Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲ ಗಡಿಯಲ್ಲಿ ಘರ್ಷಣೆ : ರಕ್ಷಣಾ...

ಅರುಣಾಚಲ ಗಡಿಯಲ್ಲಿ ಘರ್ಷಣೆ : ರಕ್ಷಣಾ ಸಚಿವಾಲಯ ಹೇಳಿದ್ದೇನು?

13 Dec 2022 9:23 PM IST
share
ಅರುಣಾಚಲ ಗಡಿಯಲ್ಲಿ ಘರ್ಷಣೆ : ರಕ್ಷಣಾ ಸಚಿವಾಲಯ ಹೇಳಿದ್ದೇನು?

ಹೊಸದಿಲ್ಲಿ,ಡಿ.13: ಕಳೆದ ವಾರ ಅರುಣಾಚಲ ಪ್ರದೇಶದ ತವಾಂಗ್ ವಿಭಾಗದ ವಾಸ್ತವಿಕ ನಿಯಂತ್ರಣ ರೇಖೆ (LAC)ಯಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಸಂಭವಿಸಿದ ಘರ್ಷಣೆಗಳಲ್ಲಿ  ಉಭಯ ದೇಶಗಳ ಕೆಲವೇ ಯೋಧರು ಗಾಯಗೊಂಡಿದ್ದಾರೆ ಎಂದು ಮಂಗಳವಾರ ಸಂಸತ್ತಿನಲ್ಲಿ  ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh)ಹೇಳಿದ್ದಾರೆ .‘ನಮ್ಮ ಯಾವುದೇ ಯೋಧರು ಸಾವನ್ನಪ್ಪಿಲ್ಲ ಅಥವಾ ಗಂಭೀರವಾಗಿ ಗಾಯಗೊಂಡಿಲ್ಲ. ಭಾರತೀಯ ಮಿಲಿಟರಿ ಕಮಾಂಡರ್‌ಗಳ ಸಕಾಲಿಕ ಮಧ್ಯಪ್ರವೇಶದಿಂದಾಗಿ ಚೀನಿ ಸೈನಿಕರು ತಮ್ಮ ಸ್ವಸ್ಥಾನಗಳಿಗೆ ಮರಳಿದ್ದಾರೆ ಎಂದು ತಿಳಿಸಿದರು.

ಚೀನಾ ಎಲ್‌ಎಸಿಯಲ್ಲಿ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಸಿಂಗ್, ಡಿ.11ರಂದು ಅರುಣಾಚಾಲ ಪ್ರದೇಶದ ತವಾಂಗ್‌ನ ಯಾಂಗ್ಸೆ ಪ್ರದೇಶದ ಭಾರತೀಯ ಸೇನೆಯ ಕಮಾಂಡರ್ ಚೀನಿ ಕಮಾಂಡರ್ ಜೊತೆ ಧ್ವಜ ಸಭೆ ನಡೆಸಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿ (Narendra Modi)ಸರಕಾರವು ಘರ್ಷಣೆಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಸೋಮವಾರ ಆರೋಪಿಸಿದ ಬಳಿಕ ಗೃಹಸಚಿವರ ಹೇಳಿಕೆ ಹೊರಬಿದ್ದಿದೆ.

‘ಉತ್ತರ ಲಡಾಖ್‌ನಲ್ಲಿ ತನ್ನ ಅತಿಕ್ರಮಣವನ್ನು ಕಾಯಂಗೊಳಿಸಲು ಚೀನಾ ಡೆಸ್ಪಾಂಗ್‌ನಲ್ಲಿ ಎಲ್‌ಎಸಿಯಿಂದ 15-18 ಕಿ.ಮೀ.ಅಂತರದೊಳಗೆ 200 ಕಾಯಂ ಕಟ್ಟಡಗಳನ್ನು ನಿರ್ಮಿಸಿದೆ,ಆದರೆ ಸರಕಾರವು ಈ ಬಗ್ಗೆ ಮೌನವಾಗಿತ್ತು. ಈಗ ಈ ಹೊಸ ಕಳವಳಕಾರಿ ಸಮಸ್ಯೆ ಎದುರಾಗಿದೆ ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್(Jairam Ramesh) ಟ್ವೀಟಿಸಿದ್ದಾರೆ.

ತವಾಂಗ್‌ನಲ್ಲಿ ಎಲ್‌ಎಸಿಯ ಕೆಲವು ಪ್ರದೇಶಗಳಲ್ಲಿ ಗಡಿ ಕುರಿತು ವಿಭಿನ್ನ ದೃಷ್ಟಿಕೋನಗಳಿವೆ ಮತ್ತು ಈ ಪ್ರದೇಶಗಳಲ್ಲಿ ತಮ್ಮದೆಂದು ಗ್ರಹಿಸಿರುವ ಗಡಿರೇಖೆಗಳವರೆಗೆ ಉಭಯ ದೇಶಗಳ ಪಡೆಗಳು ಗಸ್ತು ನಡೆಸುತ್ತಿವೆ. ಈ ಪ್ರವೃತ್ತಿ 2006ರಿಂದಲೂ ಚಾಲ್ತಿಯಲ್ಲಿದೆ ಎಂದು ರಕ್ಷಣಾ ಸಚಿವಾಲಯವು ಸೋಮವಾರ ಹೇಳಿಕೆಯಲ್ಲಿ ತಿಳಿಸಿತ್ತು.

