Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: ಕಳ್ಳಭಟ್ಟಿ ದುರಂತ; ಮೃತರ ಸಂಖ್ಯೆ...

ಬಿಹಾರ: ಕಳ್ಳಭಟ್ಟಿ ದುರಂತ; ಮೃತರ ಸಂಖ್ಯೆ 65ಕ್ಕೆ ಏರಿಕೆ

16 Dec 2022 11:45 PM IST
share
ಬಿಹಾರ: ಕಳ್ಳಭಟ್ಟಿ ದುರಂತ; ಮೃತರ ಸಂಖ್ಯೆ 65ಕ್ಕೆ ಏರಿಕೆ

ಪಾಟ್ನಾ, ಡಿ. 16:  ಬಿಹಾರದ ಛಾಪ್ರಾದಲ್ಲಿ ಕಳ್ಳ ಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದ  ಮತ್ತೆ 11 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳ್ಳ ಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. 

ಮಂಗಳವಾರ ರಾತ್ರಿ ಕಳ್ಳಭಟ್ಟಿ ದುರಂತ ಸಂಭವಿಸಿದ ಬಳಿಕ ಮರೌರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಯೋಗೇಂದ್ರ ಕುಮಾರ್ ಅವರ  ಶಿಫಾರಸಿನಂತೆ ಮಸ್ರಖ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರಿತೇಶ್ ಮಿಶ್ರಾ ಹಾಗೂ ಕಾನ್‌ಸ್ಟೆಬಲ್ ವಿಕೇಶ್ ತಿವಾರಿ ಅವರನ್ನು ಅಮಾನತುಗೊಳಿಸಲಾಗಿದೆ. 
ಬಿಹಾರದಲ್ಲಿ ನಿತೀಶ್ ಕುಮಾರ್ ಸರಕಾರ  ಮದ್ಯ ಮಾರಾಟ ಹಾಗೂ ಬಳಕೆಯನ್ನು 2016 ಎಪ್ರಿಲ್‌ನಲ್ಲಿ ನಿಷೇಧಿಸಿದೆ. ಆದುದರಿಂದ ಈ ಕಳ್ಳಭಟ್ಟಿ ದುರಂತ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೋಲಾಹಲ ಉಂಟು ಮಾಡಿದೆ. 

ರಾಜ್ಯ ಸಭೆಯಲ್ಲಿ ಗುರುವಾರ ಬಿಜೆಪಿ ಸಂಸದರು ಕಳ್ಳ ಭಟ್ಟಿ ದುರಂತದ ಕುರಿತಂತೆ  ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   ಛಾಪ್ರಾ ಕಳ್ಳ ಭಟ್ಟಿ ದುರಂತದ ಬಗ್ಗೆ ಪ್ರಶ್ನಿಸಿದಾಗ ನಿತೀಶ್ ಕುಮಾರ್ ಅವರು, ಮದ್ಯ ಕುಡಿದವರು ಸಾವನ್ನಪ್ಪುತಾರೆ ಎಂದು ಹೇಳಿಕೆ ನೀಡಿದ್ದರು. 
ಮದ್ಯ ನಿಷೇಧ ಹಲವರಿಗೆ ಪ್ರಯೋಜನವಾಗಿದೆ. ದೊಡ್ಡ ಸಂಖ್ಯೆಯ ಜನರು ಮದ್ಯ ವರ್ಜಿಸಿದ್ದಾರೆ. ಇದು ಉತ್ತಮ. ಹಲವರು ಇದನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಆದರೆ, ಸಮಸ್ಯೆ ಸೃಷ್ಟಿಸುವವರು ಕೂಡ ಇದ್ದಾರೆ. ನಿಜವಾಗಿ ಸಮಸ್ಯೆ ಸೃಷ್ಟಿಸುವವರನ್ನು ಗುರುತಿಸಿ ಹಾಗೂ ಬಂಧಿಸಿ ಎಂದು ನಾನು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್ ಅವರು ಪಟ್ನಾದಲ್ಲಿ ಗುರುವಾರ ಮಾದ್ಯಮಕ್ಕೆ ತಿಳಿಸಿದ್ದರು.  

ಪರಿಹಾರ ಇಲ್ಲ: ನಿತೀಶ್ ಕುಮಾರ್ 

ವಿಧಾನ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್,  ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ. ಮದ್ಯ ಕುಡಿದರೆ, ನೀವು ಸಾಯುತ್ತೀರಿ. ಮದ್ಯ ಕುಡಿಯುವುದನ್ನು ಬೆಂಬಲಿಸಿ ಮಾತನಾಡುವವರು ನಿಮಗೆ ಯಾವುದೇ ಒಳ್ಳೆಯದನ್ನು ಮಾಡಲಾರರು ಎಂದಿದ್ದಾರೆ. 

ಎನ್‌ಎಚ್‌ಆರ್‌ಸಿ ನೋಟಿಸ್ 

ಕಳ್ಳ ಭಟ್ಟಿ ದುರಂತಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಬಿಹಾರ ಸರಕಾರ ಹಾಗೂ ರಾಜ್ಯ ಪೊಲೀಸ್ ವರಿಷ್ಠರಿಗೆ ನೋಟಿಸು ಜಾರಿ ಮಾಡಿದೆ.

share
Next Story
X