Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಬೆಳವಣಿಗೆ ದರ ಮುನ್ನೋಟವನ್ನು...

ಭಾರತದ ಬೆಳವಣಿಗೆ ದರ ಮುನ್ನೋಟವನ್ನು 6.9%ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್

6 Dec 2022 8:26 PM IST
share
ಭಾರತದ ಬೆಳವಣಿಗೆ ದರ ಮುನ್ನೋಟವನ್ನು 6.9%ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್

ಹೊಸದಿಲ್ಲಿ, ಡಿ. 6: 2022-23ನೇ ಹಣಕಾಸು ವರ್ಷದ, ಅಂದರೆ ಪ್ರಸಕ್ತ ವರ್ಷದ ಭಾರತದ ಬೆಳವಣಿಗೆ ಮುನ್ನೋ ಟವನ್ನು ವಿಶ್ವಬ್ಯಾಂಕ್ (World Bank)ಮಂಗಳವಾರ ಪರಿಷ್ಕರಿಸಿದ್ದು, 6.5%ದಿಂದ 6.9%ಕ್ಕೆ ಏರಿಸಿದೆ.

ಭಾರತದ ಬೆಳವಣಿಗೆ ಮುನ್ನೋಟವು ಇತರ ಹೆಚ್ಚಿನ ಅಭಿವೃದ್ಧಿಶೀಲ ದೇಶಗಳಿಗೆ ಹೋಲಿಸಿದರೆ ಉತ್ತಮ ಸ್ಥಿತಿಯಲ್ಲಿದೆ ಎಂದು ತನ್ನ ನೂತನ ‘ಇಂಡಿಯಾ ಡೆವೆಲಪ್ಮೆಂಟ್ ಅಪ್ಡೇಟ್’ ('India Development Update')ವರದಿಯಲ್ಲಿ ವಿಶ್ವಬ್ಯಾಂಕ್ ತಿಳಿಸಿದೆ.

ಎರಡನೇ ಹಣಕಾಸು ತ್ರೈಮಾಸಿಕ (ಜುಲೈ-ಸೆಪ್ಟಂಬರ್)ದಲ್ಲೂ ಭಾರತದ 6.3% ಬೆಳವಣಿಗೆಯು ಉತ್ತಮ ಫಲಿತಾಂಶವಾಗಿತ್ತು ಎಂದು ಜಾಗತಿಕ ಬ್ಯಾಂಕ್ ಬಣ್ಣಿಸಿದೆ.

ಭಾರತದ ಎರಡನೇ ತ್ರೈಮಾಸಿಕದ ಒಟ್ಟು ದೇಶಿ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರವು ಕಳೆದ ಬಾರಿಯ ಇದೇ ಅವಧಿಯ ಒಟ್ಟು ದೇಶಿ ಉತ್ಪನ್ನ ಬೆಳವಣಿಗೆ ದರ 8.4%ಕ್ಕಿಂತ ಕಡಿಮೆಯಾಗಿತ್ತು ಎನ್ನುವುದನ್ನು ಕಳೆದ ವಾರ ಬಿಡುಗಡೆಗೊಂಡ ಜಿಡಿಪಿ ಅಂಕಿಅಂಶಗಳು ತಿಳಿಸಿವೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಎಪ್ರಿಲ್-ಜೂನ್) ಭಾರತದ ಆರ್ಥಿಕತೆಯು 13.5%ದಷ್ಟು ಬೆಳೆದಿತ್ತು ಎಂದು ಅಂಕಿಅಂಶಗಳು ಹೇಳಿದ್ದವು.

ಜಾಗತಿಕ ಆರ್ಥಿಕತೆಯು ಎದುರಿಸುತ್ತಿರುವ ಸವಾಲುಗಳ ಹೊರತಾಗಿಯೂ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಗತ್ತಿನ ಪ್ರಮುಖ ದೇಶಗಳ ಪೈಕಿ ಭಾರತವೂ ಒಂದಾಗಿದೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ. ಇದಕ್ಕೆ ಪ್ರಬಲ ಆಂತರಿಕ ಬೇಡಿಕೆಯೇ ಕಾರಣ ಎಂದು ಅದು ತಿಳಿಸಿದೆ.

‘‘ಹದಗೆಡುತ್ತಿರುವ ಬಾಹ್ಯ ಪರಿಸ್ಥಿತಿಯ ಹೊರತಾಗಿಯೂ ಭಾರತದ ಆರ್ಥಿಕತೆಯು ಅಸಾಧಾರಣವಾಗಿ ಚೇತರಿಸುತ್ತಿದೆ. ಆರ್ಥಿಕತೆಯಲ್ಲಿ ಅನುಸರಿಸಲಾಗುತ್ತಿರುವ ಪ್ರಬಲ ಹಾಗೂ ಪ್ರಾಥಮಿಕ ನಿಯಮಗಳು ಭಾರತೀಯ ಆರ್ಥಿಕತೆಯನ್ನು ಉತ್ತಮ ಸ್ಥಿತಿಯಲ್ಲಿರಿಸಿವೆ’’ ಎಂದು ವಿಶ್ವಬ್ಯಾಂಕ್ನ ಭಾರತ ನಿರ್ದೇಶಕ ಆಗಸ್ಟ್ ಟನೊ ಕೊವಾಮೆ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
Next Story
X