Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಬಸ್ ಪ್ರಯಾಣಿಕನಿಗೆ...

ಮೂಡುಬಿದಿರೆ: ಬಸ್ ಪ್ರಯಾಣಿಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

►ಮರಕ್ಕೆ ಕಟ್ಟಿ ಹಾಕಿ ಥಳಿಸಿದ ದುಷ್ಕರ್ಮಿಗಳು ►ಪ್ರಕರಣ ದಾಖಲಿಸಲು ಪೊಲೀಸರ ನಿರಾಕರಣೆ: ಆರೋಪ

15 Dec 2022 12:22 PM IST
share
ಮೂಡುಬಿದಿರೆ: ಬಸ್ ಪ್ರಯಾಣಿಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ
►ಮರಕ್ಕೆ ಕಟ್ಟಿ ಹಾಕಿ ಥಳಿಸಿದ ದುಷ್ಕರ್ಮಿಗಳು ►ಪ್ರಕರಣ ದಾಖಲಿಸಲು ಪೊಲೀಸರ ನಿರಾಕರಣೆ: ಆರೋಪ

ಬಂಟ್ವಾಳ, ಡಿ.15: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೂಡುಬಿದಿರೆ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ. 

ಮೂಲತಃ ಮುಲ್ಲರಪಟ್ನ ನಿವಾಸಿ, ಪ್ರಸಕ್ತ ಬಿ.ಸಿ.ರೋಡ್ ನಲ್ಲಿ ವಾಸ್ತವ್ಯವಿರುವ ಇಸ್ಹಾಕ್ (45) ಹಲ್ಲೆಗೊಳಗಾದವರು.

ಮೇಸ್ತ್ರಿ ಕೆಲಸ ಮಾಡುತ್ತಿರುವ ಇಸ್ಹಾಕ್ ಬುಧವಾರ ಬೆಳಗ್ಗೆ ಬಿ.ಸಿ.ರೋಡ್ ನಿಂದ ಮೂಡುಬಿದಿರೆಗೆ ತೆರಳಲೆಂದು ‘ಮಹಾ ಗಣೇಶ’ ಎಂಬ ಖಾಸಗಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲಿ ವಿಪರೀತ ಪ್ರಯಾಣಿಕರ ದಟ್ಟಣೆಯಿದ್ದುರಿಂದ ಇಸ್ಹಾಕ್ ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಮಹಿಳೆಯೊಬ್ಬರು ಬ್ಯಾಗ್ ಹಿಡಿದುಕೊಳ್ಳುವಂತೆ ಇಸ್ಹಾಕ್  ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆ ತಾನು ಇಳಿಯುವ ಜಾಗ ತಲುಪಿದಾಗ ಇಸ್ಹಾಕ್ ಅವರಿಂದ ಬ್ಯಾಗ್ ಪಡೆದು ಬಸ್ಸಿನಿಂದ ಇಳಿದು ಹೋದರೆನ್ನಲಾಗಿದೆ. ಬಳಿಕ ಕಂಡೆಕ್ಟರ್ ಇಸ್ಹಾಕ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿದ ಅವರಿಗೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಮೊಬೈಲ್ ಕರೆ ಮಾಡಿ ಕೆಲವು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಕೆಲವು ಯುವಕರನ್ನು ಅಲ್ಲಿಗೆ ಕರೆಸಿ ಇಸ್ಹಾಕ್ ರನ್ನು ಅವರಿಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ.

ದುಷ್ಕರ್ಮಿಗಳ ಗುಂಪು ಇಸ್ಹಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯಿಂದ ಇಸ್ಹಾಕ್ ಅವರ ಬೆನ್ನು, ಕೈ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ಗುಂಪು ಇಸ್ಹಾಕ್ ಅವರನ್ನು ಗುಂಪು ಪೊಲೀಸರಿಗೆ ಹಸ್ತಾಂತರಿಸಿದೆ ಎನ್ನಲಾಗಿದೆ.

ಪೊಲೀಸರು ಇಸ್ಹಾಕ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಪೊಲೀಸರು ಬಂಟ್ವಾಳ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಇಸ್ಹಾಕ್ ಅವರ ಕುಟುಂಬದವರು ಠಾಣೆಗೆ ಬಂದಿದ್ದು, ಸಂಜೆ 5:30ರವರೆಗೆ ಇಸ್ಹಾಕ್ ಅವರನ್ನು ಠಾಣೆಯಲ್ಲೇ ಕೂರಿಸಲಾಗಿತ್ತು. ಬಳಿಕ ಇಸ್ಹಾಕ್ ಅವರಿಂದ ಹೇಳಿಕೆ ಪಡೆದು ಕುಟುಂಬದೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಕುಟುಂಬ ಮನವಿ ಮಾಡಿದಾಗ, ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಬಂಟ್ವಾಳ ಠಾಣೆ ಪೊಲೀಸರು ಹೇಳಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇದೀಗ ಇಸ್ಹಾಕ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

share
Next Story
X