Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‍ನ 1,200 ವಿದ್ಯಾರ್ಥಿಗಳಿಗೆ...

ಇರಾನ್‍ನ 1,200 ವಿದ್ಯಾರ್ಥಿಗಳಿಗೆ `ವಿಷಪ್ರಾಶನ' : ವರದಿ

6 Dec 2022 10:04 PM IST
share
ಇರಾನ್‍ನ 1,200 ವಿದ್ಯಾರ್ಥಿಗಳಿಗೆ `ವಿಷಪ್ರಾಶನ : ವರದಿ

ಲಂಡನ್, ಡಿ.6: ಇರಾನ್‍(Iran)ನಲ್ಲಿ ನಡೆಯುತ್ತಿರುವ ದೇಶವ್ಯಾಪಿ ಪ್ರತಿಭಟನೆಯ ಭಾಗವಾಗಿ ಬುಧವಾರದಿಂದ ವಿದ್ಯಾರ್ಥಿಗಳ ಪ್ರತಿಭಟನೆಗೆ ನಿರ್ಧರಿಸಿರುವ ಮಧ್ಯೆಯೇ, ವಿವಿಯ 1,200 ವಿದ್ಯಾರ್ಥಿಗಳ ಗುಂಪು `ಫುಡ್  ಪಾಯಿಸನ್'(``Food Poison'')ಗೆ ಒಳಗಾಗಿದೆ ಎಂದು `ದಿ ಡೈಲಿ ಟೆಲಿಗ್ರಾಫ್' (The Daily Telegraph)ವರದಿ ಮಾಡಿದೆ.

ಅಧಿಕಾರಿಗಳು ಆಹಾರದಲ್ಲಿ ಉದ್ದೇಶಪೂರ್ವಕವಾಗಿ ವಿಷ ಸೇರಿಸಿದ್ದಾರೆ ಎಂದು ಆರೋಪಿಸಿರುವ ಖರಾಝ್ಮಿ(Kharazmi) ಮತ್ತು ಅರಕ್ ವಿವಿ(Arak Vv) ಹಾಗೂ ಇತರ 4 ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ತಮಗೆ ನೀಡಿದ್ದ ಆಹಾರವನ್ನು ಬೀದಿಗೆಸೆದು ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

 ಆಹಾರ ನಂಜಾಗಲು ನೀರಿನಿಂದ ಹರಡುವ ಬ್ಯಾಕ್ಟೀರಿಯಾಗಳು ಕಾರಣ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಆದರೆ ಇದೇ ರೀತಿಯ ಘಟನೆಗಳ ನಮ್ಮ ಹಿಂದಿನ ಅನುಭವಗಳು ಈ ಸಾಮೂಹಿಕ ಫುಡ್ ಪಾಯಿಸನಿಂಗ್‍ಗೆ ಅಧಿಕಾರಿಗಳು ನೀಡುತ್ತಿರುವ ಕಾರಣವನ್ನು ನಿರಾಕರಿಸುತ್ತವೆ ಎಂದು ಇಸ್ಫಹಾನ್ ವಿವಿ(Isfahan Vv)ಯ ವಿದ್ಯಾರ್ಥಿಗಳು ಹೇಳಿದ್ದಾರೆ.

ಹಲವಾರು ಪೀಡಿತ ವಿಶ್ವವಿದ್ಯಾಲಯಗಳಲ್ಲಿನ ಚಿಕಿತ್ಸಾಲಯಗಳು ನಿರ್ಜಲೀಕರಣ ಹಾಗೂ ಆಹಾರ ನಂಜಿನ ಇತರ ಸಂಬಂಧಿತ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧಗಳ ಕೊರತೆಯನ್ನು ಹೊಂದಿವೆ. ಏಕಾಏಕಿ ಉಲ್ಬಣಿಸಿರುವ ರಾಷ್ಟ್ರೀಯ ಪ್ರತಿಭಟನೆಯನ್ನು ತಡೆಯಲು ಉದ್ದೇಶಪೂರ್ವಕ ತಂತ್ರ ಇದಾಗಿರಬಹುದು ಎಂದು ಊಹಿಸಲಾಗಿದೆ.

ವಿದ್ಯಾರ್ಥಿಗಳ ದೇಶವ್ಯಾಪಿ ಪ್ರತಿಭಟನೆ ಬುಧವಾರ(ಡಿಸೆಂಬರ್ 7ರಿಂದ) ಆರಂಭವಾಗಲಿದೆ. ಈ ಮಧ್ಯೆ, ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಇರಾನ್ ರಾಷ್ಟ್ರೀಯ ತಂಡದ ಮಾಜಿ ಆಟಗಾರ ಅಲಿ ದಯೇಯ್ ಮಾಲಕತ್ವದ ರೆಸ್ಟಾರೆಂಟ್ ಹಾಗೂ ಚಿನ್ನಾಭರಣಗಳ ಅಂಗಡಿಗೆ ಇರಾನ್ ಅಧಿಕಾರಿಗಳು ಸೋಮವಾರ ಬೀಗ ಜಡಿದಿದ್ದಾರೆ ಎಂದು ವರದಿಯಾಗಿದೆ.

 ಸುದ್ಧಿಸಂಸ್ಥೆಯ ಸಂಪಾದಕರ  ಬಂಧನ : ಇರಾನ್‍ನ ಫಾರ್ಸ್ ಸುದ್ಧಿಸಂಸ್ಥೆಯ ಸಹಾಯಕ ಮುಖ್ಯ ಸಂಪಾದಕ ಅಬ್ಬಾಸ್ ದರ್ವಿಷ್ ತಾವಂಗರ್‍ರನ್ನು ಸುಳ್ಳು ಸುದ್ಧಿಯ ಆರೋಪದಲ್ಲಿ ಬಂಧಿಸಲಾಗಿದ್ದು ವಿಚಾರಣೆ ಮುಗಿಯುವವರೆಗೆ ಅವರು ಕಸ್ಟಡಿಯಲ್ಲಿ ಇರುತ್ತಾರೆ  ಎಂದು ಸರಕಾರಿ ಸ್ವಾಮ್ಯದ ಐಆರ್‍ಐಬಿ ಟಿವಿ ವಾಹಿನಿ ವರದಿ ಮಾಡಿದೆ.

ಸುದ್ಧಿಸಂಸ್ಥೆಯ ನೆಟ್‍ವರ್ಕ್ ಅನ್ನು ಹ್ಯಾಕ್ ಮಾಡಲಾಗಿದ್ದು ಸಂಸ್ಥೆಯ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ನವೆಂಬರ್ 26ರಂದು ಟೆಲಿಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಹೇಳಿಕೆಯಲ್ಲಿ ಫಾರ್ಸ್  ತಿಳಿಸಿತ್ತು. 

share
Next Story
X