Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಮೆರವಣಿಗೆಗಳ ನಿಯಂತ್ರಣ ಕೋರಿದ್ದ...

ಧಾರ್ಮಿಕ ಮೆರವಣಿಗೆಗಳ ನಿಯಂತ್ರಣ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

9 Dec 2022 10:52 PM IST
share
ಧಾರ್ಮಿಕ ಮೆರವಣಿಗೆಗಳ ನಿಯಂತ್ರಣ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಡಿ.9: ದೇಶಾದ್ಯಂತ ಧಾರ್ಮಿಕ ಮೆರವಣಿಗೆಗಳ ನಿಯಂತ್ರಣಕ್ಕೆ ನಿರ್ದೇಶನಗಳನ್ನು ಕೋರಿ ಎನ್‌ಜಿಒ ಸಿಟಿಝನ್ಸ್ ಫಾರ್ ಜಸ್ಟೀಸ್ ಆ್ಯಂಡ್ ಪೀಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿತು. ಎಲ್ಲ ಧಾರ್ಮಿಕ ಮೆರವಣಿಗೆಗಳನ್ನು ಗಲಭೆಗಳ ಮೂಲವೆಂಬಂತೆ ಬಿಂಬಿಸದಂತೆ ಅದು ಅರ್ಜಿದಾರ ಸಂಸ್ಥೆಗೆ ಸೂಚಿಸಿತು.

ಸರಕಾರದ ಅಧೀನದಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪ್ರತಿಯೊಂದು ಕೇತ್ರಕ್ಕೂ ಸರ್ವೋಚ್ಚ ನ್ಯಾಯಾಲಯವನ್ನು ಎಳೆಯುವಂತಿಲ್ಲ ಎಂದು ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ (DY Chandrachud)ಹಾಗೂ ನ್ಯಾ.ಪಿ.ಎಸ್.ನರಸಿಂಹ(PS Narasimha) ಅವರನ್ನೊಳಗೊಂಡ ಪೀಠವು ಹೇಳಿತು.

ಸರ್ವೋಚ್ಚ ನ್ಯಾಯಾಲಯವು ಮಾತ್ರ ಏನನ್ನಾದರೂ ಮಾಡಬಹುದು ಎಂದು ಹೇಳಿದ ಎನ್‌ಜಿಒ ಪರ ಹಿರಿಯ ನ್ಯಾಯವಾದಿ ಸಿ.ಯು.ಸಿಂಗ್ (C.U.Singh)ಅವರು,‘ವಿಚಾರಣಾ ಆಯೋಗಗಳ ವರದಿಗಳನ್ನು ನಾನೇ ಖುದ್ದಾಗಿ ಪರಿಶೀಲಿಸಿದ್ದೇನೆ. ನಾವು ಮಾರ್ಗಸೂಚಿಗಳನ್ನು ಮತ್ತು ಈ ಅನುಮತಿಗಳನ್ನು ಹೇಗೆ ನೀಡಬಹುದು ಎನ್ನುವುದನ್ನು ರೂಪಿಸಬೇಕಿದೆ. ಇಂದು ಮೆರವಣಿಗೆಗಳಲ್ಲಿ ಖಡ್ಗದಂತಹ ಶಸ್ತ್ರಾಸ್ತ್ರಗಳನ್ನು ಝಳಪಿಸಲಾಗುತ್ತಿದೆ ಮತ್ತು ಪ್ರತಿ ಧಾರ್ಮಿಕ ಉತ್ಸವದಲ್ಲಿಯೂ ಇದು ಸಂಭವಿಸುತ್ತಿದೆ ’ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು ಅನುಮತಿಯು ತಪ್ಪಾಗಿದ್ದರೆ ಅದನ್ನು ವಿಧಿ 226ರಡಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ. ಪ್ರಾರ್ಥನೆಗಳನ್ನು ನ್ಯಾಯಾಂಗವು ನಿರ್ವಹಿಸಲಾಗುವುದಿಲ್ಲ. ಅದು ನ್ಯಾಯಿಕ ಪರಮಾದೇಶದ ರಿಟ್ ಅನ್ನು ಬಯಸುತ್ತದೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಸರಕಾರದ ಅಧಿಕಾರ ವ್ಯಾಪ್ತಿಗೆ ಸೇರುತ್ತದೆ ಎಂದು ಹೇಳಿದರು.

ಪದೇ ಪದೇ ಸಂಘರ್ಷಗಳು ಸಂಭವಿಸುತ್ತವೆ ಮತ್ತು ಅಧಿಕಾರಿಗಳು ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ. ಧಾರ್ಮಿಕ ಮೆರವಣಿಗೆಗಳಲ್ಲಿ ಸರಣಿಯೋಪಾದಿ ಗಲಭೆಗಳು ನಡೆಯುತ್ತಿವೆ ಎಂದು ಸಿಂಗ್ ಹೇಳಿದರು.

‘ಎಲ್ಲ ಧಾರ್ಮಿಕ ಉತ್ಸವಗಳು ಗಲಭೆಗಳಿಗೆ ಸಮಯವಾಗಿವೆ ಎಂದು ಬಿಂಬಿಸಲು ನಾವೇಕೆ ಯಾವಾಗಲೂ ಬಯಸುತ್ತೇವೆ? ದೇಶದಲ್ಲಿಯ ಒಳ್ಳೆಯ ಬೆಳವಣಿಗೆಗಳನ್ನು ನಾವು ನೋಡೋಣ.ಮಹಾರಾಷ್ಟ್ರದಲ್ಲಿ ನೋಡಿ,ಗಣೇಶ ಪೂಜೆ ಸಂದರ್ಭದಲ್ಲಿ ಲಕ್ಷಾಂತರ ಜನರು ಸೇರುತ್ತಾರೆ,ಆದರೂ ಅಲ್ಲಿ ಗಲಭೆಗಳು ನಡೆಯುವುದಿಲ್ಲ ’ ಎಂದು ನ್ಯಾ.ಚಂದ್ರಚೂಡ್ ಹೇಳಿದರು.

 ‘ದೇಶವು ವೈವಿಧ್ಯಮಯವಾಗಿದೆ. ಭಾರತದ ಒಂದು ಭಾಗದಲ್ಲಿಯ ಸ್ಥಿತಿ ಇನ್ನೊಂದಕ್ಕಿಂತ ಭಿನ್ನವಾಗಿದೆ. ನಾವು ಪ್ರಮಾಣಿತ ಕಾರ್ಯವಿಧಾನಗಳನ್ನು ತರಬೇಕು ಎಂದು ನೀವು ಬಯಸುತ್ತಿದ್ದೀರಿ ’ ಎಂದೂ ಅವರು ಹೇಳಿದರು.

share
Next Story
X