Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತ್ಯವೆಂಬುದು ಜನರ ಬದುಕಿನ...

ಸಾಹಿತ್ಯವೆಂಬುದು ಜನರ ಬದುಕಿನ ಪ್ರತಿಬಿಂಬ: ಡಾ.ಹಂಪಾ ನಾಗರಾಜಯ್ಯ

ತುಮಕೂರು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

15 Dec 2022 4:19 PM IST
share
ಸಾಹಿತ್ಯವೆಂಬುದು ಜನರ ಬದುಕಿನ ಪ್ರತಿಬಿಂಬ: ಡಾ.ಹಂಪಾ ನಾಗರಾಜಯ್ಯ
ತುಮಕೂರು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ತುಮಕೂರು.ಡಿ.15: ಸಾಹಿತ್ಯವೆಂಬುದು ಜನರ ಬದುಕಿನ ಪ್ರತಿಬಿಂಬವಾಗಬೇಕು.ಮನಸ್ಸುಗಳ ನಡುವಿನ ಕಂದರ ಹೆಚ್ಚಿಸದೆ, ಮನಸ್ಸುಗಳನ್ನು ಕೂಡಿಸುವ ಸೇತುವೆಯಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಹಂಪಾ ನಾಗರಾಜಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ,ಪಂಪ ಮಹಾಕವಿಯ ಆಶಯದಂತೆ ತ್ಯಾಗ, ಭೋಗಗಳ ಸಮನ್ವಯವೇ ಜೀವನ ಎಂಬುದನ್ನು ಸಾಹಿತ್ಯ ತೋರಿಸಿಕೊಡಬೇಕಿದೆ ಎಂದರು.

ಸಾಹಿತ್ಯ ಸಮ್ಮೇಳನವೆಂಬುದು ಕನ್ನಡಿಗರಿಗೆ ಒಂದು ರೀತಿಯ ಹಬ್ಬವಿದ್ದಂತೆ.ಕನ್ನಡದ ಮನಸ್ಸುಗಳನ್ನು ಸಮ್ಮಿಲನಗೊಳಿಸುವ ಈ ಹಬ್ಬ ಜಾತಿಗಳ ಇರುವಿಕೆಯ ನಡುವೆಯೂ ಜಾತ್ಯಾತೀತೆಯನ್ನು,ಮತಗಳ ನಡುವೆಯೂ ಮತಾಂಧತೆಯನ್ನು ಮೆಟ್ಟಿ ನಿಂತು,ದೇಶಹ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಂಡು ಹೋಗುವಂತಹ ವಾತಾವರಣವನ್ನು ಇಂತಹ ಸಮ್ಮೇಳನಗಳ ಉಂಟು ಮಾಡಬೇಕೆಂದು ಡಾ.ಹಂಪಾ ನಾಗರಾಜಯ್ಯ ಪ್ರತಿಪಾದಿಸಿದರು.

ಕುವೆಂಪು ಅವರ ಬರೆದಿರುವ ನಾಡಗೀತೆ ಅತ್ಯಂತ ಸುಂದರ ಮತ್ತು ಮನಮೋಹಕ. ಆದರೆ ಹಲವು ಸಾಲುಗಳು ಇರುವುದರಿಂದ ಹಾಡಲು ತುಂಭಾ ಸಮಯ ಬೇಕಾಗುತ್ತದೆ. ಹಾಗಾಗಿ ಮೊದಲ ಪಲ್ಲವಿಯ ಜೊತೆಗೆ,ಸರ್ವಜನಾಂಗ ಶಾಂತಿಯ ತೋಟ ಎಂಬ ಕೊನೆಯ ಚರಣವನ್ನಷ್ಟೇ ಹಾಡಿದರೆ ಹೆಚ್ಚು ಅರ್ಥ ಗರ್ಭೀತ ಹಾಗೂ ಸಮಯವೂ ಉಳಿತಾಯವಾಗುತ್ತದೆ.ನಾನು ಹತ್ತಾರು ದೇಶಗಳ ಸಾಹಿತ್ಯ ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದೇನೆ.ಅಲ್ಲಿ ತಮ್ಮ ನಾಡಗೀತೆ ಯನ್ನು ಅತಿ ಕಡಿಮೆ ಸಮಯದಲ್ಲಿ ಮುಗಿಸುತ್ತಾರೆ.ಹೇಗೆ ನಮ್ಮ ರಾಷ್ಟ್ರಗೀತೆ 52 ಸೆಕೆಂಡ್‍ಗಳಲ್ಲಿ ಮುಗಿಯುತ್ತದೆಯೋ ಅದೇ ರೀತಿ ನಾಡಗೀತೆಯನ್ನು 52 ಸೆಕೆಂಡ್‍ಗಳಿಗೆ ಸಿಮೀತಗೊಳಿಸಿದರೆ ಹೆಚ್ಚು ಅನುಕೂಲ ಎಂಬುದು ನನ್ನ ಅಭಿಪ್ರಾಯ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಲಿ ಎಂದು ಹಂಪಾ ನಾಗರಾಜಯ್ಯ ನುಡಿದರು.

