Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್...

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪರಿಶೀಲನೆಗೆ ದುಬಾರಿ ಶುಲ್ಕ ವಸೂಲಿ ಆರೋಪ: ಎಚ್‌ಪಿಸಿಎಲ್ ವಿರುದ್ಧ ದೂರು

8 Dec 2022 9:26 PM IST
share
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪರಿಶೀಲನೆಗೆ ದುಬಾರಿ ಶುಲ್ಕ ವಸೂಲಿ ಆರೋಪ: ಎಚ್‌ಪಿಸಿಎಲ್ ವಿರುದ್ಧ ದೂರು

ಮಂಗಳೂರು, ಡಿ.8: ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿ ಲಿಮಿಟೆಡ್ (ಎಚ್‌ಪಿಸಿಎಲ್)ನ ಸಿಬ್ಬಂದಿಯು ಸುರಕ್ಷತಾ ತಪಾಸಣೆಯ ಹೆಸರಿನಲ್ಲಿ ಮನೆಗಳಿಗೆ ಭೇಟಿ ನೀಡಿ ಅಡುಗೆ ಮನೆಯಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪರಿಶೀಲನೆ ಹಾಗೂ ಅದಕ್ಕೆ ಸೇವಾ ಶುಲ್ಕವಾಗಿ ದುಬಾರಿ ಹಣ ಕೇಳಿರುವುದನ್ನು ಆಕ್ಷೇಪಿಸಿ ಪುತ್ತೂರಿನ ದಸ್ತಾವೇಜು ಬರಹಗಾರ ಆರ್.ಕೆ.ಪಾಂಗಣ್ಣಾಯ ಎಂಬವರು ದ.ಕ. ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಗುರುವಾರ ದೂರು ನೀಡಿದ್ದಾರೆ.

ಕೇಂದ್ರ ಸರಕಾರದ ಜೊತೆ ಮಾಡಿಕೊಂಡ ಒಪ್ಪಂದಂತೆ ಎಚ್‌ಪಿಸಿಎಲ್‌ನ ಆದೇಶದ ಪ್ರಕಾರ ಕಂಪನಿಯ ಸಿಬ್ಬಂದಿಯು ಗ್ರಾಹಕರ ಮನೆ ಬಾಗಿಲಿಗೆ ಬರುವುದಾಗಿ ಮಾಧ್ಯಮಗಳಲ್ಲಿ ಗ್ಯಾಸ್ ಏಜೆನ್ಸಿಯೊಂದು ಪ್ರಕಟನೆ ಹೊರಡಿಸಿದೆ. ಕೇಂದ್ರ ಸರಕಾರದ ಗಜೆಟ್ ಪ್ರಕಟನೆಯ ಹೊರತು ಈ ರೀತಿ ಮನೆಗಳಿಗೆ ತೆರಳಿ ಹಣ ವಸೂಲಿ ಮಾಡುವಂತಿಲ್ಲ. 2015ರಲ್ಲೂ ಈ ರೀತಿ ಗ್ಯಾಸ್ ಏಜೆನ್ಸಿಗಳು ವಸೂಲಿಗೆ ಮುಂದಾದಾಗ ಜಿಲ್ಲಾಡಳಿತ ಹಾಗೂ ಸಹಾಯಕ ಕಮಿಷನರ್‌ರ ಗಮನಕ್ಕೆ ತಂದು ವಸೂಲಿಯನ್ನು ಸ್ಥಗಿತಗೊಳಿಸಲಾಗಿತ್ತು ಎಂಬುದನ್ನು ಆರ್.ಕೆ.ಪಾಂಗಣ್ಣಾಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅನಿಲ ಜಾಡಿಯನ್ನು ಮನೆಗಳಿಗೆ ಸರಬರಾಜು ಮಾಡುವಾಗ ಪ್ರತಿ ಬಾರಿ ಗ್ಯಾಸ್ ರಿಫಿಲ್ ವೇಳೆ ಪರೀಕ್ಷಿಸಿ ಕುಂದುಕೊರತೆ ನಿವಾರಿಸಿ ನೀಡಬೇಕು ಎಂದು ಕಾನೂನು ಹೇಳುತ್ತದೆ. ಆದ್ದರಿಂದ ಈ ಬಗ್ಗೆ ತಕ್ಷಣ ಗಮನ ಹರಿಸಿ ಮನೆ ಭೇಟಿ ಹಾಗೂ ಹಣ ವಸೂಲಿ ಕ್ರಮವನ್ನು ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಹಾಗೂ ಪ್ರಧಾನ ಕಾರ್ಯದರ್ಶಿಯ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದಿದ್ದಾರೆ.

