Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿಎಂ...

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಗೆ ಶಾಸಕ ರಾಜೇಗೌಡ ಸವಾಲು

ಅಕ್ರಮ ಆಸ್ತಿ ಖರೀದಿ ಆರೋಪ

4 Dec 2022 6:00 PM IST
share
ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಗೆ ಶಾಸಕ ರಾಜೇಗೌಡ ಸವಾಲು
ಅಕ್ರಮ ಆಸ್ತಿ ಖರೀದಿ ಆರೋಪ

ಚಿಕ್ಕಮಗಳೂರು, ಡಿ.4: 'ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅಡ್ಡಗಾಲು ಹಾಕುತ್ತಿದ್ದಾರೆ. ವಿನಾಕಾರಣ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ತನಗೆ ಬೇಸರವಾಗಿದ್ದು,  ಈ ಸಂಬಂಧ ತಾನು ಧರ್ಮಸ್ಥಳ ಸೇರಿದಂತೆ ಶಕ್ತಿ ಕೇಂದ್ರಗಳಲ್ಲಿನ ದೇವರ ಮೊರೆ ಹೋಗುತ್ತೇನೆ' ಎಂದು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.

ಅಕ್ರಮ ಜಮೀನು ಖರೀದಿ ವಿಚಾರವಾಗಿ ಜೀವರಾಜ್ ಆಪ್ತರು ಇತ್ತೀಚೆಗೆ ಶಾಸಕ ರಾಜೇಗೌಡ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿ ಅಧಿಕಾರಿಗಳಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಈ ಸಂಬಂಧ ವಿಡಿಯೋವೊಂದರ ಮೂಲಕ ಹೇಳಿಕೆ ನೀಡಿರುವ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಮಗೆ ಆರಂಭದಿಂದಲೂ ತೊಂದರೆ ನೀಡುತ್ತಿದ್ದು, ಇಂದಿಗೂ ಅದನ್ನು ಮುಂದುವರಿಸಿದ್ದಾರೆ. ಶಾಸಕನಾಗಿ ಜನಪರ ಕೆಲಸ ಮಾಡುವ ನನಗೆ ಸಿಕ್ಕಿದ್ದು, ಈ ಕೆಲಸ ಮಾಡಲು ಶಾಸಕ ಜೀವರಾಜ್ ಅಡ್ಡಗಾಲು ಹಾಕುತ್ತಿದ್ದಾರೆ. ಜೀವರಾಜ್ ಮಾಡಿರುವ ಅನ್ಯಾಯ, ಅಪಪ್ರಚಾರಗಳ ಬಗ್ಗೆ ದೇವರ ಮುಂದೆ ಆಣೆ ಮಾಡಿ ಹೇಳುತ್ತೇನೆ. ಜೀವರಾಜ್ ಹೇಳುವ ದೇವಸ್ಥಾನಕ್ಕೆ ನಾನು ಬರುತ್ತೇನೆ. ಅಲ್ಲಿ ಅವರೂ ಆಣೆ ಮಾಡಲಿ, ನಾನೂ ಆಣೆ ಮಾಡುತ್ತೇನೆ ಎಂದಿದ್ದಾರೆ.

ನಾನು ಸಿದ್ದಾರ್ಥ ಅವರ ಆಸ್ತಿ ಖರೀದಿ ಮಾಡಿರುವುದು ಬಹಳ ವರ್ಷಗಳ ಹಿಂದೆ. ಅಂದಿನ ಜಮೀನಿಗಿದ್ದ ಮಾರುಕಟ್ಟೆ ದರಕ್ಕೆ ಅದನ್ನು ಖರೀದಿ ಮಾಡಿದ್ದೇನೆ. ಅದರ ಅಂದಾಜು ಮೊತ್ತ 14-15 ಕೋಟಿ ಅಷ್ಟೇ, ಆದರೆ ಜೀವರಾಜ್ 274 ಕೋ. ರೂ. ಮೌಲ್ಯದ ಜಮೀನು ಖರೀದಿ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ಜೀವರಾಜ್ ಅವರಿಗೆ 15 ಕೋ. ರೂ., 274 ಕೋ. ರೂ. ನಡುವಿನ ವೆತ್ಯಾಸ ಗೊತ್ತಿಲ್ಲವಾ? 80 ಕೋ. ರೂ. ವಂಚನೆ ಮಾಡಿದ್ದೇನೆ ಎನ್ನುತ್ತಿರುವ ಜೀವರಾಜ್‍ಗೆ ಬುದ್ಧಿ ಇಲ್ಲವಾ? ಅವಿದ್ಯಾವಂತರಾ?, ಜನರಲ್ಲಿ ಏಕೆ ಗೊಂದಲ ಮೂಡಿಸುತ್ತಿದ್ದೀರಿ? ಸರಕಾರಕ್ಕೆ ವಂಚನೆ ಮಾಡಿರುವುದು ನಿಜವಾದರೇ ತನಿಖೆ ಮಾಡಿಸಲಿ, ನಾನು ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ. 

'ಈ ವಿಚಾರವನ್ನು ಸುಮ್ಮನೆ ಬಿಡಲ್ಲ.  ಚರ್ಚು, ಮಸೀದಿ ಸೇರಿದಂತೆ ಎಲ್ಲ ಧಾರ್ಮಿಕ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತೇನೆ, ಕೆಟ್ಟ ಮನಸ್ಥಿತಿಯವರಿಗೆ ಒಳ್ಳೆ ಬುದ್ಧಿ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ, ಶೃಂಗೇರಿ ಕ್ಷೇತ್ರದ ಜನರು ಜೀವರಾಜ್ ಅವರ ನಡವಳಿಕೆ ನೋಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಜೀವರಾಜ್ ಇಂತಹ ಹೇಳಿಕೆ ನೀಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.

ಬಿಜೆಪಿಯವರು ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ತಮ್ಮ ವಿರೋಧಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಆದರೂ ತನಗೆ ಐಟಿ, ಇಡಿ, ಲೋಕಾಯುಕ್ತದಂತಹ ಸಂಸ್ಥೆಗಳ ಬಗ್ಗೆ ಗೌರವ ಇದೆ. ಈ ಸಂಸ್ಥೆಗಳು ಬೆಜೆಪಿಯವರು ಎಂಬ ಕಾರಣಕ್ಕೆ ಸುಮ್ಮನಿರಲ್ಲ, ಬಿಜೆಪಿಯವರ ಮೇಲೂ ಈ ಸಂಸ್ಥೆಗಳಿಂದ ದಾಳಿಯಾಗಿದೆ. ರಾಜಕಾರಣಕ್ಕೂ ಬರುವುದಕ್ಕೂ ಮುನ್ನ ಶೋಭಾ ಕರಂದ್ಲಾಜೆ ಆಸ್ತಿ ಎಷ್ಟಿತ್ತು, ರೈಸ್ ಮಿಲ್ ಮ್ಯಾನೇಜರ್ ಆಗಿದ್ದ ಯಡಿಯೂರಪ್ಪ ಅವರ ಆಸ್ತಿ ಈಗೆಷ್ಟಿದೆ ಎಂಬುದೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. 

share
Next Story
X