ವಾಯುಪಡೆ ಗಸ್ತು ಆರಂಭ : ಚೀನಿಯರ ಹೆಚ್ಚಿನ ವೈಮಾನಿಕ ಚಟುವಟಿಕೆಗಳನ್ನು ಪತ್ತೆ ಹಚ್ಚಿದ ಬಳಿಕ ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದಲ್ಲಿ ತನ್ನ ಯುದ್ಧವಿಮಾನಗಳ ಗಸ್ತು ಆರಂಭಿಸಿದೆ ಎಂದು ಬಲ್ಲ ಮೂಲಗಳು ಮಂಗಳವಾರ ತಿಳಿಸಿವೆ. ಚೀನಾದ ಪ್ರಯತ್ನವನ್ನು ವಿಫಲಗೊಳಿಸಲು ಇತ್ತೀಚಿನ ವಾರಗಳಲ್ಲಿ 2-3 ಬಾರಿ ಯುದ್ಧವಿಮಾನಗಳನ್ನು ನಿಯೋಜಿಸಲಾಗಿತ್ತು ಎಂದು ಅವು ಬಹಿರಂಗಗೊಳಿಸಿವೆ.

ಅರುಣಾಚಲ ಪ್ರದೇಶದಲ್ಲಿ ಎಲ್‌ಎಸಿ ಸಮೀಪ ಚೀನಿ ಯುದ್ಧವಿಮಾನಗಳ ಹಾರಾಟವನ್ನು ಪತ್ತೆ ಹಚ್ಚಿದ ಬಳಿಕ ಭಾರತೀಯ ವಾಯುಪಡೆಯು ವಾಯುಗಸ್ತು ಆರಂಭಿಸಿದೆ. ಡಿ.9ರಂದು ತವಾಂಗ್‌ನಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆಯ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿದವು.

 ಪ್ರತಿಪಕ್ಷಗಳ ಸಭಾತ್ಯಾಗ ಸಂಸತ್‌ನಲ್ಲಿ ಸಿಂಗ್ ಹೇಳಿಕೆಯಿಂದ ತೃಪ್ತಗೊಳ್ಳದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆಯ ದ್ಯೋತಕವಾಗಿ ಸಭಾತ್ಯಾಗ ನಡೆಸಿದರು. ಕೇವಲ ಹೇಳಿಕೆಯು ತಮಗೆ ತೃಪ್ತಿ ನೀಡಿಲ್ಲ ಮತ್ತು ಪ್ರಮುಖವಾಗಿರುವ ಗಡಿ ಸಮಸ್ಯೆಯ ಬಗ್ಗೆ ಚರ್ಚೆಯನ್ನು ಬಯಸಿದ್ದೇವೆ ಎಂದು ಅವು ಹೇಳಿದವು.

ಭಾರತ-ಚೀನಾ ಗಡಿ ಸಮಸ್ಯೆಯ ಬಗ್ಗೆ ಎಳೆಎಳೆಯಾಗಿ ಚರ್ಚಿಸಲು ಸಂಸತ್ತಿನ ಇತರ ಎಲ್ಲ ಕಲಾಪಗಳನ್ನು ಪಕ್ಕಕ್ಕಿರಿಸಬೇಕು ಎಂದು ಹಲವು ಪ್ರತಿಪಕ್ಷಗಳು ಆಗ್ರಹಿಸಿದವು. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ ಗೋಹಿಲ್ ಚರ್ಚೆಯಿಂದ ನುಣುಚಿಕೊಳ್ಳುವ ಸರಕಾರದ ನಿಲುವು ಸರಿಯಲ್ಲ ಎಂದು ಹೇಳಿದರೆ,ಆರ್‌ಜೆಡಿಯ ಮನೋಜ ಝಾ ಅವರು,ಸರಕಾರದ ರಾಜತಾಂತ್ರಿಕತೆಯು ‘ನಿರಾಕರಣೆಯ ಮನಃಸ್ಥಿತಿಯಲ್ಲಿದೆ’ ಎಂದು ಕುಟುಕಿದರು.

ಸರಕಾರದ ವಿರುದ್ಧ ಕಾಂಗ್ರೆಸ್ ದಾಳಿ: ಕಾಂಗ್ರೆಸ್ ಪಕ್ಷವು ಸರಕಾರದ ವಿರುದ್ಧ ತೀವ್ರ ದಾಳಿಯನ್ನು ಆರಂಭಿಸಿದೆ. ‘ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ ನಾವು ದೇಶದೊಂದಿಗೆ ಒಂದಾಗಿ ನಿಂತಿದ್ದೇವೆ ಮತ್ತು ಅದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಆದರೆ ಚೀನಿ ಅತಿಕ್ರಮಣಗಳು ಮತ್ತು 2020 ಎಪ್ರಿಲ್‌ನಿಂದ ಎಲ್‌ಎಸಿ ಸಮೀಪ ಎಲ್ಲ ಕೇಂದ್ರಗಳಲ್ಲಿ ನಿರ್ಮಾಣಗಳ ಕುರಿತು ಮೋದಿ ಸರಕಾರವು ಪ್ರಾಮಾಣಿಕತೆಯನ್ನು ಪ್ರದರ್ಶಿಸಬೇಕು ’ಎಂದು ಕಾಂಗ್ರೆಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

 ತವಾಂಗ್ ಗಡಿಯಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಂದ ಹೇಳಿಕೆಗಾಗಿ ಕಾಂಗ್ರೆಸ್ ಮಂಗಳವಾರ ಆಗ್ರಹಿಸಿತು.

ಚೀನಾದೊಂದಿಗಿನ ಗಡಿ ವಿಷಯದ ಚರ್ಚೆಗಾಗಿ ಕಾಂಗ್ರೆಸ್ ಸದಸ್ಯರು ಸಂಸತ್ತಿನ ಉಭಯ ಸದನಗಳಲ್ಲಿ ನಿಲುವಳಿ ನೋಟಿಸ್‌ಗಳನ್ನು ನೀಡಿದ್ದರು.

share
Next Story
X