಟ್ ರೈಲು, ಜಾನುವಾರುಗಳಿಗೆ ಢಿಕ್ಕಿ ಹೊಡೆದ ಸರಣಿ ಘಟನೆಗಳು ವರದಿಯಾಗಿರುವಂತೆಯೇ, ಗುರುವಾರ ಸಂಜೆಯ  ಅಂತಹದೇ  ಅವಘಡವು ಮರುಕಳಿಸಿದೆ. ಗಾಂಧಿನಗರ-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಗುಜರಾತ್‌ನ ಉಡ್ವಾಡ ಹಾಗೂ ವಾಪಿ ರೈಲು ನಿಲ್ದಾಣಗಳ ನಡುವೆ ದನಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಅವಘಡದಿಂದಾಗಿ ರೈಲಿನ ಮುಂಭಾಗದ ಫಲಕಕ್ಕೆ ಸಣ್ಣಪುಟ್ಟ ಹಾನಿಯಾಗಿರುವುದಾಗಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಉಡ್ವಾಡ  ಹಾಗೂ ವಾಪಿ ರೈಲು ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 87ರ ಸಮೀಪ ಈ ಘಟನೆ ಸಂಭವಿಸಿದೆಯೆಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಮಿತ್ ಠಾಕೂರ್ ತಿಳಿಸಿದ್ದಾರೆ.

ರೈಲಿನ ಮುಂಭಾಗಕ್ಕಾದ ಹಾನಿಯಿಂದಾಗಿ ಅದರ ಕಾರ್ಯನಿರ್ವಹಣೆಗೆ ಯಾವುದೇ ಸಮಸ್ಯೆಯಾಗಿಲ್ಲವೆಂದವರು ಹೇಳಿದ್ದಾರೆ. ಅವಘಡದ ಬಳಿಕ ತುಸು ಹೊತ್ತು ಸ್ಥಳದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ಆನಂತರ ಸಂಜೆ 6.35ರ ವೇಳೆಗೆ ಅದು ಪ್ರಯಾಣವನ್ನು ಪುನಾರಂಭಿಸಿತೆಂದು ಸುಮಿತ್ ಠಾಕೂರ್ ತಿಳಿಸಿದ್ದಾರೆ.

ಸೆಮಿ ಹೈಸ್ಪೀಡ್ ರೈಲು ಆಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಎರಡು ತಿಂಗಳ ಹಿಂದೆ ಕಾರ್ಯಾರಂಭಿಸಿದ ಬಳಿಕ  ದಾರಿ ಮಧ್ಯೆ  ಅವಘಡ ಸಂಭವಿಸಿದ ನಾಲ್ಕನೆ ಘಟನೆ ಇದಾಗಿದೆ.

ಆಕ್ಟೋಬರ್ 6ರಂದು  ಗುಜರಾತ್‌ನ ವಾಟ್ವಾ ರೈಲು ನಿಲ್ದಾಣದ ಸಮೀಪ ರೈಲು ಹಳಿಯಲ್ಲಿ  ವಂದೇ ಭಾರತ್  ಹೈಸ್ಪೀಡ್ ರೈಲು ಜಾನುವಾರುಗಳಿಗೆ  ಢಿಕ್ಕಿ ಹೊಡೆದಿದ್ದರಿಂದ ರೈಲಿಗೆ  ಹಾನಿಯಾಗಿತ್ತು.

ಮಾರನೆ ದಿನವೇ, ಅಕ್ಚೋಬರ್ 7ರಂದು ಕಂಜಾರಿ ಹಾಗೂ ಆನಂದ್ ರೈಲು ನಿಲ್ದಾಣದ ನಡುವೆ, ದನಕ್ಕೆ ಡಿಕ್ಕಿ ಹೊಡೆದಿದ್ದರಿಂದ  ರೈಲಿನ ಮೂತಿಯ ಫಲಕ ಜಖಂಗೊಂಡಿತ್ತು. ಅದೇ ತಿಂಗಳಲ್ಲಿ, ಗುಜರಾತ್‌ನ ವಲ್ಸಾಡ್ ಸಮೀಪದ ಅತುಲ್ ನಿಲ್ದಾಣದಲ್ಲಿ ವಂದೇ ಭಾರತ್ ರೈಲು, ದನಕ್ಕೆ ಢಿಕ್ಕಿ ಹೊಡೆದಿತ್ತು.

share
Next Story
X