ಸಮ್ಮೇಳನ ಅಧ್ಯಕ್ಷರಾದ ಪ್ರೊ.ಎಂ.ವಿ.ನಾಗರಾಜರಾವ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿ ಮಾತನಾಡಿದ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ದ್ವಜ ನೀಡುವ ಮೂಲಕ ಕನ್ನಡ ಕಟ್ಟುವ ಜವಾಬ್ದಾರಿಯನ್ನು ವಯಸ್ಸಿನಲ್ಲಿ ಮತ್ತು ವಿದ್ವತ್ ನಲ್ಲಿ ನನಗಿಂತ ಹಿರಿಯರಾದ ಪ್ರೊ.ಎಂ.ವಿ.ನಾಗರಾಜರಾವ್ ಅವರಿಗೆ ಹಸ್ತಾಂತರಿಸಿದ್ದೇನೆ.ಹಿರಿಯರಿಗೆ ಮೊದಲು ಪ್ರಶಸ್ತಿ,ಗೌರವ ಮತ್ತು ಸ್ಥಾನ ಮಾನಗಳು ಸಿಗಬೇಕು.ಸಾಹಿತ್ಯ ಕ್ಷೇತ್ರದಲ್ಲಿ ಸಾಂಸ್ಕøತಿಕ ರಾಜಕಾರಣದಿಂದಾಗಿ ಇಂತಹ ವೈರುದ್ಯಗಳು ನಡೆದಿವೆ. ಅದಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕು.ತಮ್ಮ 300ಕ್ಕೂ ಹೆಚ್ಚು ಕೃತಿಗಳ ಮೂಲಕ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆಯನ್ನು ಎಂ.ವಿ.ಎನ್. ನೀಡಿದ್ದಾರೆ.1915ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಭುವಾಗಿದ್ದುಕೊಂಡು, ಪ್ರಜಾಪ್ರಭುತ್ವದ ಮಾದರಿಯಲ್ಲಿ ಸಾಹಿತ್ಯ ಪರಿಷತ್, ಮೀಸಲಾತಿಯನ್ನು ತಂದು ಅಧಿಕಾರ ವೀಕೇಂದ್ರೀಕರಣಕ್ಕೆ ನಾಂದಿ ಹಾಡಿದರು. ಅವರ ಆಶಯಕ್ಕೆ ದಕ್ಕೆ ಬರದ ರೀತಿಯಲ್ಲಿ ನಾವು ನಡೆದುಕೊಳ್ಳುವ ಮೂಲಕ ಸರ್ವಜನಾಂಗದ ಶಾಂತಿ ತೋಟ ಎಂಬ ಕವಿವಾಣಿಯನ್ನು ನಿಜ ಮಾಡೋಣ ಎಂದು ಸಲಹೆ  ನೀಡಿದರು.

ತುಮಕೂರು ಜಿಲ್ಲಾ 14 ನೇ ಸಾಹಿತ್ಯ ಸಮ್ಮೇಳನದ ನೆನಪಿಗಾಗಿ ಹೊರತಂದ ಕಲ್ಪನುಡಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್,ಮಾತೃಭಾಷೆಗೆ ಎಷ್ಟು ಶಕ್ತಿ ಇದೆ ಎಂಬುದನ್ನು ಅನ್ಯ ಭಾಷಿಕರ ನಡುವೆ ಇದ್ದಾಗ ನಮಗೆ ಅರ್ಥವಾಗುತ್ತದೆ.ದೇಹ ಸದೃಢವಾಗಲು ಸಮತೋಲನ ಆಹಾರ ಅಗತ್ಯ. ಹಾಗೆಯೇ ಮನಸ್ಸಿನ ಆರೋಗ್ಯಕ್ಕೆ ಕಲೆ,ಸಂಗೀತ, ಸಾಹಿತ್ಯ, ನಾಟಕ ಎಲ್ಲವೂ ಬೇಕು. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಉತ್ಕøಷ್ಟ ಸಾಹಿತ್ಯ, ಸಂಗೀತ,ನಾಟಕ ಎಲ್ಲವೂ ಇದೆ.ಇದನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕೆಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ ಮಾತನಾಡಿ, ಉದಯ ವಾಗಲಿ ನಮ್ಮ ಚಲುವ ಕನ್ನಡ ನಾಡು ಎಂಬ ಹಿರಿಯರ ನುಡಿಯನ್ನು ಇಂದಿನ ಸಮ್ಮೇಳನ ಸಾರ್ಥಕಗೊಳಿಸಿದೆ. ಕನ್ನಡ ಮಾತೃಭಾಷೆಯ ಜೊತೆಗೆ,ಚೈತನ್ಯ ನೀಡುವ ಭಾಷೆಯೂ ಆಗಿದೆ.ಇಂತಹ ಒಳ್ಳೆಯ ಸಾಹಿತ್ಯ ಜಾತ್ರೆಗೆ ಜನಪ್ರತಿನಿಧಿಗಳು ಗೈರು ಹಾಜರಾಗಿರುವುದು ಬೇಸರ ತರಿಸಿದೆ ಎಂದರು.

