Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಬಂಧ ಹೇರಲ್ಪಟ್ಟ ಸಂಸ್ಥೆಗಳಿಗೆ...

ನಿರ್ಬಂಧ ಹೇರಲ್ಪಟ್ಟ ಸಂಸ್ಥೆಗಳಿಗೆ ಮಾನವೀಯ ನೆರವು ಪಡೆಯಲು ಅವಕಾಶ: ಭದ್ರತಾ ಮಂಡಳಿ ನಿರ್ಣಯಕ್ಕೆ ಭಾರತ ಗೈರು

10 Dec 2022 11:35 PM IST
share
ನಿರ್ಬಂಧ ಹೇರಲ್ಪಟ್ಟ ಸಂಸ್ಥೆಗಳಿಗೆ ಮಾನವೀಯ ನೆರವು ಪಡೆಯಲು ಅವಕಾಶ: ಭದ್ರತಾ ಮಂಡಳಿ ನಿರ್ಣಯಕ್ಕೆ  ಭಾರತ ಗೈರು

ವಿಶ್ವಸಂಸ್ಥೆ, ಡಿ.10: ನಿರ್ಬಂಧ ಹೇರಲ್ಪಟ್ಟ ಸಂಸ್ಥೆಗಳಿಗೆ ಮಾನವೀಯ ನೆರವನ್ನು ಪಡೆಯುವುದಕ್ಕೆ ಅವಕಾಶ ಮಾಡಿಕೊಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದ ಕುರಿತ ಮತದಾನಕ್ಕೆ ಭಾರತವು ಶುಕ್ರವಾರ ಗೈರುಹಾಜರಾಗಿದೆ.

ಅಮೆರಿಕ ಹಾಗೂ ಐಯರ್‌ಲ್ಯಾಂಡ್ ಈ ನಿರ್ಣಯವನ್ನು ಮಂಡಿಸಿದ್ದವು.   ಸರಕು ಹಾಗೂ ಸೇವೆಗಳ ಪೂರೈಕೆ ಮತ್ತು ಹಣಕಾಸು ನಿಧಿ ಪಾವತಿ ಪ್ರಕ್ರಿಯೆಯಿಂದ ನಿರ್ಬಂಧ ಹೇರಲ್ಪಟ್ಟ ಸಂಸ್ಥೆಗಳಿಗೆ ಮಾನವೀಯ ನೆರವು ಪಡೆಯುವುದಕ್ಕೆ ಅವಕಾಶ ನೀಡುವ  ಬಗ್ಗೆ ನಿರ್ಣಯದಲ್ಲಿ ಪ್ರಸ್ತಾವಿಸಲಾಗಿತ್ತು.
ಭಾರತವು ಪ್ರಸಕ್ತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಆವರ್ತನಾ ಅಧ್ಯಕ್ಷತೆಯನ್ನು ಹೊಂದಿದ್ದು, ನಿರ್ಣಯದ ಮೇಲಿನ ಮತದಾನಕ್ಕೆ ಗೈರುಹಾಜರಾದ ಏಕೈಕ ಸದಸ್ಯ ರಾಷ್ಟ್ರವಾಗಿದೆ. ಭದ್ರತಾ ಮಂಡಳಿಯ ಉಳಿದ ಎಲ್ಲಾ 14  ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತದಾನ ಮಾಡಿದವು.

ನಿರ್ಣಯದ ಮೇಲಿನ ಮತದಾನಕ್ಕೆ ಗೈರುಹಾಜರಾಗುವ ತನ್ನ ದೇಶದ ನಡೆಯನ್ನು  ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಭೋಜ್ ಸಮರ್ಥಿಸಿಕೊಂಡಿದ್ದಾರೆ. ‘‘ ಮಾನವೀಯ ನೆರವು ಪೂರೈಕೆಗಾಗಿ ನೀಡುವ ಇಂತ ರಿಯಾಯಿತಿಗಳನ್ನು ಭಯೋತ್ಪಾದಕ ಗುಂಪುಗಳು ಸಂಪೂರ್ಣ ದುರುಪಯೋಗ ಪಡಿಸಿಕೊಂಡಿರುವ ಹಲವು ನಿದರ್ಶನಗಳಿವೆ. ಇಂತಹ ರಿಯಾಯಿತಿಗಳನ್ನು ಘೋಷಿಸುವುದರಿಂದ, 1267 ನಿರ್ಬಂಧಗಳ ಸಮಿತಿ ಮತ್ತಿತರ ವ್ಯವಸ್ಥೆಗಳ ಮೂಲಕ ಅವುಗಳ ಮೇಲೆ ಹೇರಲ್ಪಟ್ಟ ನಿರ್ಬಂಧಗಳನ್ನು ಅಣಕಿಸಿದಂತಾಗುತ್ತದೆ ಎಂದವರು ಹೇಳಿದ್ದಾರೆ.

