Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.19ರಂದು ರೈತ ಘರ್ಜನಾ ರ‍್ಯಾಲಿ- ದೆಹಲಿ...

ಡಿ.19ರಂದು ರೈತ ಘರ್ಜನಾ ರ‍್ಯಾಲಿ- ದೆಹಲಿ ಚಲೋ | ದ.ಕ. ಜಿಲ್ಲೆಯಿಂದಲೂ ನೂರಾರು ರೈತರು ಭಾಗಿ: ಭಾಕಿಸಂ

6 Dec 2022 12:39 PM IST
share
ಡಿ.19ರಂದು ರೈತ ಘರ್ಜನಾ ರ‍್ಯಾಲಿ- ದೆಹಲಿ ಚಲೋ | ದ.ಕ. ಜಿಲ್ಲೆಯಿಂದಲೂ ನೂರಾರು ರೈತರು ಭಾಗಿ: ಭಾಕಿಸಂ

ಮಂಗಳೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಡಿ. 19ರಂದು ಹಮ್ಮಿಕೊಳ್ಳಲಾಗಿರುವ ರೈತ ರೈತ ಘರ್ಜನಾ ರ‍್ಯಾಲಿ- ದೆಹಲಿ ಚಲೋ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ನೂರಾರು ರೈತರು ಭಾಗವಹಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ದ.ಕ. ಜಿಲ್ಲಾ ಘಟಕ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ, ರೈತರು ಉತ್ಪನ್ನಗಳಿಗೆ ಮಾಡುವ ಖರ್ಚಿನ ಆಧಾರದಲ್ಲಿ ಬೆಲೆ ನಿಗದಿಪಡಿಸಬೇಕೆಂಬುದು ರೈತರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ ಎಂದರು.

ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರೈತರು ಬೆಳೆದ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಸಿಗುವಂತಾಗಬೇಕು. ಕೃಷಿಗೆ ಬಳಸುವ ಒಳ ಸುರಿಗಳು, ಯಂತ್ರೋಪಕರಣಗಳು, ಕೃಷಿ ಪರಿಕರಗಳು, ಪಂಪ್ ಸೆಟ್‌ಗಳು, ಹನಿ ನೀರಾವರಿ ಪರಿಕರಗಳ ಮೇಲಿನ ಜಿಎಸ್‌ಟಿಯನ್ನು ರದ್ದುಗೊಳಿಸಬೇಕು. ಕಿಸಾನ್ ಸಮ್ಮಾನ್ ಯೋಜನೆಯ ಮೊತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕು ಸೇರಿದಂತೆ ಇತರ ಹಲವಾರು ಬೇಡಿಕೆಗಳನ್ನು ಕೇಂದ್ರದ ಗಮನಕ್ಕೆ ತರಲಾಗುವುದು ಎಂದರು.

ರೈತರಿಗೆ ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದ ಕಾರಣ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ರೈತರು ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆಗಳನ್ನು ಎದುರಿಸುವ ಆತಂಕದಲ್ಲೇ ದಿನ ಕಳೆಯುವಂತಾಗಿದೆ. ದ.ಕ. ಜಿಲ್ಲೆಯನ್ನೇ ಗಮನಕ್ಕೆ ತೆಗೆದುಕೊಂಡರೆ ಹಿಂದೆ ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದ ಭತ್ತದ ಬೆಳೆ ಕುಸಿದಿದೆ. ರೈತರ ಬಗ್ಗೆ ಸರಕಾರ ಕಾಳಜಿ ವಹಿಸಿ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ದೆಹಲಿ ಚಲೋ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿ ಪ್ರಸಾದ್ ಹೆಗ್ಡೆ, ಅಂಬುಜಾಕ್ಷ, ಸುಬ್ರಾಯ ಬಿ.ಎಸ್., ಜಯಾನಂದ ಉಪಸ್ಥಿತರಿದ್ದರು.

share
Next Story
X