Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪೋರ್ಚುಗಲ್ ತಂಡ ತ್ಯಜಿಸುವುದಾಗಿ ಬೆದರಿಕೆ...

ಪೋರ್ಚುಗಲ್ ತಂಡ ತ್ಯಜಿಸುವುದಾಗಿ ಬೆದರಿಕೆ ಹಾಕಿದ್ದೇನೆಂಬ ವರದಿಗೆ ಸ್ಪಷ್ಟನೆ ನೀಡಿದ ಸ್ಟಾರ್ ಆಟಗಾರ ರೊನಾಲ್ಡೊ

8 Dec 2022 10:20 PM IST
share
ಪೋರ್ಚುಗಲ್ ತಂಡ ತ್ಯಜಿಸುವುದಾಗಿ ಬೆದರಿಕೆ ಹಾಕಿದ್ದೇನೆಂಬ ವರದಿಗೆ ಸ್ಪಷ್ಟನೆ ನೀಡಿದ ಸ್ಟಾರ್ ಆಟಗಾರ ರೊನಾಲ್ಡೊ

 ದೋಹಾ, ಡಿ.8: ಸ್ವಿಟ್ಸರ್‌ಲ್ಯಾಂಡ್ ವಿರುದ್ಧದ ಅಂತಿಮ-16ರ ಪಂದ್ಯದಿಂದ ತನ್ನನ್ನು ಹೊರಗಿಟ್ಟ ಬಳಿಕ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ Cristiano Ronaldo  ವಿಶ್ವಕಪ್ ತಂಡವನ್ನು ತ್ಯಜಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ವರದಿಯನ್ನು ಪೋರ್ಚುಗೀಸ್ ಫುಟ್ಬಾಲ್ ಫೆಡರೇಶನ್(ಎಫ್‌ಪಿಎಫ್)ಗುರುವಾರ ನಿರಾಕರಿಸಿದೆ.

ಇದೇ ವೇಳೆ ಸ್ವತಃ ರೊನಾಲ್ಡೊ ಕೂಡ ಈ ವರದಿಯನ್ನು ತಳ್ಳಿ ಹಾಕಿದ್ದು, ಇವುಗಳು ಬಾಹ್ಯ ಶಕ್ತಿಯಾಗಿವೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ರೊನಾಲ್ಡೊ, ಒಂದು ಗುಂಪು ಬಾಹ್ಯ ಶಕ್ತಿಗಳಿಗೆ ಹೆಚ್ಚು ಹತ್ತಿರವಾಗಿದೆ. ಯಾವುದೇ ಎದುರಾಳಿಯೊಂದಿಗೆ ಹೋರಾಡಲು ದೇಶ ತುಂಬಾ ಧೈರ್ಯಶಾಲಿಯಾಗಿದೆ ಎಂದು ಬರೆದಿದ್ದಾರೆ.

ಮಂಗಳವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಕ್ಕೆ 37ರ ಹರೆಯದ ರೊನಾಲ್ಡೊರನ್ನು ಕೈಬಿಟ್ಟಿರುವುದು ಎಲ್ಲರನ್ನು ಹೆಬ್ಬೇರಿಸುವಂತೆ ಮಾಡಿತ್ತು. ರೊನಾಲ್ಡೊ ಬದಲಿ ಆಟಗಾರ ಗೊನ್ಸಾಲೊ ರಾಮೋಸ್ ಹ್ಯಾಟ್ರಿಕ್ ಗೋಲು ಗಳಿಸಿ ತಂಡವು 6-1 ಅಂತರದಿಂದ ಜಯ ಸಾಧಿಸಲು ನೆರವಾಗಿದ್ದರು.

ಕೋಚ್ ಫೆರ್ನಾಂಡೊ ಸ್ಯಾಂಟೋಸ್‌ರೊಂದಿಗೆ ಮಾತಿನ ಚಕಮಕಿ ನಡೆಸಿದ ನಂತರ ರೊನಾಲ್ಡೊ ರಾಷ್ಟ್ರೀಯ ತಂಡವನ್ನು ತ್ಯಜಿಸುವ ಬೆದರಿಕೆ ಹಾಕಿದ್ದರು ಎಂದು ಪೋರ್ಚುಗೀಸ್‌ನ 'ಪಬ್ಲಿಕೇಶನ್ ರೆಕಾರ್ಡ್' ವರದಿ ಮಾಡಿತ್ತು.

 ಖತರ್‌ನಲ್ಲಿರುವಾಗ ಯಾವುದೇ ಸಮಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರು ರಾಷ್ಟ್ರೀಯ ತಂಡವನ್ನು ತೊರೆಯುವುದಾಗಿ ಬೆದರಿಕೆ ಹಾಕಿಲ್ಲ ಎಂದು ಫೆಡರೇಶನ್ ಸ್ಪಷ್ಟನೆ ನೀಡಿದೆ. ಪ್ರತಿದಿನ ರೊನಾಲ್ಡೊ ರಾಷ್ಟ್ರೀಯ ತಂಡ ಹಾಗೂ ದೇಶದ ಸೇವೆಯಲ್ಲಿ ಅನನ್ಯ ದಾಖಲೆಯನ್ನು ನಿರ್ಮಿಸುತ್ತಿದ್ದಾರೆ. ಅದನ್ನು ಗೌರವಿಸಬೇಕು ಎಂದು ಫೆಡರೇಶನ್ ಹೇಳಿದೆ.

ರೊನಾಲ್ಡೊ ಅತ್ಯಂತ ಹೆಚ್ಚು ಪಂದ್ಯಗಳನ್ನು ಆಡಿರುವ ಪೋರ್ಚುಗೀಸ್ ಆಟಗಾರ ಹಾಗೂ ಸಾರ್ವಕಾಲಿಕ ಶ್ರೇಷ್ಠ ಅಂತರ್‌ರಾಷ್ಟ್ರೀಯ ಗೋಲ್‌ಸ್ಕೋರರ್ ಆಗಿದ್ದಾರೆ.

share
Next Story
X