Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರವಾದಿ ಬದುಕು ಸರ್ವ ಕಾಲಕ್ಕೂ ಮಾದರಿ:...

ಪ್ರವಾದಿ ಬದುಕು ಸರ್ವ ಕಾಲಕ್ಕೂ ಮಾದರಿ: ಅಥರ್ ಖಾನ್

ಎಚ್‌ಐಎಫ್‌ ಇಂಡಿಯಾ ವತಿಯಿಂದ ಪ್ರವಾದಿ ಮುಹಮ್ಮದ್(ಸ)ರ ಜೀವನ-ಸಂದೇಶ ಅಭಿಯಾನದ ಸಮಾರೋಪ

2 Dec 2022 10:38 PM IST
share
ಪ್ರವಾದಿ ಬದುಕು ಸರ್ವ ಕಾಲಕ್ಕೂ ಮಾದರಿ: ಅಥರ್ ಖಾನ್
ಎಚ್‌ಐಎಫ್‌ ಇಂಡಿಯಾ ವತಿಯಿಂದ ಪ್ರವಾದಿ ಮುಹಮ್ಮದ್(ಸ)ರ ಜೀವನ-ಸಂದೇಶ ಅಭಿಯಾನದ ಸಮಾರೋಪ

ಮಂಗಳೂರು: ಪ್ರವಾದಿ ಮುಹಮ್ಮದ್ (ಸ) ಅವರ ನಡೆನುಡಿ, ಬದುಕು ಸರ್ವರಿಗೂ, ಸರ್ವಕಾಲಕ್ಕೂ ಮಾದರಿಯಾಗಿದೆ. ಅದನ್ನು ಮನನ ಮಾಡುವುದರ ಜೊತೆಗೆ ಪ್ರತಿಯೊಬ್ಬರೂ ತನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭೋಪಾಲ್‌ನ ಅಲ್ ಅಸ್ರ್  ಫೌಂಡೇಶನ್‌ನ ಅಧ್ಯಕ್ಷ, ಧಾರ್ಮಿಕ ವಿದ್ವಾಂಸ ಅಥರ್ ಖಾನ್ ಹೇಳಿದರು.

ಮಂಗಳೂರಿನ ‘ಹೈಲ್ಯಾಂಡ್ ಇಸ್ಲಾಮಿಕ್ ಫೋರಂ (ಎಚ್‌ಐಎಫ್) ಇಂಡಿಯಾ’ ಹಮ್ಮಿಕೊಂಡಿದ್ದ ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ಸಂದೇಶ ಅಭಿಯಾನ (ಸೀರತ್ ಕಾರ್ಯಕ್ರಮ)ದ ಪ್ರಯುಕ್ತ ನಗರದ ಪುರಭವನದಲ್ಲಿ ಶುಕ್ರವಾರ ನಡೆದ ಸಮಾರೋಪ ಸಮಾರಂಭದಲ್ಲಿ ‘ನಾನೇಕೆ ಪ್ರವಾದಿಯಂತೆ ಆಗಬೇಕು’ ಎಂಬ ವಿಷಯ ಕುರಿತು ಅವರು ಸಂದೇಶ ನೀಡಿದರು.

ಪ್ರವಾದಿಯ ಕಾಲದ ಅನುಯಾಯಿಗಳು ಪ್ರವಾದಿ (ಸ) ಅವರನ್ನು ಪ್ರತೀ ಹೆಜ್ಜೆಯಲ್ಲೂ ಅನುಸರಿಸುತ್ತಿದ್ದರು. ತಮ್ಮ ಮಕ್ಕಳಿಗೆ ಪ್ರವಾದಿಯ ಜೀವನದ ಪ್ರತಿಯೊಂದು ಕ್ಷಣವನ್ನೂ ಕೂಡ ಬೋಧಿಸುತ್ತಿದ್ದರು. ಆದರೆ ಆಧುನಿಕತೆಯತ್ತ ವಾಲುತ್ತಿರುವ ಇಂದಿನ ಯುವಜನತೆ ಪ್ರವಾದಿಯ ನಡೆನುಡಿಯಿಂದ ವಿಮುಖರಾಗುತ್ತಿರುವುದು ವಿಷಾದನೀಯ ಎಂದು ಅಥರ್ ಖಾನ್ ಅಭಿಪ್ರಾಯಪಟ್ಟರು.

ನಾವು ದಿನನಿತ್ಯ ನಮ್ಮ ಮಕ್ಕಳಿಗೆ ಪ್ರವಾದಿಯ ಜೀವನ ಮತ್ತು ಸಂದೇಶವನ್ನು ಕಲಿಸಿಕೊಡಬೇಕು. ಸಂಬಂಧ ಗಳನ್ನು ವೃದ್ಧಿಸುವಂತಹ, ಮಾನವೀಯ ಮೌಲ್ಯಗಳನ್ನು ಸದಾ ಹೇಳಿಕೊಡಬೇಕು. ಅಷ್ಟೇ ಅಲ್ಲ, ಸದಾ ಪ್ರವಾದಿಯ ಪ್ರತಿರೂಪವಾಗಿ ನಾವು ಬಾಳಬೇಕು. ಬದುಕಿನುದ್ದಕ್ಕೂ ಅವರನ್ನು ನಾವು ಮಾದರಿಯಾಗಿ ಸ್ವೀಕರಿಸಬೇಕು. ಇದರಿಂದ ಜೀವನದ ಪ್ರತಿಯೊಂದು ಹಂತದಲ್ಲೂ ಯಶಸ್ವಿ ಸಾಧಿಸಲು ಸಾಧ್ಯವಿದೆ ಎಂದು ಅಥರ್ ಖಾನ್ ಹೇಳಿದರು.

ಹದೀಸ್‌ಗಳು ಹಲವಾರು ಇವೆ. ಅದನ್ನು ಪಾಲಿಸುತ್ತಲೇ ಉನ್ನತ ಮಟ್ಟದ ವ್ಯಕ್ತಿತ್ವ ಹೊಂದಿದ್ದ ಪ್ರವಾದಿಯ ಮಾನವೀಯ ಮೌಲ್ಯವನ್ನು ಅರ್ಥ ಮಾಡಿಕೊಂಡು ಮುನ್ನಡೆಯಬೇಕು. ಆ ಮೂಲಕ ಸಮಾಜಕ್ಕೆ, ಸಮುದಾಯಕ್ಕೆ ಒಳಿತಿನ ಸಂದೇಶಕರಾಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಎಚ್‌ಐಎಫ್-ಇಂಡಿಯಾ ಅಧ್ಯಕ್ಷ ನಾಝಿಮ್ ಎ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ಹನೀಫ್ ಪಿ.ಎಸ್. ಸ್ವಾಗತಿಸಿದರು. ಎಚ್‌ಐಎಫ್ ಜೊತೆ ಕಾರ್ಯದರ್ಶಿ ಮುಹಮ್ಮದ್ ರಿಝ್ವಾನ್ ಪಾಂಡೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಫಾಯಿಖ್ ಅಹ್ಮದ್ ಮತ್ತು ಮುಹಮ್ಮದ್ ಅರ್ಮಾನ್ ಕಿರಾಅತ್ ಪಠಿಸಿದರು. ಬಿಲಾಲ್ ರಾಯಿಫ್ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

share
Next Story
X