Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುತ್ ದರ ಇಳಿಕೆಗೆ ಚಿಂತನೆ: ಸಚಿವ...

ವಿದ್ಯುತ್ ದರ ಇಳಿಕೆಗೆ ಚಿಂತನೆ: ಸಚಿವ ಸುನಿಲ್ ಕುಮಾರ್

3 Dec 2022 12:19 AM IST
share
ವಿದ್ಯುತ್ ದರ ಇಳಿಕೆಗೆ ಚಿಂತನೆ: ಸಚಿವ ಸುನಿಲ್ ಕುಮಾರ್

ಬೆಂಗಳೂರು, ಡಿ. 2: ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾವವನ್ನು ಇಂಧನ ಇಲಾಖೆ ಸಿದ್ಧಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಯುನಿಟ್‍ಗೆ 70 ಪೈಸೆಯಿಂದ 2ರೂ.ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ.

ಪ್ರತಿ ವರ್ಷ ನಡೆಸುವ ವಾರ್ಷಿಕ ದರ ಪರಿಷ್ಕರಣೆಯಲ್ಲಿ ವಿದ್ಯುತ್ ಶುಲ್ಕ ಹೆಚ್ಚಳದಿಂದ ಗ್ರಾಹಕರ ಮೇಲೆ ಹೊರೆ ಹೇರಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಲು ಇಂಧನ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸರಬರಾಜು ಕಂಪೆನಿಗಳಿಂದ ಕೆಇಆರ್‍ಸಿಗೆ ಸಲ್ಲಿಸುವ ಪ್ರಸ್ತಾವನೆಯಲ್ಲಿ ‘ಬಳಕೆದಾರರ ಶುಲ್ಕವನ್ನು’ವನ್ನು ಕಡಿಮೆ ಮಾಡಿ ದರಪಟ್ಟಿಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಈ ಪ್ರಸ್ತಾವ ಕೇವಲ ಗೃಹ ಬಳಕೆ ಗ್ರಾಹಕರಿಗೆ ಮಾತ್ರವಲ್ಲ, ಎಚ್.ಟಿ, ಕೈಗಾರಿಕೆ, ವಾಣಿಜ್ಯ ಮತ್ತು ಎಲ್.ಟಿ ಗ್ರಾಹಕರಿಗೂ ಅನ್ವಯವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ವಿಧಿಸಿದ್ದ ಕ್ರಾಸ್ ಸಬ್ಸಿಡಿ ಗ್ರಾಹಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅವರು ಗ್ರಿಡ್ ತೊರೆಯುತ್ತಿದ್ದರು. ಹೀಗಾಗಿ ಎಚ್.ಟಿ.ಗ್ರಾಹಕರನ್ನು ಉಳಿಸಿಕೊಳ್ಳುವುದಕ್ಕಾಗಿ ಕ್ರಾಸ್ ಸಬ್ಸಿಡಿಯನ್ನು ಸಡಿಲಿಸಲು ಬೆಸ್ಕಾಂ ವ್ಯಾಪ್ತಿಯಲ್ಲಿ ಹೊಸ ಪ್ರಸ್ತಾವ ಸಲ್ಲಿಕೆಯಾಗಿದ್ದು,  ಪ್ರತ್ಯೇಕ ಶುಲ್ಕ ಪದ್ಧತಿಯನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮೀಣ ಗ್ರಾಹಕರಿಗೆ ರಿಯಾಯಿತಿ ?: ಇಂಧನ ಇಲಾಖೆ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತುಸು ರಿಯಾಯಿತಿ ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಹಕರಿಗೆ ಬಳಕೆದಾರರ ಶುಲ್ಕದಲ್ಲಿ 25 ಪೈಸೆಯಷ್ಟು ರಿಯಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 50 ಯುನಿಟ್ ವರೆಗೆ ಲೈಫ್ ಲೈನ್ ಬಳಕೆಯ ಎಲ್ಟಿ 2 (ಎ1) ಹಾಗೂ ಎಲ್ಟಿ 2(ಎ2) ಗ್ರಾಹಕರಿಗೆ ಈಗ ಪ್ರತಿ ಯುನಿಟ್‍ಗೆ ವಿಧಿಸುತ್ತಿದ್ದ 4.15 ರೂ. ಹಾಗೂ 4.05 ರೂ. ಶುಲ್ಕವನ್ನು 3.6 ರೂ.ಗೆ ಇಳಿಸಲು ಚಿಂತನೆ ನಡೆಸಲಾಗಿದೆ. 

