ತುಮಕೂರು | ಸೈಕಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಮೂವರು ಪೊಲೀಸರ ಅಮಾನತು
ತುಮಕೂರು, ಡಿ.6: ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ತೆರಳಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಜಯನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಓಂಕಾರೇಶ್ವರ್, ಕಾನ್ಸ್ಟೇಬಲ್ಗಳಾದ ರಾಜು, ಮಂಜಪ್ಪ ಮಸಾಲವಾರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಸೈಕಲ್ ಕಳ್ಳತನ ಆರೋಪದ ಮೇಲೆ ಠಾಣೆಗೆ ಕರೆತಂದಿದ್ದ ಹನುಮಂತರಾಯಪ್ಪ (58) ಮೇಲೆ ಪೊಲೀಸರು ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.
Next Story