Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶರ್ಜೀಲ್ ಇಮಾಮ್ ಕುರಿತು ದಿಲ್ಲಿ...

ಶರ್ಜೀಲ್ ಇಮಾಮ್ ಕುರಿತು ದಿಲ್ಲಿ ಹೈಕೋರ್ಟ್ ಹೇಳಿಕೆಗಳಿಂದ ಆತನ ಪ್ರಕರಣ ಪೂರ್ವಾಗ್ರಹ ಪೀಡಿತವಾಗಬಾರದು: ಸುಪ್ರೀಂ

9 Dec 2022 9:23 PM IST
share
ಶರ್ಜೀಲ್ ಇಮಾಮ್ ಕುರಿತು ದಿಲ್ಲಿ ಹೈಕೋರ್ಟ್ ಹೇಳಿಕೆಗಳಿಂದ ಆತನ ಪ್ರಕರಣ ಪೂರ್ವಾಗ್ರಹ ಪೀಡಿತವಾಗಬಾರದು: ಸುಪ್ರೀಂ

ಹೊಸದಿಲ್ಲಿ,ಡಿ.9: ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ (Sharjeel Imam)ಕುರಿತು ದಿಲ್ಲಿ ಉಚ್ಚ ನ್ಯಾಯಾಲಯದ ಪ್ರತಿಕೂಲ ಹೇಳಿಕೆಗಳು ಆತನ ಪ್ರಕರಣವನ್ನು ಪೂರ್ವಾಗ್ರಹ ಪೀಡಿತಗೊಳಿಸಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಹೇಳಿದೆ.

ದಿಲ್ಲಿ ಉಚ್ಚ ನ್ಯಾಯಾಲಯವು 2020ರ ದಿಲ್ಲಿ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್‌(Umar Khalid)ಗೆ ಜಾಮೀನು ನಿರಾಕರಿಸಿದ್ದ ತನ್ನ ಅ.18ರ ಆದೇಶದಲ್ಲಿ ಇಮಾಮ್ ಕುರಿತು ಪ್ರತಿಕೂಲ ಹೇಳಿಕೆಗಳನ್ನು ನೀಡಿತ್ತು.

ಹಿಂಸಾಚಾರದ ಸಂಚಿನಲ್ಲಿ ಇಮಾಮ್ ಪ್ರಮುಖ ಪಾತ್ರವನ್ನು ವಹಿಸಿದ್ದ ಎನ್ನುವುದು ವಾದಕ್ಕೆ ಅರ್ಹವಾಗಿದೆ ಎಂದು ಹೇಳಿದ್ದ ಉಚ್ಚ ನ್ಯಾಯಾಲಯವು,ಹಿಂಸಾಚಾರಕ್ಕೆ ಮುನ್ನ ಇಮಾಮ್ ಮತ್ತು ಖಾಲಿದ್ ನಡುವಿನ ಭೇಟಿಗಳನ್ನೂ ಪ್ರಸ್ತಾಪಿಸಿತ್ತು.

ದಿಲ್ಲಿಯಲ್ಲಿ ಗಲಭೆಗೆ ಕಾರಣವಾಗಿದ್ದ ಸಿಎಎ ಕುರಿತು ಪ್ರಚೋದನಾಕಾರಿ ಭಾಷಣಗಳನ್ನು ಮಾಡಿದ್ದ ಆರೋಪವನ್ನು ಇಮಾಮ್ ಮೇಲೆ ಹೊರಿಸಲಾಗಿದೆ.

ಇಮಾಮ್ ಡಿ.7ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವಿಶೇಷ ರಜಾಕಾಲ ಅರ್ಜಿಯಲ್ಲಿ,ತನ್ನ ನಿಲುವನ್ನು ಮಂಡಿಸಲು ಅವಕಾಶ ನೀಡದೇ ಉಚ್ಚ ನ್ಯಾಯಾಲಯವು ತನ್ನ ಬಗ್ಗೆ ಪ್ರತಿಕೂಲ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಈ ಅಭಿಪ್ರಾಯಗಳು ಕ್ರಿಮಿನಲ್ ಪ್ರಕರಣದ ಅರ್ಹತೆಗೆ ಸಂಬಂಧಿಸಿದ್ದು,ಪ್ರಕರಣದಲ್ಲಿ ತಾನೂ ಆರೋಪಿಯಾಗಿರುವುದರಿಂದ ಅವು ತನ್ನ ಜಾಮೀನು ಅರ್ಜಿಯ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡಬಹುದು ಎಂದು ಕಳವಳ ವ್ಯಕ್ತಪಡಿಸಿದ್ದರು.

ತನ್ನ ಅಭಿಪ್ರಾಯಗಳು ಪ್ರಕರಣದ ಅರ್ಹತೆಯ ಮೇಲೆ ಯಾವುದೇ ಪರಿಣಾಮವನ್ನುಂಟು ಮಾಡಬಾರದು ಎಂದು ಉಚ್ಚ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿರುವುದನ್ನು ಗಮನಿಸಿದ ಸರ್ವೋಚ್ಚ ನ್ಯಾಯಾಲಯವು,ಅರ್ಜಿದಾರರ ಪಾತ್ರದ ಕುರಿತು ಯಾವುದೇ ಅಭಿಪ್ರಾಯವು ಅರ್ಜಿದಾರರ ಬಗ್ಗೆ ಯಾವುದೇ ರೀತಿಯಲ್ಲಿ ಪೂರ್ವಾಗ್ರಹವನ್ನುಂಟು ಮಾಡಕೂಡದು ಎಂದು ಸ್ಪಷ್ಟಪಡಿಸಿತು.

ದೋಷನಿರ್ಣಯದ ವಿರುದ್ಧ ಅಂತಿಮ ಮೇಲ್ಮನವಿಯ ವಿಚಾರಣೆಯ ರೀತಿಯಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯು ಸುದೀರ್ಘಗೊಂಡಾಗ ಇಂತಹ ಅವಲೋಕನಗಳನ್ನು ಮಾಡಲಾಗುತ್ತದೆ ಎಂದು ಬೆಟ್ಟು ಮಾಡಿದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎ.ಎಸ್.ಓಕಾ ಅವರ ಪೀಠವು,10 ನಿಮಿಷಗಳಿಗಿಂತ ಹೆಚ್ಚು ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಕೂಡದು ಎಂದು ಹೇಳಿತು.

share
Next Story
X