Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಕೋಮು ಧ್ರುವೀಕರಣವು ನರೇಂದ್ರ...

ಭಾರತದಲ್ಲಿ ಕೋಮು ಧ್ರುವೀಕರಣವು ನರೇಂದ್ರ ಮೋದಿಯವರ ಜಿ20 ಘೋಷಣೆಯನ್ನು ಸೋಲಿಸುತ್ತದೆ:ಸೀತಾರಾಂ ಯೆಚೂರಿ

6 Dec 2022 8:43 PM IST
share
ಭಾರತದಲ್ಲಿ ಕೋಮು ಧ್ರುವೀಕರಣವು ನರೇಂದ್ರ ಮೋದಿಯವರ ಜಿ20 ಘೋಷಣೆಯನ್ನು ಸೋಲಿಸುತ್ತದೆ:ಸೀತಾರಾಂ ಯೆಚೂರಿ

ಹೊಸದಿಲ್ಲಿ,ಡಿ.6: ದೇಶದಲ್ಲಿ ಹೆಚ್ಚಿರುವ ಕೋಮು ಧ್ರುವೀಕರಣ ಮತ್ತು ಆರ್ಥಿಕ ಕುಸಿತವನ್ನು ನಿಲ್ಲಿಸಿದರೆ ಮಾತ್ರ ಸರಕಾರವು ‘ಸಾರ್ವತ್ರಿಕ ಏಕತೆಯ ಪ್ರಜ್ಞೆಯನ್ನು ’(A sense of 'universal unity')ಉತ್ತೇಜಿಸುತ್ತದೆ ಎಂಬ ಭಾರತದ ಜಿ20 ಅಧ್ಯಕ್ಷತೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಘೋಷಣೆಯು ಸಾಕಾರಗೊಳ್ಳುತ್ತದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ(Sitaram Yechury)ಯವರು ಇಲ್ಲಿ ಸರ್ವಪಕ್ಷ ಸಭೆಯಲ್ಲಿ ಹೇಳಿದರು.

ಭಾರತವು ಡಿ.1ರಂದು ಜಿ20 ಅಧ್ಯಕ್ಷತೆಯ ಆವರ್ತನ ಹುದ್ದೆಯನ್ನು ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ 2023ರಲ್ಲಿ ದಿಲ್ಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಮುನ್ನ ಭಾರತದ ಅಧ್ಯಕ್ಷತೆಯನ್ನು ಯಶಸ್ವಿಗೊಳಿಸಲು ಸಹಕಾರವನ್ನು ಕೋರಲು ಮೋದಿ ಸೋಮವಾರ ಸರ್ವಪಕ್ಷ ಸಭೆಯನ್ನು ಕರೆದಿದ್ದರು.

15 ಪಕ್ಷಗಳ ನಾಯಕರು ಸಭೆಯಲ್ಲಿ ಮಾತನಾಡಿದ್ದು,ಆವರ್ತನ ಸರದಿಯಲ್ಲಿ ಭಾರತವು ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ ಮತ್ತು ಸರಕಾರವು ಇದನ್ನು ತನ್ನ ಸಾಧನೆಯನ್ನಾಗಿ ಬಿಂಬಿಸಬಾರದು ಎಂದು ಹೆಚ್ಚಿನವರು ಹೇಳಿದರು.

ಯೆಚೂರಿ ತನ್ನ ಭಾಷಣದಲ್ಲಿ ಜಿ20 ಅಧ್ಯಕ್ಷತೆಗೆ ತನ್ನ ತತ್ತ್ವವನ್ನಾಗಿ ಸರಕಾರವು ಬಿಂಬಿಸಿರುವ ‘ವಸುಧೈವ ಕುಟುಂಬಕಂ’ ('Vasudhaiva Kudumbakam')ನ ಅರ್ಥ ಏಕರೂಪತೆಯನ್ನು ಹೇರುವುದು ಎಂದಲ್ಲ,ಅದು ಸಾಮಾಜಿಕ ಬಹುತ್ವಗಳನ್ನು ಅಚರಿಸಲಾಗುವ ಜಾಗತಿಕ ಕುಟುಂಬವನ್ನು ಗುರುತಿಸುತ್ತದೆ ಎಂದರು. ವಸುಧೈವ ಕುಟುಂಬಕಂ ಸಂಸ್ಕೃತ ಮೂಲದ್ದಾಗಿದ್ದು,ಜಗತ್ತು ಒಂದು ಕುಟುಂಬ ಎನ್ನುವುದನ್ನು ಸೂಚಿಸುತ್ತದೆ.

ಭಾರತದ ಅಧ್ಯಕ್ಷತೆಯ ಒಂದು ವರ್ಷದ ಅವಧಿಯಲ್ಲಿ ‘ಒಂದು ಭೂಮಿ-ಒಂದು ಕುಟುಂಬ-ಒಂದು ಭವಿಷ್ಯ’ ಎಂಬ ಪರಿಕಲ್ಪನೆಯ ಸುತ್ತ ದೇಶಿಯ ರಾಜಕೀಯ ಪ್ರಚಾರ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಮೋದಿ ಸಭೆಯಲ್ಲಿ ಪ್ರಕಟಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಯೆಚೂರಿ,‘ಸಾಮಾಜಿಕ,ರಾಜಕೀಯ ಮತ್ತು ಆರ್ಥಿಕ ವಲಯಗಳಲ್ಲಿನ ಈ ಆತಂಕಕಾರಿ ಪ್ರವೃತ್ತಿಗಳನ್ನು ನಿವಾರಿಸುವ ಹಾಗೂ ನಮ್ಮ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯದ ಲಕ್ಷಣವನ್ನು ವ್ಯಾಖ್ಯಾನಿಸುವ ಸ್ವಾತಂತ್ರ್ಯ,ಸಮಾನತೆ ಮತ್ತು ಭ್ರಾತೃತ್ವದ ಸಾಂವಿಧಾನಿಕ ಅಡಿಪಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸರಕಾರವು ಪ್ರಕಟಿಸಿರುವ ಪರಿಕಲ್ಪನೆಯ ಸಾಕ್ಷಾತ್ಕಾರವು ನಿರ್ಧರಿಸಲ್ಪಡುತ್ತದೆ ’ಎಂದು  ಹೇಳಿದರು.

share
Next Story
X