Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಚ್ಡಿ ವಿದ್ಯಾರ್ಥಿಯನ್ನು ಕೊಂದು ಶರೀರದ...

ಪಿಎಚ್ಡಿ ವಿದ್ಯಾರ್ಥಿಯನ್ನು ಕೊಂದು ಶರೀರದ ಭಾಗಗಳನ್ನು ಮೂರು ಕಡೆ ಎಸೆದಿದ್ದ ಆರೋಪಿಯ ಬಂಧನ

15 Dec 2022 7:13 PM IST
share
ಪಿಎಚ್ಡಿ ವಿದ್ಯಾರ್ಥಿಯನ್ನು ಕೊಂದು ಶರೀರದ ಭಾಗಗಳನ್ನು ಮೂರು ಕಡೆ ಎಸೆದಿದ್ದ ಆರೋಪಿಯ ಬಂಧನ

ಘಾಝಿಯಾಬಾದ್: ಉ.ಪ್ರದೇಶದ ಘಾಝಿಯಾಬಾದ್ ಜಿಲ್ಲೆಯ ಮೋದಿನಗರದ ತನ್ನ ಮನೆಯಲ್ಲಿ ಬಾಡಿಗೆಗಿದ್ದ ಪಿಎಚ್ಡಿ ವಿದ್ಯಾರ್ಥಿಯನ್ನು ಕೊಂದು ಶರೀರದ ತುಂಡುಗಳನ್ನು ನಾಲೆಗೆ ಎಸೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ ಎರಡು ತಿಂಗಳುಗಳ ಬಳಿಕ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಉಮೇಶ ಶರ್ಮಾ ಬಂಧಿತ ಆರೋಪಿಯಾಗಿದ್ದು, ಕೊಲೆಯಾಗಿರುವ ವಿದ್ಯಾರ್ಥಿಯನ್ನು ಅಂಕಿತ್ ಖೋಕರ್ ಎಂದು ಗುರುತಿಸಲಾಗಿದೆ.

ಖೋಕರ್ ಇತ್ತೀಚಿಗೆ ಬಾಘಪತ್ನಲ್ಲಿಯ ತನ್ನ ಪೂರ್ವಜರ  ಆಸ್ತಿಯನ್ನು ಒಂದು ಕೋಟಿ ರೂ.ಗಳಿಗೆ ಮಾರಾಟ ಮಾಡಿದ್ದು,ಈ ಹಣದ ಮೇಲೆ ಶರ್ಮಾ ಕಣ್ಣಿರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶರ್ಮಾನ ಸ್ನೇಹಿತ ಪರ್ವೇಶ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ತನ್ನ ಹೆತ್ತವರ ನಿಧನದ ಬಳಿಕ ಖೋಕರ್ ಒಂಟಿಯಾಗಿ ವಾಸವಾಗಿದ್ದು,ಲಕ್ನೋದ ವಿವಿಯೊಂದರಲ್ಲಿ ಪಿಎಚ್ಡಿ ವಿದ್ಯಾರ್ಥಿಯಾಗಿದ್ದ.

ವಾರಗಟ್ಟಲೆ ತಮ್ಮ ಕರೆಗಳಿಗೆ ಖೋಕರ್ ಉತ್ತರಿಸದಿದ್ದಾಗ ಶಂಕಿತ ಸ್ನೇಹಿತರು ಆತನಿಗಾಗಿ ಹುಡುಕಾಟ ಆರಂಭಿಸಿದ್ದರು. ಖೋಕರ್ನ ಮೊಬೈಲ್ ಸಂಖ್ಯೆಯಿಂದ ಅವರಿಗೆ ಕೆಲವು ಸಂದೇಶಗಳು ಬರಲು ಆರಂಭವಾಗಿದ್ದರೂ,ಸಂಭಾಷಣೆಯ ಶೈಲಿ ಆತನದಾಗಿರಲಿಲ್ಲ. ಇದು ಗೊತ್ತಾದಾಗ ಶೋಧದಲ್ಲಿ ಪೊಲೀಸರೂ ಭಾಗಿಯಾಗಿದ್ದರು.

