ಪುತ್ತೂರು: ಕೆಎಸ್ಸಾರ್ಟಿಸಿ ಬಸ್ನಿಂದ ಬಿದ್ದು ಪ್ರಯಾಣಿಕ ಮೃತ್ಯು

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ನಿಂದ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಾಯಿ ಎಂಬಲ್ಲಿ ನಡೆದಿದೆ.
ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸೋಮಪ್ಪ ನಾಯ್ಕ(48) ಎಂಬವರು ಮೃತಪಟ್ಟವರು.
ಅವರು ಪುತ್ತೂರಿನಿಂದ ಉಪ್ಪಿನಂಗಡಿ ಹಳೆನೇರಂಕಿ ಕಡೆ ಹೋಗುತ್ತಿದ್ದ ಬಸ್್ ನಲ್ಲಿ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್ ನಿಲುಗಡೆ ವೇಳೆ ಬಸ್ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
Next Story