ಗೃಹ ಬಳಕೆ ಸಿಲಿಂಡರ್ ಹೊಂದಿರುವ ಗ್ರಾಹಕರ ಮನೆಗೆ ತೆರಳಿ ಸಿಬ್ಬಂದಿಯು ಸುರಕ್ಷತಾ ತಪಾಸಣೆ ನಡೆಸಿದರೆ ಪ್ರತಿ ಗ್ರಾಹಕ 236 ರೂ.ನಂತೆ ಪಾವತಿಸಬೇಕು. ರಬ್ಬರ್ ಗ್ಯಾಸ್ ಟ್ಯೂಬ್ ಬದಲಾಯಿಸಬೇಕಾದರೆ 190 ರೂ. ನೀಡಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಪುತ್ತೂರು ತಾಲೂಕಿನಲ್ಲಿ 40 ಸಾವಿರ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಇದ್ದು, 236 ರೂ. ಸೇವಾ ಶುಲ್ಕ ವಸೂಲಿ ಮಾಡಿದರೆ ಆ ಮೊತ್ತವೇ 94.40 ಲಕ್ಷ ರೂ.ಆಗುತ್ತದೆ. ದ.ಕ.ಜಿಲ್ಲಾದ್ಯಂತ ಸುಮಾರು 2 ಲಕ್ಷ ಗ್ರಾಹಕರು 236 ರೂ.ನಂತೆ ಪಾವತಿಸಿದರೆ 4.72 ಕೋ. ರೂ. ಮೊತ್ತ ಜಮೆಯಾಗುತ್ತದೆ. ರಾಜ್ಯಾದ್ಯಂತ ಇದೇ ರೀತಿ ಸೇವಾ ಶುಲ್ಕ ವಸೂಲಿ ಮಾಡಿದರೆ ಸುಮಾರು 50 ಕೋ.ರೂ.ಗೂ ಅಧಿಕ ಮೊತ್ತ ಕಂಪನಿ ವಸೂಲಿ ಮಾಡಿದಂತಾಗುತ್ತದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಗ್ಯಾಸ್ ಕಂಪನಿ ಸಿಬ್ಬಂದಿಯು ಮನೆಗಳಿಗೆ ಭೇಟಿ ನೀಡಿ ಕಂಪನಿಯ ಆ್ಯಪ್ ಮೂಲಕ ಗ್ಯಾಸ್ ಸುರಕ್ಷೆ ಬಳಕೆಯನ್ನು ದೃಢಪಡಿಸುತ್ತಾರೆ. ಗ್ಯಾಸ್ ಪೈಪ್, ಸಿಲಿಂಡರ್ ಸುರಕ್ಷತೆ, ಅಡುಗೆ ಕೋಣೆ ವೆಂಟಿಲೇಷನ್ ಸಹಿತ ಕೈಗೊಂಡ ಇತರ ಕ್ರಮಗಳನ್ನು ಆ್ಯಪ್‌ನಲ್ಲೇ ದಾಖಲಿಸಿ ಬಳಿಕ ಅದರ ಪ್ರತಿಯನ್ನು ಏಜೆನ್ಸಿಗೂ ಕಳುಹಿಸಿಕೊಡುತ್ತಾರೆ. ಕಂಪನಿ ಸುರಕ್ಷತೆಯನ್ನು ದೃಢೀಕರಿಸಿದರೆ ಮುಂದೆ ಅನಾಹುತ ಸಂಭವಿಸಿದರೆ, ಆಗ ವಿಮಾ ಮೊತ್ತ ಬಿಡುಗಡೆಗೆ ಸಹಕಾರಿಯಾಗುತ್ತದೆ. ಇಲ್ಲದಿದ್ದರೆ ವಿಮೆ ಸಿಗುವುದಿಲ್ಲ ಎಂಬುದು ಏಜೆನ್ಸಿಗಳ ಮಾತಾಗಿದೆ.

"ಅಡುಗೆ ಗ್ಯಾಸ್ ಸಿಲಿಂಡರ್ ಬಳಕೆಯ ಸುರಕ್ಷೆಯನ್ನು ದೃಢಪಡಿಸಲು ಆಯಾ ಅನಿಲ ಕಂಪನಿಗಳು ಪ್ರತಿ ಐದು ವರ್ಷಕ್ಕೊಮ್ಮೆ ಈ ರೀತಿ ಮನೆ ಭೇಟಿ ಸಮೀಕ್ಷೆ ಮಾಡುತ್ತಾರೆ. ಇಂತಹ ಸಮೀಕ್ಷೆ ದೇಶಾದ್ಯಂತ ನಡೆಯುತ್ತಿದೆ. ಮನೆ ಭೇಟಿ ವೇಳೆ ಸೇವಾ ಶುಲ್ಕವಾಗಿ 236 ರೂ.ವನ್ನೂ ವಸೂಲಿ ಮಾಡಲಾಗುತ್ತಿದೆ".

-ರಾಹುಲ್
ಸೇಲ್ಸ್ ಮೆನೇಜರ್, ಎಚ್‌ಪಿಸಿಎಲ್-ಮಂಗಳೂರು

share
Next Story
X