Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಂಧಿ ಭಾಷೆಯ ಮಾನ್ಯತೆಗೆ ಧ್ವನಿ ಎತ್ತಿದ...

ಸಿಂಧಿ ಭಾಷೆಯ ಮಾನ್ಯತೆಗೆ ಧ್ವನಿ ಎತ್ತಿದ ಕೆನಡಾ ಸಂಸತ್ತು

11 Dec 2022 11:08 PM IST
share
ಸಿಂಧಿ ಭಾಷೆಯ ಮಾನ್ಯತೆಗೆ ಧ್ವನಿ ಎತ್ತಿದ ಕೆನಡಾ ಸಂಸತ್ತು

ಒಟ್ಟಾವ, ಡಿ.11: ಸಿಂಧಿ ಭಾಷೆಗೆ ಅಧಿಕೃತ ಭಾಷೆಯ ಮಾನ್ಯತೆ ನೀಡುವ ವಿಷಯದಲ್ಲಿ ಕೆನಡಾದ ಸಂಸತ್ತು ಧ್ವನಿ ಎತ್ತಿದ್ದು, ಸಿಂಧಿ ಭಾಷೆಯ ವೆಬ್‌ಸೈಟ್ ಅನ್ನು ಪ್ರಾರಂಭಿಸುವಂತೆ ಪಾಕಿಸ್ತಾನದಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಒತ್ತಾಯಿಸಿದೆ.

 ಪಾಕಿಸ್ತಾನದಲ್ಲಿರುವ ಕೆನಡಾ ರಾಯಭಾರ ಕಚೇರಿಯಲ್ಲಿ ಸಿಂಧಿ ಭಾಷೆಯ ವೆಬ್‌ಸೈಟ್ ಆರಂಭಿಸುವ ಮೂಲಕ ಕೆನಡಾ ಸರಕಾರ ಹಾಗೂ ಸಿಂಧಿ ಭಾಷಿಕರ ನಡುವಿನ ಸಂವಹನಕ್ಕೆ ಎದುರಾಗುವ ಅಡೆತಡೆಯನ್ನು ನಿವಾರಿಸಬೇಕು ಎಂದು ಕೆನಡಾದ ಸಂಸದ ಜೆರೆಮಿ ಪಾಟ್ಝರ್ ಕೆನಡಾದ ಹೌಸ್ ಆಫ್ ಕಾಮನ್ಸ್(ಸಂಸತ್ತು)ನಲ್ಲಿ ಒತ್ತಾಯಿಸಿದ್ದಾರೆ.

 ಸಿಂಧಿ ಭಾಷೆಗೆ ಮಾನ್ಯತೆ ನೀಡುವಂತೆ ನಾನಿಂದು ಧ್ವನಿ ಎತ್ತುತ್ತಿದ್ದೇನೆ. ಈ ಭಾಷೆಯನ್ನು ವಿದೇಶದಲ್ಲಿ ಸಂರಕ್ಷಿಸಲು ಕೆನಡಾ ಒಂದು ಸಣ್ಣ, ಆದರೆ ಮಹತ್ವದ ಹೆಜ್ಜೆಯನ್ನು ಇಡಬಹುದು. ಹೀಗೆ ಮಾಡುವುದರಿಂದ ಕೆನಡಾ ಮತ್ತು ಸಿಂಧ್ ಹಾಗೂ ಪಾಕಿಸ್ತಾನದ ಇತರ ಪ್ರದೇಶಗಳಲ್ಲಿರುವ ಸಿಂಧಿ ಜನರ ನಡುವಿನ ಸಂಬಂಧ ಬಲಗೊಳ್ಳುತ್ತದೆ ಎಂದು ಜೆರೆಮಿ ಪಾಟ್ಝರ್ ಟ್ವೀಟ್ ಮಾಡಿದ್ದಾರೆ. ಸಿಂಧಿ ಪಾಕಿಸ್ತಾನದ ಸಿಂಧ್ ಪ್ರಾಂತದ ಅಧಿಕೃತ ಭಾಷೆಯಾಗಿ ಗುರುತಿಸಲ್ಪಟ್ಟಿದೆ. ಆದರೆ ಕರಾಚಿಯಲ್ಲಿರುವ ಕೆನಡಾ ದೂತಾವಾಸದಿಂದ ಅಥವಾ ಇಸ್ಲಮಾಬಾದ್‌ನಲ್ಲಿರುವ ಕೆನಡಾ ಹೈಕಮಿಷನ್‌ನಿಂದ ಪ್ರಾದೇಶಿಕ ಭಾಷೆಯಾಗಿ ಗುರುತಿಸಲ್ಪಟ್ಟಿಲ್ಲ. ಪ್ರಾದೇಶಿಕ ಭಾಷೆಯ ಮನ್ನಣೆಯ ಕೊರತೆಯು ಸಿಂಧಿ ಜನತೆ ಹಾಗೂ ಕೆನಡಾ ದೂತಾವಾಸದ ನಡುವಿನ ಸಂವಹನಕ್ಕೆ ಅಡ್ಡಿಯಾಗುತ್ತಿದೆ. ಇದು ಬದಲಾಗಬೇಕು ಎಂದವರು ಆಗ್ರಹಿಸಿದ್ದಾರೆ.

ಇದೇ ಸಂದರ್ಭ ಸಂಸತ್ತಿನಲ್ಲಿ ಸಿಂಧಿ ಫೌಂಡೇಷನ್‌ನ ಸೂಫಿ ಲಘಾರಿ ಮತ್ತು ಮೀರ್ ಮುಝಫರ್ ತಾಲ್ಪುರ್‌ರನ್ನು ಗೌರವಿಸಲಾಯಿತು. ವಾಷಿಂಗ್ಟನ್ ಮೂಲದ ಸಿಂಧಿ ಫೌಂಡೇಷನ್ ಪಾಕಿಸ್ತಾನದಲ್ಲಿರುವ ಸಿಂಧಿ ಜನತೆಯ ಹಕ್ಕುಗಳಿಗಾಗಿ ಕಾರ್ಯ ನಿರ್ವಹಿಸುತ್ತಿದೆ. 

share
Next Story
X