Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ರಾಪ್ತೆಯ ಸಮ್ಮತಿ ʼಒಪ್ಪಿಗೆʼಯಾಗದು:...

ಅಪ್ರಾಪ್ತೆಯ ಸಮ್ಮತಿ ʼಒಪ್ಪಿಗೆʼಯಾಗದು: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್

6 Dec 2022 2:38 PM IST
share
ಅಪ್ರಾಪ್ತೆಯ ಸಮ್ಮತಿ ʼಒಪ್ಪಿಗೆʼಯಾಗದು: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಕಾನೂನಿನ ಕಣ್ಣಿನಲ್ಲಿ ಅಪ್ರಾಪ್ತ ಬಾಲಕಿಯ ಸಮ್ಮತಿ ಒಪ್ಪಿಗೆಯಾಗುವುದಿಲ್ಲ ಎಂದು ಹೇಳಿರುವ ದಿಲ್ಲಿ ಹೈಕೋರ್ಟ್ 16 ವರ್ಷದ ಬಾಲಕಿಯ ಅತ್ಯಾಚಾರ ನಡೆಸಿದ ಆರೋಪ ಹೊಂದಿರುವ ವ್ಯಕ್ತಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದೇ ಸಂದರ್ಭದಲ್ಲಿ ಸಂತ್ರಸ್ತ ಬಾಲಕಿಯ ಜನ್ಮ ದಿನಾಂಕವನ್ನು ಆಧಾರ್ ಕಾರ್ಡ್ ನಲ್ಲಿ ಬದಲಾಯಿಸಿರುವುದನ್ನೂ ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, “ಬಾಲಕಿಯ ಜನ್ಮ ದಿನಾಂಕವನ್ನು ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿರುವುದು ಗಂಭೀರ ಅಪರಾಧವಾಗಿದೆ” ಎಂದೂ ಅಭಿಪ್ರಾಯ ಪಟ್ಟಿದೆ.

“ಆಧಾರ್ ಕಾರ್ಡ್ ನಲ್ಲಿ ಸಂತ್ರಸ್ತ ಬಾಲಕಿಯ ಜನ್ಮ ದಿನಾಂಕವನ್ನು ತಿದ್ದುಪಡಿ ಮಾಡುವ ಮೂಲಕ ದುರ್ಲಾಭ ಪಡೆಯಲು ಯತ್ನಿಸಿರುವ ಆರೋಪಿಯು, ಬಾಲಕಿಯೊಂದಿಗೆ ದೈಹಿಕ ಸಂಪರ್ಕವೇರ್ಪಟ್ಟಾಗ ಆಕೆ ಅಪ್ರಾಪ್ತೆಯಾಗಿರಲಿಲ್ಲ ಎಂದು ನಿರೂಪಿಸಲು ಪ್ರಯತ್ನಿಸುತ್ತಿರುವಂತಿದೆ” ಎಂದಿರುವ ನ್ಯಾ. ಜಸ್ಮೀತ್ ಸಿಂಗ್, ಆರೋಪಿಯು ಈಗಾಗಲೇ ವಿವಾಹವಾಗಿದ್ದು, 23 ವರ್ಷದನಾಗಿದ್ದಾಗ 16 ವರ್ಷದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಿರುವುದರಿಂದ ಜಾಮೀನು ಪಡೆಯಲು ಅನರ್ಹನಾಗಿದ್ದಾನೆ. ಕಾನೂನಿನ ಕಣ್ಣಿನಲ್ಲಿ ಅಪ್ತಾಪ್ತ ಬಾಲಕಿಯ ಸಮ್ಮತಿ ಒಪ್ಪಿಗೆಯಾಗುವುದಿಲ್ಲ” ಎಂದು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ತನ್ನ  ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ತಂದೆ ನೀಡಿದ್ದ ದೂರನ್ನು ಆಧರಿಸಿ ಪೊಲೀಸರು 2019ರಲ್ಲಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಂಡಿದ್ದರು. ತದನಂತರ ಆಕೆಯನ್ನು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು, ಮರಳಿ ವಾಪಸ್ ಕರೆ ತಂದಿದ್ದರು.

ಯುವಕನೋರ್ವನೊಂದಿಗೆ ಪತ್ತೆಯಾಗಿದ್ದ ಆ ಬಾಲಕಿ, ಸದರಿ ಯುವಕನು ನನ್ನ ಗೆಳೆಯನಾಗಿದ್ದು, ಆತನೊಂದಿಗೆ ಒಂದೂವರೆ ತಿಂಗಳು ಕಳೆದಿದ್ದೆ. ಈ ಸಂದರ್ಭದಲ್ಲಿ ಆತ ನನ್ನ ಒಪ್ಪಿಗೆ ಪಡೆದು ನನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ನಾನು ಆತನೊಂದಿಗೇ ಇರಲು ಬಯಸುತ್ತೇನೆ ಎಂದು ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ನೀಡಿದ್ದಳು.

ಆರೋಪಿಯು ತಾನು 2019ರಿಂದ ಬಂಧನದಲ್ಲಿರುವುದರಿಂದ ಹಾಗೂ ನನ್ನ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ತನಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು.

share
Next Story
X