ಖೋಕರ್ ಶರ್ಮಾನಿಗೆ 40 ಲ.ರೂ.ಗಳ ಸಾಲವನ್ನು ನೀಡಿದ್ದ. ಖೋಕರ್ ಎಲ್ಲಿಗೆ ಹೋಗಿದ್ದಾನೆ ಎನ್ನುವುದು ತನಗೆ ತಿಳಿದಿಲ್ಲ ಎಂದು ಶರ್ಮಾ ಆತನ ಸ್ನೇಹಿತರಿಗೆ ತಿಳಿಸಿದ್ದ.

ಶರ್ಮಾ ಅ.6ರಂದು ಖೋಕರ್ನನ್ನು ಉಸಿರುಗಟ್ಟಿಸಿ ಕೊಂದ ಬಳಿಕ ಗರಗಸದಿಂದ ಶರೀರವನ್ನು ಕನಿಷ್ಠ ಮೂರು ಭಾಗಗಳನ್ನಾಗಿಸಿ ಅಲ್ಯುಮಿನಿಯಂ ಹಾಳೆಯಲ್ಲಿ ಸುತ್ತಿದ್ದ. ಒಂದು ಭಾಗವನ್ನು ಮುಝಫ್ಫರ್ನಗರದ ನಾಲೆಯಲ್ಲಿ,ಇನ್ನೊಂದನ್ನು ಮಸ್ಸೂರಿ ನಾಲೆಯಲ್ಲಿ ಮತ್ತು ಮೂರನೇ ಭಾಗವನ್ನು ಎಕ್ಸಪ್ರೆಸ್ವೇದಲ್ಲಿ ಎಸೆದಿದ್ದ ಎಂದು ಪೊಲೀಸರು ತಿಳಿಸಿದರು. ಖೋಕರ್ ಶರೀರದ ಭಾಗಗಳನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ.

ಶರ್ಮಾ ಖೋಕರ್ನ ಎಟಿಎಂ ಕಾರ್ಡ್ ಬಳಸಿ ಆತನ ಖಾತೆಯಿಂದ ಕಂತುಗಳಲ್ಲಿ 20 ಲ.ರೂ.ಗಳನ್ನು ತೆಗೆದಿದ್ದ. ಬಳಿಕ ಕಾರ್ಡನ್ನು  ಪರ್ವೇಶ್ಗೆ ನೀಡಿ ಉತ್ತರಾಖಂಡದಲ್ಲಿ ಇನ್ನಷ್ಟು ಹಣ ತೆಗೆಯುವಂತೆ ಸೂಚಿಸಿದ್ದ. ಖೋಕರ್ ನಾಪತ್ತೆಯ ಬಗ್ಗೆ ದೂರು ದಾಖಲಾದರೆ ತನಿಖೆಯ ಹಾದಿ ತಪ್ಪಿಸಲು ಆತನ ಮೊಬೈಲ್ ಫೋನ್ ನ್ನು  ಜೊತೆಗೆ ಒಯ್ಯುವಂತೆಯೂ ಶರ್ಮಾ ಪರ್ವೇಶ್ಗೆ ತಿಳಿಸಿದ್ದ ಎಂದು ಡಿಸಿಪಿ ಇರಜ್ ರಾಜಾ ಸುದ್ದಿಗಾರರಿಗೆ ತಿಳಿಸಿದರು.

ಇದನ್ನು ಓದಿ: ವೋಟರ್ ಐಡಿ ಹಗರಣ ಮರೆಮಾಚಲು "ಕುಕ್ಕರ್ ಸ್ಫೋಟ ನಾಟಕ": ಡಿಕೆಶಿ ಆರೋಪ

share
Next Story
X