Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆನರ್ಸ್ ಪದವಿಗೆ ನಾಲ್ಕು ವರ್ಷಗಳ ಪದವಿ...

ಆನರ್ಸ್ ಪದವಿಗೆ ನಾಲ್ಕು ವರ್ಷಗಳ ಪದವಿ ಕೋರ್ಸ್ ಕಡ್ಡಾಯಗೊಳಿಸಲಿರುವ ಯುಜಿಸಿ

10 Dec 2022 9:12 PM IST
share
ಆನರ್ಸ್ ಪದವಿಗೆ ನಾಲ್ಕು ವರ್ಷಗಳ ಪದವಿ ಕೋರ್ಸ್ ಕಡ್ಡಾಯಗೊಳಿಸಲಿರುವ ಯುಜಿಸಿ

ಹೊಸದಿಲ್ಲಿ,ಡಿ.10: ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC)ದ ನೂತನ ನಿಯಮಾವಳಿಗಳಡಿ ಸ್ನಾತಕಪೂರ್ವ ಕೋರ್ಸ್‌ಗಳಲ್ಲಿ ಆನರ್ಸ್ ಪದವಿಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ನಾಲ್ಕು ವರ್ಷಗಳ ಪದವಿ ತರಗತಿ ಶಿಕ್ಷಣವನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಲಿದೆ. ಆಯೋಗವು ಸೋಮವಾರ ನೂತನ ನಿಯಮಾವಳಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ವಿದ್ಯಾರ್ಥಿಗಳು 120 ಕ್ರೆಡಿಟ್‌ಗಳನ್ನು ಪೂರ್ಣಗೊಳಿಸಿ ಮೂರು ವರ್ಷಗಳಲ್ಲಿ ಪದವಿಯನ್ನು ಮತ್ತು 160 ಕ್ರೆಡಿಟ್‌ಗಳನ್ನು (ಶೈಕ್ಷಣಿಕ ವರ್ಷಗಳ ಸಂಖ್ಯೆಗಳ ಮೂಲಕ ಲೆಕ್ಕ ಹಾಕಲಾಗುತ್ತದೆ) ಪೂರ್ಣಗೊಳಿಸಿ ನಾಲ್ಕು ವರ್ಷಗಳಲ್ಲಿ ಯುಜಿ ಆನರ್ಸ್ (UG Hons)ಪದವಿಯನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಯುಜಿಸಿಯ ಕರಡು ಪಠ್ಯಕ್ರಮ ಮತ್ತು ಕ್ರೆಡಿಟ್ ಫ್ರೇಮ್‌ವರ್ಕ್‌ನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಮೂರು ವರ್ಷಗಳ ಪದವಿ ಕೋರ್ಸ್‌ಗಳಿಗೆ ಈಗಾಗಲೇ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ನಾಲ್ಕು ವರ್ಷಗಳ ಕೋರ್ಸ್‌ನ್ನು ಮಾಡಲು ಅರ್ಹರಾಗಿರುತ್ತಾರೆ.

ವಿಸ್ತರಿತ ಕೋರ್ಸ್‌ಗೆ ಪ್ರವೇಶ ಪಡೆಯುವುದನ್ನು ವಿದ್ಯಾರ್ಥಿಗಳಿಗೆ ಸಾಧ್ಯವಾಗಿಸಲು ವಿಶ್ವವಿದ್ಯಾಲಯವು ಆನ್‌ಲೈನ್ ಸೇರಿದಂತೆ ಬ್ರಿಡ್ಜ್ ಕೋರ್ಸ್‌ಗಳನ್ನು ಒದಗಿಸಬಹುದು ಎಂದು ಕರಡಿನಲ್ಲಿ ಹೇಳಲಾಗಿದೆ.

ಸುದ್ದಿಸಂಸ್ಥೆಯ ವರದಿಯಂತೆ ನಾಲ್ಕು ವರ್ಷಗಳ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಮೂರು ವರ್ಷಗಳಿಗೆ ಮೊದಲು ಕೋರ್ಸ್‌ನಿಂದ ನಿರ್ಗಮಿಸಲು ಮತ್ತು ನಂತರ ಮರುಸೇರ್ಪಡೆಗೊಳ್ಳಲು ಅವಕಾಶ ಕಲ್ಪಿಸಲಿದೆ. ಕೋರ್ಸ್‌ನಿಂದ ನಿರ್ಗಮಿಸಿದ ಮೂರು ವರ್ಷಗಳಲ್ಲಿ ಮರುಸೇರ್ಪಡೆಗೊಳ್ಳುವ ಆಯ್ಕೆ ಅವರಿಗಿರಲಿದೆ ಮತ್ತು ಏಳು ವರ್ಷಗಳ ನಿಗದಿತ ಅವಧಿಯಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ನಿರ್ದಿಷ್ಟ ವಿಭಾಗದಲ್ಲಿ ಮೂರು ವರ್ಷಗಳ ಪದವಿ ಶಿಕ್ಷಣವನ್ನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆನರ್ಸ್ ಪದವಿಗಳನ್ನೂ ನೀಡಲಾಗುವುದು ಎಂದು ದಿಲ್ಲಿ ವಿವಿಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ. ತನ್ನ ನೂತನ ಪಠ್ಯಕ್ರಮ ಮತ್ತು ಕ್ರೆಡಿಟ್ ಫ್ರೇಮ್‌ವರ್ಕ್‌ನಡಿ ಯುಜಿಸಿಯು ರಾಷ್ಟ್ರೀಯ ಶಿಕ್ಷಣ ನೀತಿ,2020ರ ಶಿಫಾರಸುಗಳನ್ನು ಜಾರಿಗೊಳಿಸಲು ನೋಡುತ್ತಿದೆ. ನೂತನ ಫ್ರೇಮ್‌ವರ್ಕ್ ‘ಭಾರತವನ್ನು ಅರಿಯುವಿಕೆ ’,ಆಧುನಿಕ ಭಾರತೀಯ ಭಾಷೆಗಳು ಮತ್ತು ಯೋಗ ಕೋರ್ಸ್‌ಗಳನ್ನು ಶಿಫಾರಸು ಮಾಡುವ ಮೂಲಕ ಉನ್ನತ ಶಿಕ್ಷಣವನ್ನು ಮಲ್ಟಿ-ಡಿಸಿಪ್ಲಿನರಿ (ಬಹು ಕೋರ್ಸ್‌ಗಳ ಸಂಯೋಜನೆ)ಯನ್ನಾಗಿಸಲು ಯೋಜಿಸಿದೆ ಎಂದು ವರದಿಯು ತಿಳಿಸಿದೆ.

share
Next Story
X