Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೂಕ್ತಪರಿಹಾರ ಇಲ್ಲವೇ ಡಿನೋಟಿಫೈ ಮಾಡಿ...

ಸೂಕ್ತಪರಿಹಾರ ಇಲ್ಲವೇ ಡಿನೋಟಿಫೈ ಮಾಡಿ ಬದುಕಲು ಬಿಡಿ:ರಾಜ್ಯ ಸರಕಾರಕ್ಕೆ ಬಳ್ಕುಂಜೆ ಸುತ್ತಮುತ್ತಲಿನ ಗ್ರಾಮಸ್ಥರ ಆಗ್ರಹ

10 Dec 2022 8:06 PM IST
share
ಸೂಕ್ತಪರಿಹಾರ ಇಲ್ಲವೇ ಡಿನೋಟಿಫೈ ಮಾಡಿ ಬದುಕಲು ಬಿಡಿ:ರಾಜ್ಯ ಸರಕಾರಕ್ಕೆ ಬಳ್ಕುಂಜೆ ಸುತ್ತಮುತ್ತಲಿನ ಗ್ರಾಮಸ್ಥರ ಆಗ್ರಹ

ಮಂಗಳೂರು, ಡಿ.10:  ಸ್ವ ಇಚ್ಛೆಯಿಂದ ಕೈಗಾರಿಕಾ ಅಭಿವೃದ್ಧಿಗೆ ನೀಡಿರುವ ಭೂಮಿಯನ್ನು ಕೆಐಎಡಿಬಿ ಕೂಡಲೇ ವಶಕ್ಕೆ ಪಡೆದು ಸೂಕ್ತ ಪರಿಹಾರ ಮೊತ್ತ ಪಾವತಿಸಬೇಕು, ಇಲ್ಲವೇ ಡಿನೋಟಿಫಿಕೇಶನ್ ಮಾಡಿ ನೆಮ್ಮದಿಯಿಂದ ಬದುಕಲು ಬಿಡಿ ಎಂದು ಬಳ್ಕುಂಜೆ, ಕೊಲ್ಲೂರು, ಉಳೆಪಾಡಿ ಗ್ರಾಮಸ್ಥರು ರಾಜ್ಯ ಸರಕಾರ, ಕೆಐಎಡಿಬಿ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಸ್ಥಳೀಯ ಕೈಗಾರಿಕಾ ಅಭಿವೃದ್ಧಿ ಸಮಿತಿಯ  ಕಾರ್ಯಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಈ ಬಗ್ಗೆ ಮಾತನಾಡಿದರು.

ಯಾವುದೇ ಪೂರ್ವ ಮಾಹಿತಿ ಇಲ್ಲದೆ ರಾಜ್ಯ ಸರ್ಕಾರ ಕೆಐಎಡಿಬಿ ಮೂಲಕ 2022ರ ಮಾರ್ಚ್ 21ರಂದು ಬಳ್ಕುಂಜೆ, ಕೊಲ್ಲೂರು, ಉಳೆಪಾಡಿ ಗ್ರಾಮದ 1,091 ಎಕ್ರೆ ಪ್ರದೇಶವನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳುವ ಕುರಿತು ಅಧಿಸೂಚನೆ ಹೊರಡಿಸಿತ್ತು. ಸರಕಾರ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿದ್ದ ಜಾಗದ ಪೈಕಿ ಶೇ.70ರಷ್ಟು ಪ್ರದೇಶ ಕುರುಚಲು ನಿರ್ಜನ ಪ್ರದೇಶವಾದ ಕಾರಣ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಉತ್ತಮ ಬೆಲೆ ಸಿಗುವುದರಿಂದ ನೀಡಲು ಸಿದ್ಧವಿರುವುದಾಗಿ ಕೆಐಎಡಿಬಿ ಕಚೇರಿಗೆ ಹೋಗಿ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಜಾಗ ನೀಡಲು ಸಹಿ ಮಾಡಿರುವ ಸುಮಾರು 150-200 ಮಂದಿ ಭೂ ಮಾಲೀಕರು ಸರಕಾರ ವಶಪಡಿಸಲು ಉದ್ದೇಶಿರುವ ಜಮೀನಿನ ಪೈಕಿ ಸುಮಾರು 750 ಎಕ್ರೆ ಪ್ರದೇಶದ ಮಾಲಕರು. ಸುಮಾರು 250 ಎಕರೆ ಸರಕಾರಿ ಜಮೀನಾದರೆ, ಉಳಿದಿರುವ ಸ್ವಲ್ಪ ಭಾಗ ಜಾಗ ನೀಡಲು ವಿರೋಧಿಸುತ್ತಿರುವವರಿಗೆ ಸೇರಿದ್ದು. ಆದರೆ ಜಾಗ ನೀಡುವುದಾಗಿ ಸಹಿ ಹಾಕಿರುವುದನ್ನು ಹೊರತು ಪಡಿಸಿದರೆ,  ನಂತರ ಕೆಐಎಡಿಬಿಯಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ಆರೋಪಿಸಿದರು.

