Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಟ್ಯಾನ್ ಸ್ವಾಮಿಯ ಕಂಪ್ಯೂಟರ್‌ನಲ್ಲಿ...

ಸ್ಟ್ಯಾನ್ ಸ್ವಾಮಿಯ ಕಂಪ್ಯೂಟರ್‌ನಲ್ಲಿ ಹ್ಯಾಕರ್‌ಗಳಿಂದ ಫೈಲ್ ಗಳ ಅಳವಡಿಕೆ: ಅಮೆರಿಕ ವಿಧಿ ವಿಜ್ಞಾನ ಸಂಸ್ಥೆ ವರದಿ

ಭೀಮಾ ಕೋರೆಗಾಂವ್ ಪ್ರಕರಣ

13 Dec 2022 10:16 PM IST
share
ಸ್ಟ್ಯಾನ್ ಸ್ವಾಮಿಯ ಕಂಪ್ಯೂಟರ್‌ನಲ್ಲಿ ಹ್ಯಾಕರ್‌ಗಳಿಂದ ಫೈಲ್ ಗಳ ಅಳವಡಿಕೆ: ಅಮೆರಿಕ ವಿಧಿ ವಿಜ್ಞಾನ ಸಂಸ್ಥೆ ವರದಿ
ಭೀಮಾ ಕೋರೆಗಾಂವ್ ಪ್ರಕರಣ

ಹೊಸದಿಲ್ಲಿ, ಡಿ. 13: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿಯ ಕಂಪ್ಯೂಟರ್‌ನಲ್ಲಿ ಅವರ ಅರಿವಿಗೆ ಬಾರದಂತೆ ದೋಷಾರೋಪಣೆಗೆ ಗುರಿಪಡಿಸುವಂತಹ ಫೈಲ್‌ಗಳನ್ನು ಹ್ಯಾಕರ್‌ಗಳು ಅಳವಡಿಸಿದ್ದರು ಎಂದು ಅಮೆರಿಕ ಮೂಲದ ಡಿಜಿಟಲ್ ವಿಧಿವಿಜ್ಞಾನ ಸಂಸ್ಥೆಯ ವರದಿ ಹೇಳಿದೆ ಎಂದು ‘ದಿ ವಾಶಿಂಗ್ಟನ್ ಪೋಸ್ಟ್’ ಮಂಗಳವಾರ ವರದಿ ಮಾಡಿದೆ.

ಮೆಸ್ಸಾಚುಸೆಟ್ಸ್ ಮೂಲದ ಡಿಜಿಟಲ್ ವಿಧಿ ವಿಜ್ಞಾನ ಸಂಸ್ಥೆ ‘ಆರ್ಸೆನಲ್ ಕನ್ಸಲ್ಟಿಂಗ್’ ಈ ವರದಿಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದೇ ಸಂಸ್ಥೆ ಇತರ ಆರೋಪಿಗಳಾದ ಸುರೇಂದ್ರ ಗಾಡ್ಲಿಂಗ್ ಹಾಗೂ ರೋನಾ ವಿಲ್ಸನ್ ಕುರಿತು ಕೂಡ ಇದೇ ರೀತಿಯ ಮಾಹಿತಿಯನ್ನು ಬಹಿರಂಗಗೊಳಿಸಿತ್ತು. 

ಪೊಲೀಸರು 2019 ಜೂನ್‌ನಲ್ಲಿ ಕಂಪ್ಯೂಟರ್ ಅನ್ನು ವಶಪಡಿಸಿಕೊಳ್ಳುವವರೆಗೆ ಸುಮಾರು 5 ವರ್ಷಗಳ ಕಾಲ ಸ್ವಾಮಿ ಅವರು ವ್ಯಾಪಕ ಮಾಲ್‌ವೇರ್ ಅಭಿಯಾನಕ್ಕೆ ಗುರಿಯಾಗಿದ್ದರು ಎಂದು ‘ಆರ್ಸೆನಲ್ ಕನ್ಸಲ್ಟಿಂಗ್’ ತಿಳಿಸಿದೆ. ಈ ಅವಧಿಯಲ್ಲಿ ಹ್ಯಾಕರ್‌ಗಳು ಸ್ವಾಮಿ ಅವರ ಕಂಪ್ಯೂಟರ್ ಮೇಲೆ ಸಂಪೂರ್ಣವಾಗಿ ನಿಯಂತ್ರಣ ಪಡೆದುಕೊಂಡಿದ್ದರು. ಅವರ ಅರಿವಿಗೆ ಬರದಂತೆ ಮರೆ ಮಾಡಲಾದ ಫೋಲ್ಡರ್‌ಗಳಲ್ಲಿ 12ಕ್ಕೂ ಅಧಿಕ ಫೈಲ್‌ಗಳನ್ನು ಅಳವಡಿಸಿದ್ದರು ಎಂದು ‘ಆರ್ಸೆನಲ್ ಕನ್ಸಲ್ಟಿಂಗ್’ ಹೇಳಿರುವುದಾಗಿ ‘ದಿ ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ. 

