Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಅಂತ್ಯಸಂಸ್ಕಾರ ಮಾಡಲು...

ಚಾಮರಾಜನಗರ: ಅಂತ್ಯಸಂಸ್ಕಾರ ಮಾಡಲು ಹಣವಿಲ್ಲದೇ ಪತ್ನಿ ಮೃತದೇಹವನ್ನು ಹೊತ್ತುಕೊಂಡು ನಡೆದ ಪತಿ!

ಪೊಲೀಸರಿಂದ ಅಂತ್ಯಸಂಸ್ಕಾರ

7 Dec 2022 7:32 PM IST
share
ಚಾಮರಾಜನಗರ: ಅಂತ್ಯಸಂಸ್ಕಾರ ಮಾಡಲು ಹಣವಿಲ್ಲದೇ ಪತ್ನಿ ಮೃತದೇಹವನ್ನು ಹೊತ್ತುಕೊಂಡು ನಡೆದ ಪತಿ!
ಪೊಲೀಸರಿಂದ ಅಂತ್ಯಸಂಸ್ಕಾರ

ಚಾಮರಾಜನಗರ, ಡಿ.7: ಅಂತ್ಯ ಸಂಸ್ಕಾರ ಮಾಡಲು ಹಣವಿಲ್ಲದೇ ಪತ್ನಿಯ ಮೃತದೇಹವನ್ನು ಮೂಟೆಯಲ್ಲಿ ಹೊತ್ತೊಯ್ದ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ವರದಿಯಾಗಿದೆ.

ಮಂಗಳವಾರ ರಾತ್ರಿ ಕಾಳಮ್ಮ  ಮೃತಪಟ್ಟಿದ್ದು, ಪತ್ನಿ ಮೃತದೇಹವನ್ನು ರವಿ  ಹೆಗಲ ಮೇಲೆ ಹೊತ್ತುಕೊಂಡು ಪಟ್ಟಣದ ಸುವರ್ಣವತಿ ನದಿ  ಕಡೆ ಅಂತ್ಯ ಸಂಸ್ಕಾರ ಮಾಡಲು ಹೋಗುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಯಳಂದೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಹತ್ತಿರದ ಆಲೆಮನೆಯಲ್ಲಿ ಕಳೆದ 15 ದಿನಗಳಿಂದ ರವಿ ಮತ್ತು ಆತನ ಪತ್ನಿ ಕಾಳಮ್ಮ ಉಳಿದುಕೊಂಡು ಪ್ಲಾಸ್ಟಿಕ್, ಗುಜರಿ ಸಾಮಗ್ರಿಗಳನ್ನು  ಸಂಗ್ರಹಿಸಿ ಮಾರಾಟ ಮಾಡಿ  ಜೀವನ ಸಾಗಿಸುತ್ತಿದ್ದರು‌. ಮಂಡ್ಯ ಮೂಲದ ಕಾಳಮ್ಮ(26) ಎಂಬಾಕೆ ಮೃತಳಾಗಿದ್ದು ಪತಿ ರವಿ ಮೂಟೆಯಲ್ಲಿ ಮೃತದೇಹ ಸಾಗಿಸುವಾಗ ಪೊಲೀಸರು ಮದ್ಯಪ್ರವೇಶಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರನ್ನಲಾಗಿದೆ.

''ನಮ್ಮವರು ಯಾರೂ ಇಲ್ಲ''

ಈ ಬಗ್ಗೆ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ರವಿ,  'ನಾವು ನಂಜನಗೂಡಿನಲ್ಲಿದ್ದೆವು. ವಾರದ ಹಿಂದೆಯೇ ಆಕೆ ಬಂದಿದ್ದಳು. ಮಂಗಳವಾರ ನಾನು ಬಂದು ನೋಡಿದಾಗ ಮೃತಪಟ್ಟಿದ್ದಳು.ನಮ್ಮವರು ಯಾರೂ ಇಲ್ಲ,  ನನ್ನ ಬಳಿ ಒಂದು ರೂಪಾಯಿಯೂ ಇರಲಿಲ್ಲ. ಮೃತದೇಹವನ್ನು ಹೊತ್ತುಕೊಂಡು ಬಂದೆ. ನಂತರ ಜನರಲ್ಲಿ ಹಣ ಕೇಳಿ ಅಂತ್ಯ ಸಂಸ್ಕಾರ ಮಾಡಲು ಯೋಚಿಸಿದ್ದೆ. ಅಷ್ಟರಲ್ಲಿ ಸ್ಥಳೀಯರು ಬಂದರು. ಪೊಲೀಸರೂ ಬಂದು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ತಂದರು' ಎಂದು ರವಿ ತಿಳಿಸಿದ್ದಾರೆ. 

'ವಿಷಯ ಗೊತ್ತಾಗುತ್ತಿದ್ದಂತೆಯೇ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತೇವೆ' 

- ಶಿವಕುಮಾರ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 

ಇದನ್ನೂ ಓದಿ: ಹಾವೇರಿ | ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ; 40 ದಿನ ರೆಸಾರ್ಟ್‍ನಲ್ಲಿದ್ದು ವಿಮಾನದಲ್ಲಿ ಬಂದ ಗ್ರಾ.ಪಂ ಸದಸ್ಯರು!

share
Next Story
X