Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇವಸ್ಥಾನ ಉತ್ಸವಗಳಲ್ಲಿ ಮತ ವೈಷಮ್ಯ...

ದೇವಸ್ಥಾನ ಉತ್ಸವಗಳಲ್ಲಿ ಮತ ವೈಷಮ್ಯ ಕೃತ್ಯ: ವಿಹಿಂಪ, ಬಜರಂಗದಳ ವಿರುದ್ಧ ಕ್ರಮಕ್ಕೆ 'ಸಹಬಾಳ್ವೆ' ಮನವಿ

8 Dec 2022 11:34 PM IST
share
ದೇವಸ್ಥಾನ ಉತ್ಸವಗಳಲ್ಲಿ ಮತ ವೈಷಮ್ಯ ಕೃತ್ಯ: ವಿಹಿಂಪ, ಬಜರಂಗದಳ ವಿರುದ್ಧ ಕ್ರಮಕ್ಕೆ ಸಹಬಾಳ್ವೆ ಮನವಿ

ಉಡುಪಿ, ಡಿ.8: ಅಸಂವಿಧಾನಿಕ ಹಾಗೂ ಮತೀಯ ದ್ವೇಷ ಬಿತ್ತುವ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳ ಚಟುವಟಿಕೆ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಉಡುಪಿ ಸಹಬಾಳ್ವೆ ವತಿಯಿಂದ ಗುರುವಾರ ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಹಲವು ಕಡೆ ನಡೆಯುವ ಹಿಂದು ದೇವಾಲಯಗಳ ಜಾತ್ರೆ- ಉತ್ಸವಗಳಲ್ಲಿ ಅಲ್ಪಸಂಖ್ಯಾತ ಮತದ ವ್ಯಾಪಾರಿಗಳಿಗೆ ಮಾರಾಟ ಮಳಿಗೆಗಳನ್ನು ಹಾಕಲು ಅವಕಾಶ ನಿರಾಕರಿಸಬೇಕೆಂದು ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳ ಮೇಲೆ ಒತ್ತಡ ಹೇರುವ ಕೃತ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿವೆ. ಕೋಟೇಶ್ವರದಲ್ಲಿ ಡಿ.8ರಂದು ನಡೆದ ಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಡಿ.9ರಂದು ಉಪ್ಪುಂದದಲ್ಲಿ ನಡೆಯುವ ಉತ್ಸವಗಳಲ್ಲಿ ಅಲ್ಪಸಂಖ್ಯಾತ ಮತದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಒತ್ತಡ ಹೇರುವ ಬಗ್ಗೆ ಲಿಖಿತ ಮನವಿಯನ್ನು ದೇವಸ್ಥಾನದ ಆಡಳಿತ ಮಂಡಳಿಗಳಿಗೆ ಈ ಸಂಘಟನೆಗಳು ನೀಡಿವೆ. ಆ ಒತ್ತಡ ಪತ್ರದಲ್ಲಿ ಅಲ್ಪಸಂಖ್ಯಾತ ಸಮು ದಾಯಗಳ ಮೇಲೆ ಅವಾಸ್ತವಿಕವಾದ ಹಸಿಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಕಳೆದ ತಿಂಗಳುಗಳಲ್ಲಿ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ದೇವಾಸ್ಥಾನ ಉತ್ಸವಗಳ ವೇಳೆಯೂ ಇದೇ ಬಗೆಯ ಒತ್ತಡವನ್ನು ಈ ಸಂಘಟನೆಗಳು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳ ಮೇಲೆ ಹೇರಿದ್ದವು. ಈ ಕೃತ್ಯಗಳು ದೇಶದ ಸಂವಿಧಾನಿಕ ಕಾನೂನುಗಳು ಜಾತಿ ಮತಾತೀತವಾಗಿ ಮಾಡಿರುವ ಸಾರ್ವಜನಿಕ ನಾಗಾರಿಕ ಹಕ್ಕುಗಳ ಮೇಲೆ ಪ್ರಜ್ಞಾ ಪೂರ್ವಕವಾಗಿ ನಡೆಸುತ್ತಿರುವ ಆಕ್ರಮಣವಾಗಿವೆ. ಮತ ನಂಬಿಕೆಯ ಆಧಾರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಬಹುಸಂಖ್ಯಾತ ಮತದ ಜನರಲ್ಲಿ ಅಪನಂಬಿಕೆ ಹಾಗೂ ದ್ವೇಷ ಮನೋಭಾವವನ್ನು ಬಿತ್ತಿ ಸಾರ್ವಜನಿಕ ಶಾಂತಿಯನ್ನು ಕದಡುವ ಕಾನೂನುಬಾಹಿರ ಅಪರಾಧಗಳಾಗಿವೆ. ಆದುದರಿಂದ ಜಿಲ್ಲಾ ದಂಡಾಧಿಕಾರಿಯಾಗಿರುವ ತಾವು ಈ ಬಗೆಯ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನಕ್ಕೆ ತಂದುಕೊಂಡು, ಸಂವಿಧಾನ ನ್ಯಾಯಾನುಸಾರ ಕಾನೂನು ಕ್ರಮ ಜರುಗಿಸದೆ ಹೋದಲ್ಲಿ ಈ ಸಂಘಟನೆಗಳು ಮತೀಯ ದ್ವೇಷವನ್ನು ಎಗ್ಗಿಲ್ಲದೆ ಹಬ್ಬಿಸಿ, ಹಿಂಸಾತ್ಮಕ ವಾತಾವರಣ ಸೃಷ್ಟಿಸುವುದ ರಲ್ಲಿ ಸಂದೇಹವಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ. ಪರಿಸ್ಥಿತಿಯ ಸೂಕ್ಷ್ಮವನ್ನು ತಾವು ತುರ್ತಾಗಿ ಕಂಡುಕೊಂಡು, ಈ ಅಸಂವಿಧಾನಿಕ ಚಟುವಟಿಕೆಗಳ ಮೇಲೆ ಸೂಕ್ತ ಕ್ರಮ ಜರುಗಿಸಿ, ಜಿಲ್ಲೆಯ ಶಾಂತಿ-ಸೌಹಾರ್ದ ಬದುಕು ನಡೆಯುವ ತಿಳಿ ವಾತಾವರಣ ಸೃಷ್ಟಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಅಪರ ಜಿಲ್ಲಾಧಿಕಾರಿ ವೀಣಾ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಹಬಾಳ್ವೆ ಸಂಚಾಲಕ ಸುಂದರ್ ಮಾಸ್ತರ್, ಬಾಲಕೃಷ್ಣ ಶೆಟ್ಟಿ, ವೆರೋನಿಕಾ ಕರ್ನಾಲಿಯೊ, ಅಬ್ದುಲ್ ಅಝೀಝ್ ಉದ್ಯಾವರ ಹಾಗು ಕೆ.ಫಣಿರಾಜ್ ಉಪಸ್ಥಿತರಿದ್ದರು.

share
Next Story
X