Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರು ಅನುಭವಿಸಿದ ಸಂಕಷ್ಟವನ್ನು ನೋಟು...

ಜನರು ಅನುಭವಿಸಿದ ಸಂಕಷ್ಟವನ್ನು ನೋಟು ನಿಷೇಧದ ತಪ್ಪೆನ್ನುವಂತಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರ ಹೇಳಿಕೆ

6 Dec 2022 8:18 PM IST
share
ಜನರು ಅನುಭವಿಸಿದ ಸಂಕಷ್ಟವನ್ನು ನೋಟು ನಿಷೇಧದ ತಪ್ಪೆನ್ನುವಂತಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರ ಹೇಳಿಕೆ

ಹೊಸದಿಲ್ಲಿ: ನೋಟು ನಿಷೇಧದಿಂದಾಗಿ ದೇಶಾದ್ಯಂತ ಜನರು ಅನುಭವಿಸಿದ ಸಂಕಷ್ಟವನ್ನು ಆ ನಿರ್ಧಾರದ ತಪ್ಪೆಂದು ಹೇಳಲು ಸಾಧ್ಯವಿಲ್ಲ ಎಂದು ಅಡ್ವೊಕೇಟ್ ಜನರಲ್ ಆರ್. ವೆಂಕಟರಮಣಿ (R. Venkataramani)ಸೋಮವಾರ ಸುಪ್ರೀಂ ಕೋರ್ಟ್ (Supreme Court)ನಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (Narendra Modi)2016 ನವೆಂಬರ್ 8ರಂದು ರೂ. 500 ಮತ್ತು ರೂ. 1000 ಮುಖಬೆಲೆಯ ಕರೆನ್ಸಿ ನೋಟ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದರು. ‘‘ಭ್ರಷ್ಟಾಚಾರ, ಕಪ್ಪುಹಣ ಮತ್ತು ಭಯೋತ್ಪಾದನೆ’’ಯನ್ನು ತಡೆಯುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಅಂದು ಹೇಳಿದ್ದರು. ತಮ್ಮ ಹಳೆಯ ನೋಟ್ ಗಳನ್ನು ಹೊಸ ನೋಟುಗಳಿಗೆ ಬದಲಾಯಿಸುವುದಕ್ಕಾಗಿ ಉದ್ದನೆಯ ಸಾಲುಗಳಲ್ಲಿ ನಿಂತಿದ್ದಾಗ ವೃದ್ಧರು ಸೇರಿದಂತೆ ಹಲವಾರು ಮಂದಿ ಮೃತಪಟ್ಟಿದ್ದರು. ಕೋಟ್ಯಂತರ ಕುಟುಂಬಗಳು ಹಣವಿಲ್ಲದೆ ಸುದೀರ್ಘ ಕಾಲ ಪರದಾಡಿದ್ದವು. ಹಲವಾರು ಮಂದಿ ತಮ್ಮ ಹಳೆಯ ನೋಟ್ ಗಳನ್ನು ಹೊಸ ನೋಟ್ ಗಳಿಗೆ ವಿನಿಯಮ ಮಾಡಲು ಸಾಧ್ಯವಾಗದೆ ಆತ್ಮಹತ್ಯೆಗೂ ಶರಣಾಗಿದ್ದರು.

‘‘ನಿರ್ದಿಷ್ಟ ಬ್ಯಾಂಕ್ ನೋಟ್ ಗಳ (ಜವಾಬ್ದಾರಿ ನಿಲುಗಡೆ) ಕಾಯ್ದೆ, 2017 ಮತ್ತು ಅದರ ಅಧಿಸೂಚನೆಯನ್ನು ಜಾರಿಗೆ ತರುವಾಗ ಸಂಭವಿಸಿರಬಹುದಾದ ಸಂಕಷ್ಟಗಳನ್ನು ನಿರ್ಧಾರದ ದೋಷ ಎಂದು ಹೇಳುವಂತಿಲ್ಲ’’ ಎಂದು ಐವರು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ವೆಂಕಟರಮಣಿ ಹೇಳಿದರು.

ನೋಟ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 58 ಅರ್ಜಿಗಳ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ.

ಕರೆನ್ಸಿ ನೋಟ್ ಗಳನ್ನು ನಿಷೇಧಿಸುವ ನಿರ್ಧಾರವು ಆಸ್ತಿಯ ಹಕ್ಕು, ಸಮಾನತೆಯ ಹಕ್ಕು, ವ್ಯಾಪಾರ, ಉದ್ದಿಮೆ ಅಥವಾ ಉದ್ಯೋಗ ನಡೆಸುವ ಹಕ್ಕು, ಜೀವಿಸುವ ಹಕ್ಕು ಮತ್ತು ಜೀವನೋಪಾಯ ಸಂಪಾದಿಸುವ ಹಕ್ಕು ಸೇರಿದಂತೆ ಹಲವಾರು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿದೆ ಎಂಬುದಾಗಿ ಅರ್ಜಿದಾರರು ದೂರಿದ್ದಾರೆ.

ದೇಶಕ್ಕೆ ಸವಾಲಾಗಿರುವ ನಕಲಿ ಕರೆನ್ಸಿ, ಕಪ್ಪುಹಣ ಮತ್ತು ಭಯೋತ್ಪಾದನೆಗೆ ನಿಧಿ ಪೂರೈಕೆಯಂಥ ಸಮಸ್ಯೆಗಳನ್ನು ಸರಕಾರ ನಿಭಾಯಿಸುವಾಗ, ಜನರಿಗೆ ಕಷ್ಟವಾಯಿತು ಎನ್ನುವುದನ್ನು ಮಾತ್ರ ಪರಿಗಣಿಸುವುದು ಸೂಕ್ತವಲ್ಲ ಎಂದು ಅಟಾರ್ನಿ ಜನರಲ್ ಸೋಮವಾರ ಹೇಳಿದರು.

share
Next Story
X