Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.17ರಂದು ಕೋಡಿ ಬ್ಯಾರೀಸ್ ಶಿಕ್ಷಣ...

ಡಿ.17ರಂದು ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘ವಿಕಾಸ-22’

15 Dec 2022 2:42 PM IST
share
ಡಿ.17ರಂದು ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘ವಿಕಾಸ-22’

ಕುಂದಾಪುರ, ಡಿ.15: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 116ನೇ ವರ್ಷದ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ ಸಮಾರಂಭ ‘ವಿಕಾಸ -22’ನ್ನು ಡಿ.17ರಂದು ಬೆಳಗ್ಗೆ 10ಗಂಟೆಗೆ ಕುಂದಾಪುರ ಕೋಡಿ ಬೀಚ್ ರಸ್ತೆಯಲ್ಲಿರುವ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.

ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರಾಧ್ಯಾಪಕ ಹಯವದನ ಉಪಾಧ್ಯಾಯ ಈ ಕುರಿತು ಮಾಹಿತಿ ನೀಡಿದರು. 1906ರಲ್ಲಿ ಶಿಕ್ಷಣದ ಮೊಳಕೆಯೆಂಬತೆ ಕೋಡಿಯಲ್ಲಿ ಸಣ್ಣ ಶಾಲೆಯೊಂದು ಹುಲ್ಲಿನ ಹೊದಿಕೆಯಿಂದ ಕೂಡಿದ ಚಪ್ಪರದಡಿಯಲ್ಲಿ ಅಕ್ಷರ ಪ್ರಪಂಚವನ್ನು ಪರಿಚಯಿಸಿ ಇದೀಗ ಬ್ಯಾರೀಸ್ ಸಮೂಹ ಶಿಕ್ಷಣಸಂಸ್ಥೆಗಳಾಗಿ ಹೆಮ್ಮರವಾಗಿ ಬೆಳೆದಿದೆ. ಈ ಸಂಸ್ಥೆ ಸಮಾಜದಲ್ಲಿ ಸೌಹಾರ್ದತೆ ಮೆರೆಯುತ್ತ ಅತ್ಯುತ್ತಮ ಸಾಧನೆಗಳನ್ನು ಮಾಡುತ್ತಿದೆ ಎಂದರು.

ದಿವಂಗತ ಹಾಜಿ ಮಾಸ್ಟರ್ ಮಹಮೂದ್ ಅಧ್ಯಕ್ಷತೆಯಲ್ಲಿ ವಿವಿಧ ಅಂಗ ಸಂಸ್ಥೆಗಳು ಜಾತಿ, ಧರ್ಮದ ಎಲ್ಲೆ ಮೀರಿ ಊರ ಪರವೂರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿಯಾಗಿದ್ದು, ಇದೀಗ ಈ ಸಂಸ್ಥೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಪ್ರಸ್ತುತ ಅಧ್ಯಕ್ಷರಾಗಿ ಹಾಜಿ ಕೆ.ಎಂ.ಅಬ್ದುಲ್ ರಹಿಮಾನ್ ನೇತೃತ್ವದಲ್ಲಿ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರ ಮಾರ್ದರ್ಶನದಲ್ಲಿ ಸಂಸ್ಥೆ ಶೈಕ್ಷಣಿಕವಾಗಿ, ಕ್ರೀಡಾ ಹಾಗೂ ಸಮಾಜಿಕ ಕಳಕಳಿ ವಿಚಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮನ್ ಬ್ಯಾರಿ ಮಾತನಾಡಿ, ವಿಕಾಸ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಗೌರವ ಅತಿಥಿಗಳಾಗಿರುವರು.

ಹಾಜಿ ಕೆ.ಮೊಯ್ದಿನ್ ಬ್ಯಾರಿ ಎಜ್ಯುಕೇಶನ್ ಟ್ರಸ್ಟ್ ಮುಖ್ಯಸ್ಥ ಸಯ್ಯದ್ ಮಹಮ್ಮದ್ ಬ್ಯಾರಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಗಣಕ ಯಂತ್ರದಲ್ಲಿ ಭಾರತೀಯ ಭಾಷೆಗಳ ತಂತ್ರಾಂಶವನ್ನು ಪರಿಚಯಿಸಿದ ನಿವೃತ್ತ ಪ್ರಾಧ್ಯಾಪಕ ವಿಾನಿ ನಾಡೋಜ ಕೆ.ಪಿ ರಾವ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಪಟು ಪೃಥ್ವಿರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾರೀಸ್ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಡಿ.ಎಡ್ ವಿಭಾಗದ ಪ್ರಾಂಶುಪಾಲೆ ಡಾ.ಫಿರ್ದೋಸ್, ಬಿ.ಎಡ್ ವಿಭಾಗದ ಪ್ರಾಂಶುಪಾಲ ಸಿದ್ದಪ್ಪ, ಸೀ ಸೈಡ್ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

share
Next Story
X