50 ರಿಂದ 200 ಯುನಿಟ್‍ವರೆಗಿನ ಬಳಕೆಗೆ ಈ ವರೆಗೆ ವಿಧಿಸುತ್ತಿದ್ದ ಎರಡು ಸ್ಲ್ಯಾಬ್‍ಗ ಳನ್ನು ಒಂದಕ್ಕೆ ಇಳಿಸಲು ನಿರ್ಧರಿಸಲಾಗಿದ್ದು, ಸರಾಸರಿ 5.4 ರೂ. ಪ್ರತಿ ಯುನಿಟ್ ಸರಾಸರಿ ಬಳಕೆದಾರರ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರಿಂದ ಪ್ರತಿ ಯುನಿಟ್‍ಗೆ ಸರಾಸರಿ 2 ರೂ.ವರೆಗೂ ಇಳಿಕೆ ಮಾಡುವುದಕ್ಕೆ ಸಾಧ್ಯವಿದೆ ಎಂದು ಹೇಳಲಾಗುತ್ತಿದೆ. 200 ಯುನಿಟ್ ಹಾಗೂ ನಂತರದ ಬಳಕೆದಾರರಿಗೆ ಈಗಿರುವ 8.20  ಹಾಗೂ 7.70 ರೂ.ದರವನ್ನು ಏಕೀಕೃತಗೊಳಿಸಿ 7 ರೂ.ಗೆ ಇಳಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಸಮಯಾಧಾರಿತ ಶುಲ್ಕ: ಇದರ ಜತೆಗೆ ಎಚ್.ಟಿ.ಗ್ರಾಹಕರಿಗೆ ಸಮಯಾಧಾರಿತ ಶುಲ್ಕ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ. ದಿನದಲ್ಲಿ 11 ಗಂಟೆ ವಿದ್ಯುತ್ ಬಳಕೆದಾರರ ಶುಲ್ಕದಲ್ಲಿ ಕಡಿತ ಮಾಡಿ ಹೆಚ್ಚಿನ ರಿಯಾಯಿತಿ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಯುನಿಟ್‍ಗೆ ಈ ಮೊದಲು ವಿಧಿಸುತ್ತಿದ್ದ 6.60 ರೂ. ಬಳಕೆದಾರರ ಶುಲ್ಕ ಹೊಸ ಪ್ರಸ್ತಾವದಿಂದ ಇಳಿಕೆಯಾಗುವ ಸಾಧ್ಯತೆ ಹೆಚ್ಚಿದ್ದು 75 ಪೈಸೆವರೆಗೆ ರಿಯಾಯಿತಿ ಸಿಗಬಹುದು ಎನ್ನಲಾಗಿದೆ.

‘ಈ ಬಾರಿ ವಿದ್ಯುತ್ ಶುಲ್ಕ ಪರಿಷ್ಕರಣೆ ಸಂದರ್ಭದಲ್ಲಿ ಜನಪರ ನಿಲುವು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಸಾಕಷ್ಟು ಪೂರ್ವ ತಯಾರಿ ನಡೆಸಲಾಗುತ್ತಿದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹೇರಿ ಗ್ರಾಹಕ ಸ್ನೇಹಿಯಾಗುವ ಮೂಲಕ ರಾಜ್ಯ ಸರಕಾರ ಇನ್ನಷ್ಟು ಜನಪರವಾಗಲಿದೆ. ಬಳಕೆದಾರರ ಶುಲ್ಕ ಇಳಿಕೆಗೆ ಚಿಂತನೆ ನಡೆದಿದೆ’

-ವಿ.ಸುನಿಲ್ ಕುಮಾರ್, ಇಂಧನ ಸಚಿವ

share
Next Story
X