Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ-ಮೇಘಾಲಯ ಗಡಿ ಒಪ್ಪಂದಕ್ಕೆ...

ಅಸ್ಸಾಂ-ಮೇಘಾಲಯ ಗಡಿ ಒಪ್ಪಂದಕ್ಕೆ ಹೈಕೋರ್ಟ್ ತಡೆ

9 Dec 2022 9:10 PM IST
share
ಅಸ್ಸಾಂ-ಮೇಘಾಲಯ ಗಡಿ ಒಪ್ಪಂದಕ್ಕೆ ಹೈಕೋರ್ಟ್ ತಡೆ

ಶಿಲ್ಲಾಂಗ್ (ಮೇಘಾಲಯ), ಡಿ. 9: ಅಸ್ಸಾಂ(Assam) ಮತ್ತು ಮೇಘಾಲಯ (Meghalaya)ರಾಜ್ಯಗಳ ನಡುವಿನ ಗಡಿ ಒಪ್ಪಂದವೊಂದಕ್ಕೆ ಮೇಘಾಲಯ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ವಿಧಿಸಿದೆ. ಉಭಯ ರಾಜ್ಯಗಳ ನಡುವಿನ 12 ವಿವಾದಿತ ಗಡಿ ಸ್ಥಳಗಳ ಪೈಕಿ ಆರು ಸ್ಥಳಗಳ ವಿವಾದವನ್ನು ಇತ್ಯರ್ಥಪಡಿಸಿರುವ ಒಪ್ಪಂದ ಇದಾಗಿದೆ.

ಫೆಬ್ರವರಿ 23ರಂದು ನಡೆಯಲಿರುವ ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆಯು ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ವಿವಾದಗಳನ್ನು ಕೊನೆಗೊಳಿಸುವ ಒಪ್ಪಂದವೊಂದಕ್ಕೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಾರ್ಚ್ 29ರಂದು ಸಹಿ ಹಾಕಿದ್ದರು. ಈ ಒಪ್ಪಂದವು ಐತಿಹಾಸಿಕ ಎಂಬುದಾಗಿ ಗೃಹ ಸಚಿವ ಅಮಿತ್ ಶಾ (Amit Shah)ಬಣ್ಣಿಸಿದ್ದರು.

1972 ಜನವರಿ 21ರಂದು ಅಸ್ಸಾಂ ನಿಂದ ಮೇಘಾಲಯವನ್ನು ವಿಭಜಿಸಿದಂದಿನಿಂದ ಎರಡು ರಾಜ್ಯಗಳ ನಡುವೆ ಗಡಿ ವಿವಾದ ಹೊಗೆಯಾಡುತ್ತಾ ಇದೆ. ಈ ವಿಭಜನೆಗೆ ಅನುವು ಮಾಡಿಕೊಟ್ಟಿರುವ 1971ರ ಅಸ್ಸಾಂ ಮರುವಿಂಗಡಣಾ ಕಾಯ್ದೆಯನ್ನು ಮೇಘಾಲಯ ಪ್ರಶ್ನಿಸಿದ ಬಳಿಕ, 12 ಸ್ಥಳಗಳಲ್ಲಿ ಗಡಿ ವಿವಾದಗಳು ಉದ್ಭವಿಸಿವೆ.

ಎರಡು ರಾಜ್ಯಗಳ ನಡುವಿನ 36.79 ಚದರ ಕಿಲೋಮೀಟರ್ ಪ್ರದೇಶವು ವಿವಾದಿತವಾಗಿದೆ. ಮಾರ್ಚ್ 29ರಂದು ಸಹಿ ಹಾಕಲಾದ ಒಪ್ಪಂದದ ಪ್ರಕಾರ, ವಿವಾದಿತ ಸ್ಥಳದ 18.51 ಚದರ ಕಿಲೋಮೀಟರ್ ಜಮೀನು ಅಸ್ಸಾಂಗೆ ಮತ್ತು 18.28 ಚದರ ಕಿಲೋಮೀಟರ್ ಜಮೀನು ಮೇಘಾಲಯಕ್ಕೆ ಸೇರುತ್ತದೆ.

ಖಾಸಿ ಜನಾಂಗೀಯ ಗುಂಪುಗಳಿಗೆ ಹಿಂದೆ ಸೇರಿದ್ದ ಸಯೀಮ್‌ಶಿಪ್(Seemship) ಮತ್ತು ಸಿರ್ದಾರ್‌ಶಿಪ್(Sirdarship) ಎಂಬ ಸ್ವತಂತ್ರ ಬುಡಕಟ್ಟು ರಾಜ್ಯಗಳ ನಾಲ್ವರು ಮುಖ್ಯಸ್ಥರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಈ ತಡೆಯಾಜ್ಞೆ ನೀಡಿದೆ.

ತಮ್ಮೊಂದಿಗೆ ಸಮಾಲೋಚಿಸದೆ ಅಸ್ಸಾಮ್ ಮತ್ತು ಮೇಘಾಲಯ ಸರಕಾರಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂಬುದಾಗಿ ಅರ್ಜಿದಾರರು ವಾದಿಸಿದ್ದಾರೆ.

share
Next Story
X