Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೇ ಏಕದಿನ: ಬಾಂಗ್ಲಾದೇಶ ವಿರುದ್ಧ ಸತತ...

ಎರಡನೇ ಏಕದಿನ: ಬಾಂಗ್ಲಾದೇಶ ವಿರುದ್ಧ ಸತತ ಎರಡನೇ ಸೋಲು ಕಂಡ ಭಾರತ, ಕೈತಪ್ಪಿದ ಸರಣಿ

7 Dec 2022 7:57 PM IST
share
ಎರಡನೇ ಏಕದಿನ: ಬಾಂಗ್ಲಾದೇಶ ವಿರುದ್ಧ ಸತತ ಎರಡನೇ ಸೋಲು ಕಂಡ ಭಾರತ, ಕೈತಪ್ಪಿದ ಸರಣಿ

 ಮೀರ್ಪುರ, ಡಿ.7: ಬಾಂಗ್ಲಾದೇಶ ಬೌಲರ್‌ಗಳ ಶಿಸ್ತುಬದ್ಧ ದಾಳಿ ಹಾಗೂ ಮೆಹಿದಿ ಹಸನ್ ಮಿರಾಝ್ ಅವರ ಆಲ್‌ರೌಂಡ್ ಆಟಕ್ಕೆ ಕಂಗಾಲಾದ ಭಾರತವು ಬುಧವಾರ ನಡೆದ ಎರಡನೇ ಏಕದಿನ ಪಂದ್ಯವನ್ನು 5 ರನ್ ಅಂತರದಿಂದ ಸೋಲುಂಡಿದೆ.

ಈ ಗೆಲುವಿನ ಮೂಲಕ ಬಾಂಗ್ಲಾದೇಶವು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಗೆಲ್ಲಲು 272 ರನ್ ಗುರಿ ಬೆನ್ನಟ್ಟಿದ್ದ ಭಾರತವು 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 266ರನ್ ಗಳಿಸಿ ಸೋಲೊಪ್ಪಿಕೊಂಡಿದೆ.

ರೋಹಿತ್ ಶರ್ಮಾ ಔಟಾಗದೆ 51 ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಶ್ರೇಯಸ್ ಅಯ್ಯರ್(82 ರನ್) ಹಾಗೂ ಅಕ್ಷರ್ ಪಟೇಲ್(56) ಒಂದಷ್ಟು ಹೋರಾಟ ನೀಡಿದರು.

ಇಬಾದತ್ ಹುಸೈನ್(3-45) ಯಶಸ್ವಿ ಬೌಲರ್ ಎನಿಸಿಕೊಂಡರು. ಮೆಹಿದಿ ಹಸನ್(2-46) ಹಾಗೂ ಶಾಕಿಬ್ ಅಲ್ ಹಸನ್(2-39) ತಲಾ ಎರಡು ವಿಕೆಟ್‌ಗಳನ್ನು ಪಡೆದರು.

ಇದಕ್ಕೂ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಬಾಂಗ್ಲಾದೇಶ ಕೆಳ ಕ್ರಮಾಂಕದ ಬ್ಯಾಟರ್ ಮೆಹಿದಿ ಹಸನ್ ಮಿರಾಝ್ ಸಿಡಿಸಿದ ಚೊಚ್ಚಲ ಶತಕ(ಔಟಾಗದೆ 100, 83 ರನ್, 8 ಬೌಂಡರಿ, 4 ಸಿಕ್ಸರ್)ಹಾಗೂ ಮಹಮೂದುಲ್ಲಾ(77 ರನ್, 96 ಎಸೆತ, 7 ಬೌಂಡರಿ) ಅರ್ಧಶತಕದ ಸಹಾಯದಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು.

ಬಾಂಗ್ಲಾದೇಶದ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. 19ನೇ ಓವರ್ ಅಂತ್ಯದಲ್ಲಿ 69 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದ ಸುಳಿಯಲ್ಲಿತ್ತು. ಆಗ ಜೊತೆಯಾದ ಮಹಮೂದುಲ್ಲಾ ಹಾಗೂ ಮೆಹಿದಿ ಹಸನ್ 7ನೇ ವಿಕೆಟ್‌ಗೆ 148 ರನ್ ಜೊತೆಯಾಟ ನಡೆಸಿ ಇನಿಂಗ್ಸ್ ರಿಪೇರಿ ಮಾಡಿದರು.

ಮಹಮೂದುಲ್ಲಾ ಔಟಾದ ನಂತರ ನಸುಮ್ ಅಹ್ಮದ್ ಅವರೊಂದಿಗೆ 8ನೇ ವಿಕೆಟಿಗೆ ಮುರಿಯದ ಜೊತೆಯಾಟದಲ್ಲಿ 54 ರನ್ ಸೇರಿಸಿದ ಮೆಹಿದಿ ಹಸನ್ ತಂಡವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.

ಭಾರತದ ಬೌಲಿಂಗ್‌ನಲ್ಲಿ ವಾಶಿಂಗ್ಟನ್ ಸುಂದರ್(3-37) ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಮುಹಮ್ಮದ್ ಸಿರಾಜ್(2-73) ಹಾಗೂ ಉಮ್ರಾನ್ ಮಲಿಕ್(2-58)ತಲಾ ಎರಡು ವಿಕೆಟ್ ಪಡೆದರು.

share
Next Story
X