Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀದಿಗೆ ಬಂದ ಕಾಂಗ್ರೆಸ್​ ನಾಯಕರ ಒಳಜಗಳ:...

ಬೀದಿಗೆ ಬಂದ ಕಾಂಗ್ರೆಸ್​ ನಾಯಕರ ಒಳಜಗಳ: ಬಿಜೆಪಿ ಟೀಕೆ

10 Dec 2022 10:37 PM IST
share
ಬೀದಿಗೆ ಬಂದ ಕಾಂಗ್ರೆಸ್​ ನಾಯಕರ ಒಳಜಗಳ: ಬಿಜೆಪಿ ಟೀಕೆ

ಬೆಂಗಳೂರು, ಡಿ.10: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಒಳಜಗಳ ಬೀದಿಗೆ ಬಂದಿದೆ. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ ಈ ಇಬ್ಬರ ರಂಪಾಟಗಳು ಕಾರ್ಯಕರ್ತರ ತೋಳುಗಳಲ್ಲಿ ಕಾಣುತ್ತಿರುವುದು ಕಾಂಗ್ರೆಸ್ ಪಕ್ಷದ ಅಧಃಪತನದ ಸೂಚನೆ ಎಂದು ಬಿಜೆಪಿ ಟೀಕಿಸಿದೆ.

ಶನಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಟಿಕೆಟ್‍ಗಾಗಿ ಅರ್ಜಿ ಎಂಬುದು  ಡಿ.ಕೆ. ಶಿವಕುಮಾರ್ ತಮ್ಮ ವಿರೋಧಿ ಸಿದ್ದರಾಮಯ್ಯರನ್ನು ಹಣಿಯಲು ತೋಡಿರುವ ಖೆಡ್ಡ. ಇದರಲ್ಲಿ ಅವರ ಹೊರತಾಗಿ ಮಿಕ್ಕೆಲ್ಲರು ಬಿದ್ದಿರುವುದರಿಂದಲೇ ಈ ಹಾದಿಬೀದಿ ರಂಪ ಶುರುವಾಗಿರುವುದು. ಓರ್ವನ ಸ್ವಾರ್ಥ ಲಾಲಸೆಗೆ ಕಾರ್ಯಕರ್ತರು ಕತ್ತಿನ ಪಟ್ಟಿ ಹಿಡಿದುಕೊಂಡು ಹೊಡೆದಾಡುವುದು ನಾಚಿಕೆಗೇಡಿನ ಸಂಗತಿಯಲ್ಲವೇ? ಎಂದು ಹೇಳಿದೆ.

ರೌಡಿಸಂ ಕಾಂಗ್ರೆಸ್ ಪಕ್ಷದ ಶಕ್ತಿ. ಸಂಜಯ್ ಗಾಂಧಿ ಕುಖ್ಯಾತ ರೌಡಿ ಜಯರಾಜನನ್ನು ಬೆಳೆಸಿದರು. ಅದೇ ಹಾದಿಯಲ್ಲಿ ಬಂದು ಕೊತ್ವಾಲ ಶಿಷ್ಯರಾಗಿದ್ದವರು ಇಂದು ಕೆಪಿಸಿಸಿ ಅಧ್ಯಕ್ಷ. ಕಾಂಗ್ರೆಸ್ ಇತಿಹಾಸವೇ ಹೀಗಿರಬೇಕಾದರೆ ಬೀದಿ ಹೊಡೆದಾಟಗಳು ಪಕ್ಷಕ್ಕೆ ಸಾಮಾನ್ಯ. ಆದರೆ, ನಾಡಿನ ಜನರಿಗೆ ಇದನ್ನು ಸಹಿಸಿಕೊಳ್ಳುವ ಕರ್ಮ ಏಕೆ? ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ ಒಳಗಿನ ಬೇಗುದಿ, ರೌಡಿಸಂ ವರ್ತನೆಯ ಫಲಶೃತಿಯೇ ಹೊಸಕೋಟೆ, ಹಾಸನ, ತುಮಕೂರು ಗ್ರಾಮಾಂತರ ಪ್ರದೇಶಗಳ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮಲ್ಲೇ ರಂಪಾಟ. ತಮ್ಮ ಕಾಯಕರ್ತರನ್ನು ತಹಬಂದಿಗೆ ತರಲು ಹೆಣಗಾಡುತ್ತಿರುವ ಈ ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯ ಚುಕ್ಕಾಣಿ ಹಿಡಿದರೆ ಗತಿ ಏನು ಎಂಬುದನ್ನು ಜನತೆ ಯೋಚಿಸಬೇಕು ಎಂದು ಬಿಜೆಪಿ ತಿಳಿಸಿದೆ.

ಅಧಿಕಾರ ದಾಹ ತೀರಿಸಿಕೊಳ್ಳಲು ರೌಡಿಸಂಗೂ ಇಳಿಯುವ ಕಾಂಗ್ರೆಸ್ ನಾಯಕರ ರಕ್ಕಸ ಗುಣಗಳು ಪಕ್ಷದ ಕಾರ್ಯಕರ್ತರಲ್ಲೂ ಈಗ ಕಾಣುತ್ತಿರುವುದಕ್ಕೆ ಆಶ್ಚರ್ಯ ಪಡಬೇಕಿಲ್ಲ. ಯಥಾ ರಾಜ ತಥಾ ಪ್ರಜಾ. ಸಮಾಜದ ಅಶಾಂತಿಗೆ, ಸಮಾಜ ಘಾತುಕ ಶಕ್ತಿಗಳಿಗೆ ಪ್ರೇರಕರಾಗಿರುವ ಇಂಥವರಿಂದ ಎಂಥ ಆಡಳಿತ ನಿರೀಕ್ಷಿಸಬಹುದು, ನೀವೇ ಯೋಚಿಸಿ? ಎಂದು ಬಿಜೆಪಿ ತಿಳಿಸಿದೆ.

ಕಾಂಗ್ರೆಸ್‌ನ @DKShivakumar ಮತ್ತು @siddaramaiah ನವರ ಒಳಜಗಳ ಬೀದಿಗೆ ಬಂದಿದೆ. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ ಈ ಇಬ್ಬರ ರಂಪಾಟಗಳು ಕಾರ್ಯಕರ್ತರ ತೋಳುಗಳಲ್ಲಿ ಕಾಣುತ್ತಿರುವುದು @INCKarnatakaದ ಅಧಃಪತನದ ಸೂಚನೆ. 1/5

— BJP Karnataka (@BJP4Karnataka) December 10, 2022
share
Next Story
X