ವಿಶ್ವಸಂಸ್ಥೆಯ 1267 ನಿರ್ಬಂಧಗಳ ಸಮಿತಿಯಡಿ ವಿಶ್ವಸಂಸ್ಥೆಯ ಯಾವುದೇ ಸದಸ್ಯ ರಾಷ್ಟ್ರವು ಓರ್ವ ವ್ಯಕ್ತಿ ಅಥವಾ ಒಂದು ಸಂಸ್ಥೆಯನ್ನು ಭಯೋತ್ಪಾದಕ ಹಾಗೂ ಭಯೋತ್ಪಾದಕ ಗುಂಪೆಂದು ಘೋಷಿಸುವ ಅಧಿಕಾರವನ್ನು ಹೊಂದಿದೆ.
ಮಾನವೀಯ ನೆರವನ್ನು ಪಡೆಯುವ ಸೋಗಿನಲ್ಲಿ ತಮ್ಮ ಚಟುವಟಿಕೆಗಳನ್ನು ವಿಸ್ತರಿಸುವುದಕ್ಕೆ ಭಯೋತ್ಪಾದಕ ಗುಂಪುಗಳಿಗೆ ಅವಕಾಶ ನೀಡಕೂಡದೆಂದು ಕಾಂಬೋಜ್ ಹೇಳಿದರು. ಇಂತಹ ವಿನಾಯಿತಿಗಳುನನ ಭಯೋತ್ಪಾದಕ ಗುಂಪುಗಳನ್ನು ಮುಖ್ಯವಾಹಿನಿಯೊಂದಿಗೆ ಸೇರಿಸಿಕೊಳ್ಳುವುದಕ್ಕೆ ಕಾರಣವಾಗಬಾರದು ಎಂದು ಕಾಂಬೋಜ್ ಅಭಿಪ್ರಾಯಿಸಿದರು.

‘‘ಭದ್ರತಾ ಮಂಡಳಿಯಲ್ಲಿ ಪಟ್ಟಿ ಮಾಡಲ್ಪಟ್ಟವು ಸೇರಿದಂತೆ ನಮ್ಮ ನೆರೆಹೊರೆಯಲ್ಲಿರುವ ಭಯೋತ್ಪಾದಕ ಗುಂಪುಗಳು ತಮ್ಮ ಮೇಲೆ ಹೇರಲಾದ ನಿರ್ಬಂಧಗಳಿಂದ ತಪ್ಪಿಸಿಕೊಳ್ಳಲು ಮಾನವೀಯ ಸಂಘಟನೆಗಳು ಹಾಗೂ ನಾಗರಿಕ ಸಂಘಟನೆಗಳ ಅವತಾರವನ್ನು ತಾಳಿರುವ ಹಲವು ದೃಷ್ಟಾಂತಗಳಿವೆ ’’ಎಂದು ಆಕೆ ತಿಳಿಸಿದರು.
ಇಂತಹ ನಿರ್ಣಯವನ್ನು ಅನುಷ್ಠಾನಕ್ಕೆ ತರುವಾಗ ಶ್ರದ್ಧೆ ಹಾಗೂ ಅತೀವ ಮುನ್ನೆಚ್ಚರಿಕೆಯನ್ನು  ಪಾಲಿಸಬೇಕೆಂದು ಭಾರತವು ಜಾಗತಿಕ ಸಮುದಾಯವನ್ನು ಆಗ್ರಹಿಸುತ್ತದ ಎಂದವರು ಹೇಳಿದರು.

share
Next Story
X