Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಸ್ತಿಕ-ನಾಸ್ತಿಕ ತಮ್ಮ ವಿಚಾರಗಳಿಗೆ...

ಆಸ್ತಿಕ-ನಾಸ್ತಿಕ ತಮ್ಮ ವಿಚಾರಗಳಿಗೆ ಪ್ರಾಮಾಣಿಕರಾಗಿರಬೇಕು: ಪ್ರೊ.ಬರಗೂರು

10 Dec 2022 10:50 PM IST
share
ಆಸ್ತಿಕ-ನಾಸ್ತಿಕ ತಮ್ಮ ವಿಚಾರಗಳಿಗೆ ಪ್ರಾಮಾಣಿಕರಾಗಿರಬೇಕು: ಪ್ರೊ.ಬರಗೂರು

ಬೆಂಗಳೂರು, ಡಿ. 10: ಆಸ್ತಿಕರು ಆಸ್ತಿಕ ವಿಚಾರಗಳಿಗೆ, ನಾಸ್ತಿಕರು ನಾಸ್ತಿಕ ವಿಚಾರಗಳಿಗೆ ಪ್ರಾಮಾಣಿಕರಾಗಿರಬೇಕು. ಗಾಂಧಿ, ವಿವೇಕಾನಂದರು ಆಸ್ತಿಕರಾಗಿದ್ದು, ಅವರ ಆಸ್ತಿಕತೆ ಮನುಷ್ಯ ವಿರೋಧಿ ಆಗಿರಲಿಲ್ಲ ಎಂದು ಸಾಹಿತಿ, ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. 

ಶನಿವಾರ ಇಲ್ಲಿನ ನಯನ ಸಭಾಂಗಣದಲ್ಲಿ ಪಂಪ ಸಾಂಸ್ಕೃ ತಿಕ ಮತ್ತು ಸಾಮಾಜಿಕ ಕೇಂದ್ರವು ಆಯೋಜಿಸಿದ್ದ ಧೀಮಂತರು ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುನುಷ್ಯ ವಿರೋಧವಾದದ್ದು ಯಾವುದೇ ಆದರೂ, ಅದು ಅನ್ಯಾಯ ಮತ್ತು ವಿರೋಧಕ್ಕೆ ಅರ್ಹವಾಗಿರುತ್ತದೆ. ನಾವು ಇಂದು ಉತ್ತಮ ಮನುಷ್ಯನ ಶೋಧದಲ್ಲಿ ತೊಡಗಿದ್ದೇವೆ. ನಮ್ಮ ಸಾಹಿತ್ಯ, ರಂಗಭೂಮಿ ಆ ಶೋಧವನ್ನು ಮಾಡುತ್ತಾ ಬಂದಿದೆ ಎಂದರು. 

ಯಾರು ಸಾಮಾನ್ಯರಾಗಿರುತ್ತೇವೆ ಎಂದು ಹೇಳಿಕೊಂಡು ಬದುಕುತ್ತಾರೋ ಅವರು ಒಂದಲ್ಲ ಒಂದು ದಿನ ಅಸಾಮಾನ್ಯರಾಗಿರುತ್ತಾರೆ. ಬಸವಣ್ಣನವರು ಎನಗಿಂತ ಕಿರಿಯರಿಲ್ಲ ಎಂದರು. ಹಾಗಾಗಿ ನಾವು ಇಂದು ಅವರನ್ನು ನಿಮಗಿಂತ ಹಿರಿಯರಿಲ್ಲ ಎನ್ನುತ್ತಿದ್ದೇವೆ. ಅಂದರೆ ನಮಗೆ ನಮ್ಮ ಇತಿ-ಮೀತಿಗಳ ಬಗ್ಗೆ ಅರಿವು ಇದ್ದು, ನಮ್ಮನ್ನು ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇದು ಉತ್ತಮ ಮನುಷ್ಯನ ಲಕ್ಷಣವಾಗಿರುತ್ತದೆ ಎಂದು ಅವರು ಹೇಳಿದರು. 

ಇಂದು ಅಪವ್ಯಾಖ್ಯಾಯನಗಳ ಕಾಲದಲ್ಲಿದ್ದೇವೆ. ಇದು ನಿಜ ವ್ಯಾಖ್ಯಾಯನಗಳ ಕಾಲವಲ್ಲ. ಯಾವ ವಿಚಾರ ಮಾತನಾಡಿದರೂ, ಅದನ್ನು ಅಪಪ್ರಚಾರ ಮಾಡಲು ಅವತಾರ ಎತ್ತಿದ ಪುರುಷರು ನಮ್ಮ ನಡುವೆ ಇದ್ದಾರೆ ಎಂದ ಅವರು, ವಿದ್ಯಾವಂತರೆಲ್ಲ ವಿವೇಕಿಗಳಲ್ಲ, ಅವಿದ್ಯಾವಂತರೆಲ್ಲ ಅವಿವೇಕಿಗಳಲ್ಲ ಎಂದು ಹೇಳಿದರು.  

ಎಪ್ಪತರ ದಶಕದಲ್ಲಿ ಬೀದಿನಾಟಕಗಳು ಸರಕಾರದ ಮತ್ತು ವ್ಯವಸ್ಥೆಯ ಬಗ್ಗೆ ವಿಮರ್ಶೆ ಮಾಡಲು ಬಳಸುತ್ತಿದ್ದರು. ನಂತರ ಸರಕಾರದ ಕಾರ್ಯಕ್ರಮಗಳ ಕುರಿತು ಬೀದಿ ನಾಟಕಗಳನ್ನು ಆಡಲು ಪ್ರಾರಂಭಿಸಿದರು. ಹೀಗೆ ರಂಗಭೂಮಿಯಲ್ಲಿ ಅನೇಕ ಹೊಸ ಪ್ರಯೋಗಗಳು ನಡೆಯುತ್ತ ಬಂದಿವೆ ಎಂದು ನನೆಪಿಸಿಕೊಂಡರು. ಬರಹಗಾರ ಡಾ. ಎಚ್.ಎ. ಪಾರ್ಶನಾಥ್, ಸಾಹಿತಿ ಪ್ರೊ.ಸಂಪಿಗೆ ತೋಂಟದಾರ್ಯ, ನಾರಾಯಣ ರಾಯಚೂರ್, ಡಾ.ಬಿ.ವಿ.ರಾಜಾರಾಂ ಮತ್ತಿತರರು ಉಪಸ್ಥಿತರಿದ್ದರು.

share
Next Story
X