Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು ವಿವಿ | 2ನೇ ಸ್ನಾತಕೋತ್ತರ...

ಬೆಂಗಳೂರು ವಿವಿ | 2ನೇ ಸ್ನಾತಕೋತ್ತರ ಪದವಿಗೆ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರಾಕರಣೆ; ವ್ಯಾಪಕ ಆಕ್ಷೇಪ

ಸುತ್ತೋಲೆ ವಾಪಸ್ ಗೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಒತ್ತಾಯ

3 Dec 2022 9:04 PM IST
share
ಬೆಂಗಳೂರು ವಿವಿ | 2ನೇ ಸ್ನಾತಕೋತ್ತರ ಪದವಿಗೆ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರಾಕರಣೆ; ವ್ಯಾಪಕ ಆಕ್ಷೇಪ
ಸುತ್ತೋಲೆ ವಾಪಸ್ ಗೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಒತ್ತಾಯ

ಬೆಂಗಳೂರು, ಡಿ.3: 2022-23ನೆ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೆ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದು ವ್ಯಾಪಕ ಆಕ್ಷೇಪಕ್ಕೆ ಕಾರಣವಾಗಿದೆ.

ಸರಕಾರದ ಆದೇಶದನ್ವಯ ಒಂದು ಬಾರಿ ಸರಕಾರಿ ಅಥವಾ ವಿಶ್ವ ವಿದ್ಯಾಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತಿ ಸೂಕ್ಷ್ಮವಾಗಿ ಪರಿಗಣಿಸಿ, ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು ಎಂದು ಸೂಚಿಸಲಾಗಿದೆ.

ಆದುದರಿಂದ, ಎಲ್ಲ ಪ್ರಧಾನ ಕ್ಷೇಮಪಾಲಕರು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ, ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ, ಮೊದಲ ಪಿಜಿ/ಎರಡನೆ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು ಎಂದು ಕುಲಸಚಿವರು ಸೂಚನೆ ನೀಡಿದ್ದಾರೆ.

ರಮೇಶ್ ಬಾಬು ಆಕ್ರೋಶ: ‘ಉನ್ನತ ಶಿಕ್ಷಣ ಸಚಿವರ ಸೂಚನೆಗೆ ಅನುಗುಣವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದ್ದು ಬಿಜೆಪಿಯು ದಲಿತರ ವಿರೋಧಿ ಮತ್ತು ದಲಿತರ ವ್ಯಾಸಂಗಕ್ಕೆ ಅಡ್ಡಿಪಡಿಸುವ ಮನಸ್ಥಿತಿಯನ್ನು ಮತ್ತೊಮ್ಮೆ ವ್ಯಕ್ತಪಡಿಸುವುದರ ಮೂಲಕ ತನ್ನ ಹಿಡನ್ ಅಜೆಂಡಾ ಜಾರಿಗೊಳಿಸಿದೆ’ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರದ ಎಲ್ಲ ರೀತಿಯ ಬೆಂಬಲ ಮತ್ತು ಸಹಾಯದ ನಡುವೆಯೂ ಸ್ನಾತಕೋತ್ತರ ಹಾಗೂ ಉನ್ನತ ವ್ಯಾಸಂಗಕ್ಕೆ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಸರಕಾರದ ನೀತಿ ಮತ್ತು ನಿರೂಪಣೆಗಳು ಯಾವತ್ತೂ ದಲಿತ ವರ್ಗದ ಪರವಾಗಿ ಇರಬೇಕಾಗುತ್ತದೆ. ಬೆಂಗಳೂರು ವಿವಿ ಕುಲಸಚಿವರು ಹೊರಡಿಸಿರುವ ದಲಿತ ವಿರೋಧಿ ಸುತ್ತೋಲೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ಮತ್ತು ಉನ್ನತ ಶಿಕ್ಷಣ ಸಚಿವರು ದಲಿತ ಧಮನಕಾರಿಯಾದ ನೀತಿಗಳನ್ನು ಕೈಬಿಡಬೇಕು. ವಿವಿಯಲ್ಲಿ ದಲಿತ ಧಮನಕಾರಿ ಸುತ್ತೋಲೆಯನ್ನು ಹೊರಡಿಸಿರುವ ಕುಲಸಚಿವರನ್ನು ಅಮಾನತುಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
Next Story
X