Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದರಸಗಳಿಂದ ಮುಸ್ಲಿಮೇತರ...

ಮದರಸಗಳಿಂದ ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣ : ಮಕ್ಕಳ ಹಕ್ಕುಗಳ ಸಂಸ್ಥೆಯ ಆರೋಪ

9 Dec 2022 8:53 PM IST
share
ಮದರಸಗಳಿಂದ ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣ : ಮಕ್ಕಳ ಹಕ್ಕುಗಳ ಸಂಸ್ಥೆಯ ಆರೋಪ

ಹೊಸದಿಲ್ಲಿ, ಡಿ. 9: ಸರಕಾರದಿಂದ ನಿಧಿ ಮತ್ತು ಮಾನ್ಯತೆ ಪಡೆದಿರುವ ಮದರಸಗಳು ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿವೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆರೋಪಿಸಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ (ANI news agency)ವರದಿ ಮಾಡಿದೆ.

ಮದರಸದಲ್ಲಿರುವ ಇಂಥ ವಿದ್ಯಾರ್ಥಿಗಳನ್ನು ದೈಹಿಕವಾಗಿ ತಪಾಸಣೆ ಮಾಡುವುದು ಸೇರಿದಂತೆ, ಈ ಆರೋಪಗಳ ಬಗ್ಗೆ ವಿವರವಾಗಿ ತನಿಖೆ ನಡೆಸುವಂತೆ ಮಕ್ಕಳ ಹಕ್ಕುಗಳ ಸಂಸ್ಥೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಮಾನ್ಯತೆ ಪಡೆಯದ ಮದರಸಗಳಲ್ಲಿ ಮುಸ್ಲಿಮೇತರ ಮಕ್ಕಳು ಕಲಿಯುತ್ತಿರುವುದನ್ನು ಪತ್ತೆಹಚ್ಚುವುದಕ್ಕಾಗಿ ಮದರಸಗಳಲ್ಲಿ ತಪಾಸಣೆ ಮಾಡುವಂತೆಯೂ ಅದು ಆದೇಶಿಸಿದೆ.

ಕೆಲವು ಮೂಲಗಳಿಂದ ದೊರೆತ ದೂರುಗಳ ಆಧಾರದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆಯು ಈ ಆರೋಪಗಳನ್ನು ಮಾಡಿದೆ. ಆದರೆ, ದೂರು ನೀಡಿರುವ ಮೂಲಗಳ ಹೆಸರನ್ನು ಅದು ಬಹಿರಂಗಪಡಿಸಿಲ್ಲ.

‘‘ಅದೂ ಅಲ್ಲದೆ, ಇಂಥ ವಿದ್ಯಾರ್ಥಿಗಳಿಗೆ ಕೆಲವು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳು ವಿದ್ಯಾರ್ಥಿವೇತನಗಳನ್ನೂ ನೀಡುತ್ತಿವೆ ಎನ್ನುವುದು ಆಯೋಗದ ಗಮನಕ್ಕೆ ಬಂದಿದೆ’’ ಎಂದು ಅದು ಹೇಳಿದೆ.

ಇಂಥ ಕೃತ್ಯಗಳು ಸಂವಿಧಾನದ 28(3) ವಿಧಿಯನ್ನು ಉಲ್ಲಂಘಿಸುತ್ತವೆ ಎಂದು ಅದು ತಿಳಿಸಿದೆ. ಈ ವಿಧಿಯು ಸರಕಾರಿ ಅನುದಾನಿತ ಮತ್ತು ಮಾನ್ಯತೆ ಪಡೆದಿರುವ ಸಂಸ್ಥೆಗಳು ಧಾರ್ಮಿಕ ಶಿಕ್ಷಣ ನೀಡುವುದನ್ನು ನಿಷೇಧಿಸುತ್ತದೆ.

ಮದರಸಗಳಲ್ಲಿ ಕಲಿಯುತ್ತಿರುವ ಮುಸ್ಲಿಮೇತರ ಮಕ್ಕಳು ಔಪಚಾರಿಕ ಶಿಕ್ಷಣ ಪಡೆಯಲು ಶಾಲೆಗಳಿಗೆ ದಾಖಲಾಗಲು ಸಾಧ್ಯವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚಿಸಿದೆ.

share
Next Story
X