ಸ್ವಾಮಿ ಅವರ ಕಂಪ್ಯೂಟರ್‌ನಿಂದ ಹ್ಯಾಕರ್‌ಗಳ ಸರ್ವರ್‌ಗೆ 24,000ಕ್ಕೂ ಅಧಿಕ ಫೈಲ್‌ಗಳು ಹಾಗೂ ಫೋಲ್ಡರ್‌ಗಳನ್ನು ಪ್ರತಿ ಮಾಡಲು ವಿಂಡೋಗೆ ಉಚಿತ ಫೈಲ್ ವರ್ಗಾವಣೆ ಟೂಲ್ ವಿನ್‌ಎಸ್‌ಸಿಪಿಯನ್ನು ಹ್ಯಾಕರ್‌ಗಳು ಬಳಸಿದ್ದರು. ಸ್ವಾಮಿ ಅವರ ಕಂಪ್ಯೂಟರ್‌ನಲ್ಲಿ ಹ್ಯಾಕರ್‌ಗಳು ಮೊದಲ ಬಾರಿ 2017 ಜುಲೈಯಲ್ಲಿ ದಾಖಲೆಗಳನ್ನು ಅಳವಡಿಸಿದ್ದರು. ಇದನ್ನು ನಿರಂತರ ಎರಡು ವರ್ಷಗಳ ಕಾಲ ಮಾಡಿದ್ದರು ಎಂದು ‘ಆರ್ಸೆನಲ್ ಕನ್ಸಲ್ಟಿಂಗ್’ ತಿಳಿಸಿದೆ. 

2014 ಅಕ್ಟೋಬರ್‌ನಲ್ಲಿ ಸ್ವಾಮಿ ಅವರ ಕಂಪ್ಯೂಟರ್ ಮಾಲ್‌ವೇರ್ ‘ನೆಟ್‌ವೈರ್’ನ ದಾಳಿಗೆ ಒಳಗಾಗಿತ್ತು. ಈ ನೆಟ್‌ವೈರ್ ಮೂಲಕ ಗುರಿ ಮಾಡಲಾದ ಕಂಪ್ಯೂಟರ್‌ನಿಂದ ದಾಖಲೆಗಳನ್ನು ಡೌನ್‌ಲೋಡ್ ಮಾಡಲು ಹಾಗೂ ಅಪ್‌ಲೋಡ್ ಮಾಡಲು ಸಾಧ್ಯ. ಅಲ್ಲದೆ, ಈಮೇಲ್ ಹಾಗೂ ಅದರ ಪಾಸ್‌ವರ್ಡ್‌ಗಳನ್ನು ಪಡೆಯಲು ಸಾಧ್ಯ.
ಸ್ಟ್ಯಾನ್ ಸ್ವಾಮಿ ಅವರು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿತರಾದ ಸುಮಾರು 9 ತಿಂಗಳ ಬಳಿಕ ಕಳೆದ ವರ್ಷ ಜು.5ರಂದು ಮುಂಬೈ ಆಸ್ಪತ್ರೆಯ ಕಸ್ಟಡಿಯಲ್ಲಿ ಮೃತಪಟ್ಟರು. 84 ವರ್ಷದ ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು. ನವಿ ಮುಂಬೈಯ ತಲೋಜ ಕಾರಾಗೃಹದಲ್ಲಿ ಇರುವಾಗ ಅವರಿಗೆ ಕೊರೋನ ಸೋಂಕು ಕೂಡ ತಗಲಿತ್ತು.

share
Next Story
X