ಜಿಲ್ಲಾ 14ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೊ.ಎಂ.ವಿ.ನಾಗರಾಜರಾವ್ ಮಾತನಾಡಿ,ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ದೊರೆಯುವಂತೆ ಸರಕಾರಗಳು ಕ್ರಮ ಕೈಗೊಳ್ಳಬೇಕು.ಜಾಗತೀಕರಣ, ಉದಾರೀಕರಣದ ಪ್ರಭಾವ ಕನ್ನಡಿಗರ ಬದುಕಿನ ಮೇಲೆ ಗಾಡವಾಗಿದೆ. ಈ ಸಮಯದಲ್ಲಿ ನಾವು ದೇಶಿ ಭಾಷೆಯ ಅಸ್ಥಿತ್ವ ತಿಳಿಯದಿದ್ದರೆ ಡೋಲಾಯಮಾನ ಸ್ಥಿತಿಗೆ ತಲುಪಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು,ಶಿಕ್ಷರ ನೇಮಕ ಸಂಖ್ಯಾವಾರು ಎನ್ನುವುದಕ್ಕಿಂತ ವಿಷಯವಾರು ಇದ್ದರೆ ಹೆಚ್ಚು ಅನುಕೂಲವಾಗುತ್ತದೆ.ಹೊಸ ಶಿಕ್ಷಣ ನೀತಿಯಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.ಆ ಮೂಲಕ ಯುವಜನತೆಯನ್ನು ಸ್ವಾವಲಂಬಿಗಳಾಗಿಸುವ ಪ್ರಕ್ರಿಯೆ ಒಳ್ಳೆಯದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ.ಜೋತಿಗಣೇಶ್,ಸಾಹಿತ್ಯ ಸಮ್ಮೇಳನ ಜಿಲ್ಲೆಯ ಅಭಿವೃದ್ದಿಗೆ ದಾರಿದೀಪವಾಗಲಿ ಎಂದರು.ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಆಶಯ ನುಡಿಗಳನ್ನಾಡಿದರು.

ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ಸಿಇಓ ಡಾ.ಕೆ.ವಿದ್ಯಾಕುಮಾರಿ,ಎಡಿಸಿ ಚನ್ನಬಸಪ್ಪ,ಸ್ಪೂರ್ತಿ ಡೆವಲಪರ್ಸ್‍ನ ಎಸ್.ಪಿ.ಚಿದಾ ನಂದ್,ಟೂಡಾ ಅಧ್ಯಕ್ಷ ಹೆಚ್.ಜಿ.ಚಂದ್ರಶೇಖರ್, ಕಸಾಪ ಪದಾಧಿಕಾರಿಗಳಾದ ಡಾ.ಡಿ.ಎನ್.ಯೋಗೀಶ್ವರಪ್ಪ, ಕೆ.ಎಸ್. ಉಮಾಮಹೇಶ್, ಡಾ.ಕಂಟಲಗೆರೆ ಸಣ್ಣ ಹೊನ್ನಯ್ಯ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್‍ಹಾಲ್ ವೃತ್ತದಿಂದ ಗಾಜಿನಮನೆಯವರೆಗೂ ಸಮ್ಮೇಳಾಧ್ಯಕ್ಷರಾದ ಪ್ರೊ.ಎಂ.ವಿ. ನಾಗರಾಜರಾವ್ ಅವರನ್ನು ವಿವಿಧ ಜನಪದ ಕಲಾತಂಡಗಳ ಪ್ರದರ್ಶನದ ಮೂಲಕ ಮೆರವಣಿಗೆ ನಡೆಸಲಾಯಿತು.

share
Next Story
X