ಜಮೀನು ನೀಡಲು ಒಪ್ಪಿಗೆ ನೀಡಿರುವುದರಿಂದ ಆರ್‌ಟಿಸಿಯಲ್ಲಿ ಕೆಐಎಡಿಬಿ ಎಂದು ಬದಲಾವಣೆಯಾಗಿದ್ದು, ಈ ಕಾರಣದಿಂದಾಗಿ ಅಡಮಾನ ಇಡಲು, ಮಾರಾಟ ಮಾಡಲು, ಕೃಷಿ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ. ಇರುವ ಸ್ವಲ್ಪ ಕೃಷಿಗೆ ನೀರು ಹಾಯಿಸಲು, ಮನೆ ಕಟ್ಟುವವರು ಸ್ಪಷ್ಟ ತೀರ್ಮಾನ ಕೈಗೊಳ್ಳಲು, ಮನೆ ರಿಪೇರಿ ಮಾಡಿಸಲು ಸಾಧ್ಯವಾಗದೆ ಮನಸ್ಸಿಗೆ ನೆಮ್ಮದಿ ಇಲ್ಲದಂತಾಗಿದೆ. ಸರ್ಕಾರ, ಇಲಾಖೆ ಸೂಕ್ತ  ನಿರ್ಧಾರಕ್ಕೆ ಬರದೇ ಹೋದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಎಚ್ಚರಿಸಿದರು.

ಸಮಿತಿ ಅಧ್ಯಕ್ಷ ಶಂಕರ್ ಬಿ.ಶೆಟ್ಟಿ ಬಳ್ಕುಂಜೆ ಅವರು ಮಾತನಾಡಿ, ಕೆಐಎಡಿಬಿಯವರು ಶೇ.75ರಷ್ಟು  ಪ್ರದೇಶದ ಸರ್ವೇ ಮಾಡಿ ಬಳಿಕ ಯಾರದೋ ಸೂಚನೆ ಮೇರೆಗೆ ನಿಲ್ಲಿಸಿದ್ದಾರೆ. ಭೂ ಸ್ವಾಧೀನದ ವಿರುದ್ಧ ಇರುವವರು 5-10 ಮಂದಿ ಭೂ ಮಾಲಕರು ಮಾತ್ರ. ಅವರಿಗೆ ಸುಳ್ಳು ಮಾಹಿತಿ ನೀಡಿ, ಭೂಮಿ ನೀಡದಂತೆ ತಡೆಯಲಾಗಿದೆ. ಕೈಗಾರಿಕೆಗಳು ಬಂದರೆ ಸ್ಥಳೀಯರಿಗೂ ಉದ್ಯೋಗಾವಕಾಶ ದೊರೆತು, ಆ ಭಾಗದ ಅಭಿವೃದ್ಧಿಗೂ ಕಾರಣವಾಗಲಿದೆ ಎಂದರು.

ಕೈಗಾರಿಕಾ ಸಂಘದ ಪ್ರಮುಖರಾದ ಗೌರವ್ ಹೆಗ್ಡೆ, ಸ್ಥಳೀಯರಾದ ಪೌಸ್ಟಿನ್ ಡಿಸೋಜ, ಸಲಹೆಗಾರ ರಿಚರ್ಡ್ ಲೋಬೋ ಉಪಸ್ಥಿತರಿದ್ದರು.

share
Next Story
X