Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ಅರೇಬಿಯಾ ಕ್ಲಬ್‌ನೊಂದಿಗೆ ಯಾವುದೇ...

ಸೌದಿ ಅರೇಬಿಯಾ ಕ್ಲಬ್‌ನೊಂದಿಗೆ ಯಾವುದೇ ಒಪ್ಪಂದವಾಗಿಲ್ಲ: ರೊನಾಲ್ಡೊ ಸ್ಪಷ್ಟನೆ

8 Dec 2022 11:12 AM IST
share
ಸೌದಿ ಅರೇಬಿಯಾ ಕ್ಲಬ್‌ನೊಂದಿಗೆ ಯಾವುದೇ ಒಪ್ಪಂದವಾಗಿಲ್ಲ: ರೊನಾಲ್ಡೊ ಸ್ಪಷ್ಟನೆ

ಹೊಸದಿಲ್ಲಿ: ಸೌದಿ ಅರೇಬಿಯಾ ಕ್ಲಬ್‌ನೊಂದಿಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಪೋರ್ಚುಗಲ್ ತಂಡದ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸ್ಪಷ್ಟಪಡಿಸಿದ್ದಾರೆ.

ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್‌ನೊಂದಿಗೆ ಒಪ್ಪಂದ ಮುರಿದು ಬಿದ್ದ ನಂತರ ಪೋರ್ಚುಗಲ್ ತಂಡದ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸೌದಿ ಅರೇಬಿಯಾದ ಅಲ್ ನಸ್ರ್ ಕ್ಲಬ್‌ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂಬ ಊಹಾಪೋಹ ಹರಿದಾಡುತ್ತಿತ್ತು. ಅಲ್ ನಸ್ರ್ ಕ್ಲಬ್‌ನೊಂದಿಗೆ ಭಾರಿ ಮೊತ್ತದ 200 ದಶ ಲಕ್ಷ ಯೂರೊ ಒಡಂಬಡಿಕೆಗೆ ಕ್ರಿಸ್ಟಿಯಾನೊ ರೊನಾಲ್ಡೊ ಸಹಿ ಹಾಕಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ಊಹಾಪೋಹಗಳ ಕುರಿತು ಮೌನ ಮುರಿದಿರುವ ಕ್ರಿಸ್ಟಿಯಾನೊ ರೊನಾಲ್ಡೊ, ಸೌದಿ ಅರೇಬಿಯಾದ ಅಲ್ ನಸ್ರ್ ಕ್ಲಬ್‌ನೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಸುದ್ದಿಯನ್ನು ನಿರಾಕರಿಸಿದ್ದಾರೆ‌.

ಈ ಕುರಿತು ಹಬ್ಬಿರುವ ಸುದ್ದಿಗಳು ಸುಳ್ಳು ಎಂದು ಸ್ಪಷ್ಟನೆನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ರೆಡ್ಡೆವಿಲ್ಸ್ ಕ್ಲಬ್‌ನೊಂದಿಗೆ ಸಂಬಂಧ ಕಡಿದುಕೊಂಡ ನಂತರ ಯಾವುದೇ ಕ್ಲಬ್ ತಂಡದ ಸದಸ್ಯನಲ್ಲದ ಏಕೈಕ ಪೋರ್ಚುಗೀಸ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಆಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಕ್ಲಿಷ್ಟಕಾಲ ಘಟ್ಟವನ್ನು ಹಾದುಹೋಗುತ್ತಿರುವ ಕ್ರಿಸ್ಟಿಯಾನೊ ರೊನಾಲ್ಡೊ, ಮೊದಲಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌  ವ್ಯವಸ್ಥಾಪಕ, ಕ್ಲಬ್‌ನ ಮಾಲಕರೊಂದಿಗೂ ಮನಸ್ತಾಪ ಮಾಡಿಕೊಂಡಿದ್ದರು. ಈ ಪೈಕಿ ಕೆಲವರು ರೊನಾಲ್ಡೊ ಅವರನ್ನು ಕ್ಲಬ್‌ನಿಂದ ಹೊರದೂಡಲು ಪ್ರಯತ್ನಿಸುತ್ತಿದ್ದರು. ಕೊನೆಗೆ ರೊನಾಲ್ಡೊ ಮತ್ತು ಮ್ಯಾಂಚೆಸ್ಟರ್‌ ಯುನೈಟೆಡ್‌ ಕ್ಲಬ್ ಪರಸ್ಪರ ಬೇರ್ಪಡುವ ನಿರ್ಧಾರಕ್ಕೆ ತಲುಪಿದವು.

ಫೀಫಾ 2022ರ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಈ ಅನಿವಾರ್ಯ ಆಟಗಾರ ಪೋರ್ಚುಗಲ್‌ನ ವಿಶ್ವಕಪ್ ಫುಟ್‌ಬಾಲ್ ಪಯಣವನ್ನು ಮುನ್ನಡೆಸುತ್ತಾರೆ ಎಂದು ಮೊದಲಿಗೆ ನಿರೀಕ್ಷಿಸಲಾಗಿತ್ತು. ಆದರೆ, ಈತನ ಅನುಪಸ್ಥಿತಿಯಲ್ಲೇ ಪೋರ್ಚುಗಲ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ, ಮೊದಲ ನಾಕೌಟ್ ಪಂದ್ಯದಲ್ಲಿ ಸ್ವಿಜರ್ಲೆಂಡ್ ಎದುರು ರೊನಾಲ್ಡೊ ಅವರನ್ನು ಕೈಬಿಟ್ಟಿದ್ದ ಪೋರ್ಚುಗಲ್ ತಂಡ, ಅವರ ಬದಲಿಗೆ ಗೊನಾಲ್ಕೊರಾಮೋಸ್ ಅವರಿಗೆ ಅವಕಾಶ ನೀಡಿತ್ತು. ಈ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ರಾಮೋಸ್, ಪೋರ್ಚುಗಲ್ ತಂಡಕ್ಕೆ 6-1 ಅಂತರದ ಭರ್ಜರಿ ಗೆಲುವು ತಂದು ಕೊಟ್ಟಿದ್ದರು.

ಮೊರೊಕ್ಕೊ ಎದುರು ನಡೆಯಲಿರುವ ಕ್ವಾಟರ್ ಫೈನಲ್ ಪಂದ್ಯದಲ್ಲೂ ಅಂತಿಮ ಹನ್ನೊಂದರ ಬಳಗದಲ್ಲಿ ರೊನಾಲ್ಡೊ ಸ್ಥಾನ ಪಡೆಯುವ ಸಾಧ್ಯತೆ ಕ್ಷೀಣಿಸಿದೆ. ರೊನಾಲ್ಡೊರ ಗೋಲು ಹೊಡೆಯುವ ಚಮತ್ಕಾರ ಮಸುಕಾಗಿರುವುದರಿಂದ ವಿಶ್ವಕಪ್ ಮುಕ್ತಾಯವಾದ ನಂತರ ಅತ್ಯುತ್ತಮ ಕ್ಲಬ್‌ವೊಂದರಲ್ಲಿ ಸ್ಥಾನಗಿಟ್ಟಿಸುವುದು ಈ ಫುಟ್‌ಬಾಲ್ಸ್ಟಾರ್‌ಗೆ ಕಠಿಣವಾಗುವ ಸಾಧ್ಯತೆ ದಟ್ಟವಾಗಿದೆ.

share
Next Story
X