ಸಾಗರ: ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ, ಹಲವು ವಿದ್ಯಾರ್ಥಿಗಳಿಗೆ ಗಾಯ
![ಸಾಗರ: ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ, ಹಲವು ವಿದ್ಯಾರ್ಥಿಗಳಿಗೆ ಗಾಯ ಸಾಗರ: ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ, ಹಲವು ವಿದ್ಯಾರ್ಥಿಗಳಿಗೆ ಗಾಯ](https://www.varthabharati.in/sites/default/files/images/articles/2022/12/15/360207-1671087869.jpg)
ಸಾಗರ, ಡಿ.15: ಶಾಲಾ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಾಲೂಕಿನ ತುಮರಿಯ ಒಕ್ಕೋಡಿ ಬಳಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಧರ್ಮಪುರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಗರಕ್ಕೆ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು, ಕೊಳ್ಳೂರಿನಿಂದ ಸಿಗಂದೂರು ಕಡೆ ಹೋಗುತ್ತಿದ್ದ ವೇಳೆ ತುಮರಿಯ ಒಕ್ಕೋಡಿ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಪಪ್ಪಿ ಬಸ್ ಪಲ್ಟಿಯಾಗಿದೆನ್ನಲಾಗಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ 63 ವಿದ್ಯಾರ್ಥಿಗಳ ಪೈಕಿ 23 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.
![](https://www.varthabharati.in/sites/default/files/images/galllery/2022/12/15/WhatsApp Image 2022-12-15 at 12.34.05 PM.jpeg)
Next Story